12:07 PM Monday5 - June 2023
ಬ್ರೇಕಿಂಗ್ ನ್ಯೂಸ್
ರೈಲು ದುರಂತ ಗಾಯಾಳುಗಳ ಪ್ರಧಾನಿ ಮೋದಿ ಭೇಟಿ: ಯೋಗಕ್ಷೇಮ ವಿಚಾರಣೆ; ಮಡಿದವರಿಗೆ 10… ಕಡಲನಗರಿ ಕುಡ್ಲದಲ್ಲಿ 2 ದಿನಗಳ ‘ಹಲಸಿನ ಹಬ್ಬ’; ಜಾಕ್ ಫ್ರುಟ್ ಐಸ್ ಕ್ರೀಂ,… ಫಲ್ಗುಣಿ ನದಿಗೆ ರುಚಿ ಗೋಲ್ಡ್ ತ್ಯಾಜ್ಯ ವಿಸರ್ಜಿಸುವ ಕೊಳವೆ ಪತ್ತೆ: ನಾಗರಿಕ ಹೋರಾಟ… ಒಡಿಸ್ಸಾ ರೈಲು ದುರಂತ: ಕಳಸದಿಂದ ಸಮೇದ್ ಶಿಖರ್ಜಿ ಯಾತ್ರೆಗೆ ತೆರಳಿದ್ದ 110 ಮಂದಿ… ಇವರೇ ಅದೃಷ್ಟವಂತ 110 ಮಂದಿ ಕನ್ನಡಿಗರು!: ಒಡಿಶಾದಲ್ಲಿ ಭೀಕರ ದುರಂತಕ್ಕೀಡಾದ ರೈಲಿನ ಪ್ರಯಾಣಿಕರು;… ಒಡಿಶಾ: ಭೀಕರ ರೈಲು ದುರಂತ; ಕರ್ನಾಟಕದ 110 ಮಂದಿ ಕನ್ನಡಿಗ ಪ್ರಯಾಣಿಕರು ಸೇಫ್ ಲೋಕಸಭೆ ಚುನಾವಣೆ: ನಳಿನ್, ಡಿವಿ, ಮಂಗಳಾ ಅಂಗಡಿ ಸಹಿತ 10ಕ್ಕೂ ಹೆಚ್ಚು ಸಂಸದರು… ಮಾಣಿ: ಬಾಲವಿಕಾಸ ಅಂಗ್ಲ ಮಾಧ್ಯಮ ಶಾಲೆ ಕಚೇರಿ ಉದ್ಘಾಟನೆ; ವೆಲ್ ಕಮ್ ಡೇ… 5 ಲಕ್ಷ ರೂ. ವಂಚನೆ ಪ್ರಕರಣ: ಪೋಲಿಸ್ ಕಾನ್ ಸ್ಟೇಬಲ್ ಸಹಿತ 3… ಮುಡಾ ಉದ್ಯೋಗಿ ನೇಣಿಗೆ ಶರಣು: ಅನಾರೋಗ್ಯದಿಂದ ಬೇಸೆತ್ತು ಆತ್ಮಹತ್ಯೆ?

ಇತ್ತೀಚಿನ ಸುದ್ದಿ

ಮಡಂತ್ಯಾರು: ರಾಷ್ಟ್ರೀಯ ಮತದಾರರ ದಿನಾಚರಣೆ; ರಸ್ತೆ ಜಾಥಾ, ಬೀದಿ ನಾಟಕ

26/01/2023, 11:51

ಪುಂಜಾಲಕಟ್ಟೆ(reporterkarnataka.com): ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇದರ ರಾಷ್ಟ್ರೀಯ ಸೇವಾ ಯೋಜನೆ, ಭಾರತೀಯ ಯುವ ರೆಡ್ ಕ್ರಾಸ್ , ಮತದಾರರ ಸಾಕ್ಷರತಾ ಸಂಘ ಮತ್ತು ದತ್ತು ಗ್ರಾಮವಾದ ಗ್ರಾಮ ಪಂಚಾಯತ್ ಮಡಂತ್ಯಾರು, ಗ್ರಾಮ ಪಂಚಾಯತ್ ಮಾಲಾಡಿ ಹಾಗೂ ಜೆಸಿಐ ಮಡಂತ್ಯಾರು ಇದರ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ರಸ್ತೆ ಜಾಥಾ ಮತ್ತು ಬೀದಿ ನಾಟಕವನ್ನು ಹಮ್ಮಿಕೊಳ್ಳಲಾಯಿತು.

ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಟಿ ಕೆ. ಶರತ್ ಕುಮಾರ್ ವಹಿಸಿ ಪ್ರಜಾಪ್ರಭುತ್ವದಲ್ಲಿ ಮತದಾನದ ಮಹತ್ವವನ್ನು ತಿಳಿಸಿದರು.


ಮಡಂತ್ಯಾರ್ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಪ್ರಭ ಮತ್ತು ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬೇಬಿ ಸುಸಾನ ಅವರು ಹೊಸ ಮತದಾರರಿಗೆ ಗುರುತಿನ ಚೀಟಿ ನೀಡುವ ಮುಖಾಂತರ ಮತ್ತು ಮತದಾನದ ಭಿತ್ತಿ ಪತ್ರವನ್ನು ಹಸ್ತಾಂತರಿಸುವ ಮುಖಾಂತರ ಸಾಂಕೇತಿಕವಾಗಿ ರಸ್ತೆ ಜಾಥಾಕ್ಕೆ ಚಾಲನೆ ನೀಡಿದರು. ಗ್ರಾಮ ಪಂಚಾಯತ್ ಮಡಂತ್ಯಾರ್ ಇದರ ಪಿಡಿಓ ಪುರುಷೋತ್ತಮ ಜಿ. ಪ್ರಸ್ತಾವಿಕ ನುಡಿಗಳನ್ನು ಆಡಿದರು. ರಾಜಶೇಖರ್ ರೈ (ಪಿಡಿಓ ಗ್ರಾಮ ಪಂಚಾಯತ್ ಮಾಲಾಡಿ) ಅವರು ಮತದಾನದ ದಿನಾಚರಣೆಯ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.

ಮಡಂತ್ಯಾರ್ ಬಸ್ಸು ನಿಲ್ದಾಣದ ಆವರಣದಲ್ಲಿ ಮತದಾನದ ಮಹತ್ವದ ಕುರಿತು ಸ್ವಯಂಸೇವಕರಿಂದ ಬೀದಿ ನಾಟಕ ಪ್ರದರ್ಶನ ನಡೆಯಿತು ಕಾರ್ಯಕ್ರಮದಲ್ಲಿ ಸಂಗೀತಾ ಎ. ಶೆಟ್ಟಿ (ಉಪಾಧ್ಯಕ್ಷರು ,ಗ್ರಾಮ ಪಂಚಾಯತ್ ಮಡಂತ್ಯಾರು), ಅಶೋಕ್ (ಅಧ್ಯಕ್ಷರು ಜೆಸಿಐ ಮಡಂತ್ಯಾರ್), ಪಂಚಾಯಿತಿ ಸದಸ್ಯರು ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿಗಳಾದ ಸಂತೋಷ್ ಪ್ರಭು ಎಂ, ಚಿತ್ರಾ ಪಡಿಯಾರ್ ,ಭಾರತೀಯ ಯುವ ರೆಡ್ ಕ್ರಾಸ್ ನ ಸಂಚಾಲಕರಾದ ಡಾ. ವೈಶಾಲಿ ಯು ಹಾಗೂ ಎಲ್ಲಾ ಬೋಧಕ ಮತ್ತು ಬೋಧಕೇತರ ವೃಂದದವರು ಹಾಗೂ ಸ್ವಯಂಸೇವಕರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು