10:29 PM Tuesday21 - March 2023
ಬ್ರೇಕಿಂಗ್ ನ್ಯೂಸ್
ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾದರೆ ಕಂಟ್ರೋಲ್ ರೂಮ್‍ಗೆ ಕರೆ ಮಾಡಿ ದೂರು ನೀಡಿ ಲಕ್ಷ್ಮಣ ಸವದಿ ಬುದ್ದಿವಂತ ರಾಜಕಾರಣಿ, ಆದರೆ ಯಾಕೆ ಹಿಂಗೆ ಮಾಡುತ್ತಿದ್ದಾರೆ ಗೊತ್ತಿಲ್ಲ: ಮಾಜಿ… ಬಂಟ್ವಾಳ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ: ಶಾಸಕ ರಾಜೇಶ್ ನಾಯ್ಕ್… ಮಂಗಳೂರು ಉತ್ತರ ಸಂಚಾರಿ ಠಾಣೆ ನೂತನ ಕಟ್ಟಡ: ಶಾಸಕ ಡಾ. ಭರತ್ ಶೆಟ್ಟಿ… ಪಾಲಿಕೆ ಕಂಬ್ಳ ವಾರ್ಡ್‌ನಲ್ಲಿ ರಾಜ ಕಾಲುವೆ ತಡೆಗೋಡೆ ನಿರ್ಮಾಣ: ಶಾಸಕ ವೇದವ್ಯಾಸ ಕಾಮತ್… ಬಂಟ್ವಾಳ ಪ್ರಜಾಧ್ವನಿ ಯಾತ್ರೆ: ಪಣೋಲಿಬೈಲ್ ದೈವಸ್ಥಾನಕ್ಕೆ ಮಾಜಿ ಸಚಿವ ರಮಾನಾಥ ರೈ ಭೇಟಿ;… ಎಎಪಿ ಮೊದಲ ಪಟ್ಟಿ ಬಿಡುಗಡೆ: ಮಂಗಳೂರು ದಕ್ಷಿಣ ಕ್ಷೇತ್ರದಿಂದ ಸಂತೋಷ್ ಕಾಮತ್, ಮೂಡಬಿದರೆಯಿಂದ… ಜನಸಾಮಾನ್ಯರ ತಾಸುಗಟ್ಟಲೆ ಕಾಯಿಸಿದ ಪಾಲಿಕೆ ಕಮಿಷನರ್: ಸಾರ್ವಜನಿಕರಿಂದ ತರಾಟೆ, ತೀವ್ರ ಆಕ್ಷೇಪ ಕನ್ಯಾನದಲ್ಲಿ ಬಂಟ್ವಾಳ ಪ್ರಜಾಧ್ವನಿ 9ನೇ ದಿನದ ಯಾತ್ರೆ: ಅಪಪ್ರಚಾರದ ಮೂಲಕ ನನ್ನ ಸೋಲಿಸಲಾಯಿತು:… ಕನ್ನಡಿಗ ಛಾಯಾಗ್ರಾಹಕ, ‘ಪೊರ್ಲು’ ಖ್ಯಾತಿಯ ಜಿನೇಶ್ ಪ್ರಸಾದ್ ಗೆ ರಾಷ್ಟ್ರೀಯ ‘ಚಿತ್ರಾಂಜಲಿ ಪ್ರಶಸ್ತಿ’…

ಇತ್ತೀಚಿನ ಸುದ್ದಿ

ಅಥಣಿಯ ಹಲ್ಯಾಳ: ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಮಹೇಶ್ ಕುಮಟಳ್ಳಿ ಚಾಲನೆ

01/02/2023, 22:08

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಬಹುದಿನಗಳ ಬೇಡಿಕೆಯಾಗಿದ್ದ ಹಲ್ಯಾಳ ಗ್ರಾಮದಿಂದ ರೆಡ್ಡರಹಟ್ಟಿ ಗ್ರಾಮದವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಮಹೇಶ್ ಕುಮಠಳ್ಳಿ ಬುಧವಾರ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.
ಗ್ರಾಮದ ಬಿಜೆಪಿ ಯುವ ಮುಖಂಡರಾದ ಸಂಗಮೇಶ್ ಇಂಗಳಿ ಅವರ ಸತತ ಪ್ರಯತ್ನದಿಂದ ಗ್ರಾಮದಲ್ಲಿ ಹಲವಾರು ಕಾಮಗಾರಿಗಳನ್ನು ಅನುಷ್ಠಾನಗೊಳಿಸಿ ಗ್ರಾಮದ ಅಭಿವೃದ್ಧಿಗೆ ಬಹು ಮುಖ್ಯ ಪಾತ್ರ ವಹಿಸಿದ್ದಾರೆ.

ಈ ವೇಳೆ ಮಾತನಾಡಿದ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರೂ ಆಗಿರುವ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಅವರು ಹಲ್ಯಾಳ ಗ್ರಾಮದಲ್ಲಿ ಎಲ್ಲಾ ಪ್ರಮುಖ ಕಾಮಗಾರಿಗಳನ್ನು ಕಾರ್ಯಗತಿಗೆ ತರಲಾಗಿದೆ. ಬಹುದಿನಗಳಿಂದ ಗ್ರಾಮಕ್ಕೆ ಒಂದು ಪದವಿಪೂರ್ವ ಮಹಾವಿದ್ಯಾಲಯದ ಅವಶ್ಯಕತೆ ಇದೆ ಎಂದು ಮಾಹಿತಿ ಇದ್ದು ಈಗಾಗಲೇ 11 ಕಾಲೇಜುಗಳ ಮುಂಜರಾತಿಗೆ ಸರಕಾರಕ್ಕೆ ಮನವಿಯನ್ನ ಸಲ್ಲಿಸಿದ್ದೇನೆ. ಮುಂಬರುವ ದಿನಗಳಲ್ಲಿ ಹಲ್ಯಾಳ ಗ್ರಾಮಕ್ಕೆ ಗ್ರಾಮಕ್ಕೆ ಪದವಿ ಪೂರ್ವ ಕಾಲೇಜು ಮಂಜೂರು ಮಾಡಿಕೊಡಲಾಗುವುದೆಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಮುದಕಣ್ಣ ಸೇಗುಣಿಸಿ, ಊರಿನ ಪ್ರಮುಖರು ಕುಮಾರಗೌಡ ಪಾಟೀಲ, ಸುರೇಶ್ ವಾಡೆದ, ರಾವಸಾಬ ಪಾಟೀಲ, ದೀಪಕ್ ಮುರಗುಂಡಿ, ಸಿದ್ದಪ್ಪ ಲೋಕುರ ರಮೇಶ್ ಗುಮಚಿ, ಅಣ್ಣಪ್ಪ ಬಾಗಿ, ಮಾಂತೇಶ ಇಂಗಳಿ, ಸಂತೋಷ್ ಕಾಂಬಳೆ ರಾಹುಲ್ ಮಾದರ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು