4:27 PM Thursday18 - April 2024
ಬ್ರೇಕಿಂಗ್ ನ್ಯೂಸ್
ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ… ಮಂಗಳೂರಿನಲ್ಲಿ ನಾಳೆ ‘ಇಂಡಿಯಾ’ ಘಟಕ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳಿಂದ ‘ಬಿಜೆಪಿ…

ಇತ್ತೀಚಿನ ಸುದ್ದಿ

ಅಥಣಿಯ ಹಲ್ಯಾಳ: ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಮಹೇಶ್ ಕುಮಟಳ್ಳಿ ಚಾಲನೆ

01/02/2023, 22:08

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಬಹುದಿನಗಳ ಬೇಡಿಕೆಯಾಗಿದ್ದ ಹಲ್ಯಾಳ ಗ್ರಾಮದಿಂದ ರೆಡ್ಡರಹಟ್ಟಿ ಗ್ರಾಮದವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಮಹೇಶ್ ಕುಮಠಳ್ಳಿ ಬುಧವಾರ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.
ಗ್ರಾಮದ ಬಿಜೆಪಿ ಯುವ ಮುಖಂಡರಾದ ಸಂಗಮೇಶ್ ಇಂಗಳಿ ಅವರ ಸತತ ಪ್ರಯತ್ನದಿಂದ ಗ್ರಾಮದಲ್ಲಿ ಹಲವಾರು ಕಾಮಗಾರಿಗಳನ್ನು ಅನುಷ್ಠಾನಗೊಳಿಸಿ ಗ್ರಾಮದ ಅಭಿವೃದ್ಧಿಗೆ ಬಹು ಮುಖ್ಯ ಪಾತ್ರ ವಹಿಸಿದ್ದಾರೆ.

ಈ ವೇಳೆ ಮಾತನಾಡಿದ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರೂ ಆಗಿರುವ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಅವರು ಹಲ್ಯಾಳ ಗ್ರಾಮದಲ್ಲಿ ಎಲ್ಲಾ ಪ್ರಮುಖ ಕಾಮಗಾರಿಗಳನ್ನು ಕಾರ್ಯಗತಿಗೆ ತರಲಾಗಿದೆ. ಬಹುದಿನಗಳಿಂದ ಗ್ರಾಮಕ್ಕೆ ಒಂದು ಪದವಿಪೂರ್ವ ಮಹಾವಿದ್ಯಾಲಯದ ಅವಶ್ಯಕತೆ ಇದೆ ಎಂದು ಮಾಹಿತಿ ಇದ್ದು ಈಗಾಗಲೇ 11 ಕಾಲೇಜುಗಳ ಮುಂಜರಾತಿಗೆ ಸರಕಾರಕ್ಕೆ ಮನವಿಯನ್ನ ಸಲ್ಲಿಸಿದ್ದೇನೆ. ಮುಂಬರುವ ದಿನಗಳಲ್ಲಿ ಹಲ್ಯಾಳ ಗ್ರಾಮಕ್ಕೆ ಗ್ರಾಮಕ್ಕೆ ಪದವಿ ಪೂರ್ವ ಕಾಲೇಜು ಮಂಜೂರು ಮಾಡಿಕೊಡಲಾಗುವುದೆಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಮುದಕಣ್ಣ ಸೇಗುಣಿಸಿ, ಊರಿನ ಪ್ರಮುಖರು ಕುಮಾರಗೌಡ ಪಾಟೀಲ, ಸುರೇಶ್ ವಾಡೆದ, ರಾವಸಾಬ ಪಾಟೀಲ, ದೀಪಕ್ ಮುರಗುಂಡಿ, ಸಿದ್ದಪ್ಪ ಲೋಕುರ ರಮೇಶ್ ಗುಮಚಿ, ಅಣ್ಣಪ್ಪ ಬಾಗಿ, ಮಾಂತೇಶ ಇಂಗಳಿ, ಸಂತೋಷ್ ಕಾಂಬಳೆ ರಾಹುಲ್ ಮಾದರ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು