11:05 PM Tuesday21 - March 2023
ಬ್ರೇಕಿಂಗ್ ನ್ಯೂಸ್
ನಾಗಠಾಣ, ಇಂಡಿಯಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ; ಮಾಜಿ ಡಿಸಿಎಂ ಸವದಿ ನೇತೃತ್ವದಲ್ಲಿ… ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾದರೆ ಕಂಟ್ರೋಲ್ ರೂಮ್‍ಗೆ ಕರೆ ಮಾಡಿ ದೂರು ನೀಡಿ ಲಕ್ಷ್ಮಣ ಸವದಿ ಬುದ್ದಿವಂತ ರಾಜಕಾರಣಿ, ಆದರೆ ಯಾಕೆ ಹಿಂಗೆ ಮಾಡುತ್ತಿದ್ದಾರೆ ಗೊತ್ತಿಲ್ಲ: ಮಾಜಿ… ಬಂಟ್ವಾಳ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ: ಶಾಸಕ ರಾಜೇಶ್ ನಾಯ್ಕ್… ಮಂಗಳೂರು ಉತ್ತರ ಸಂಚಾರಿ ಠಾಣೆ ನೂತನ ಕಟ್ಟಡ: ಶಾಸಕ ಡಾ. ಭರತ್ ಶೆಟ್ಟಿ… ಪಾಲಿಕೆ ಕಂಬ್ಳ ವಾರ್ಡ್‌ನಲ್ಲಿ ರಾಜ ಕಾಲುವೆ ತಡೆಗೋಡೆ ನಿರ್ಮಾಣ: ಶಾಸಕ ವೇದವ್ಯಾಸ ಕಾಮತ್… ಬಂಟ್ವಾಳ ಪ್ರಜಾಧ್ವನಿ ಯಾತ್ರೆ: ಪಣೋಲಿಬೈಲ್ ದೈವಸ್ಥಾನಕ್ಕೆ ಮಾಜಿ ಸಚಿವ ರಮಾನಾಥ ರೈ ಭೇಟಿ;… ಎಎಪಿ ಮೊದಲ ಪಟ್ಟಿ ಬಿಡುಗಡೆ: ಮಂಗಳೂರು ದಕ್ಷಿಣ ಕ್ಷೇತ್ರದಿಂದ ಸಂತೋಷ್ ಕಾಮತ್, ಮೂಡಬಿದರೆಯಿಂದ… ಜನಸಾಮಾನ್ಯರ ತಾಸುಗಟ್ಟಲೆ ಕಾಯಿಸಿದ ಪಾಲಿಕೆ ಕಮಿಷನರ್: ಸಾರ್ವಜನಿಕರಿಂದ ತರಾಟೆ, ತೀವ್ರ ಆಕ್ಷೇಪ ಕನ್ಯಾನದಲ್ಲಿ ಬಂಟ್ವಾಳ ಪ್ರಜಾಧ್ವನಿ 9ನೇ ದಿನದ ಯಾತ್ರೆ: ಅಪಪ್ರಚಾರದ ಮೂಲಕ ನನ್ನ ಸೋಲಿಸಲಾಯಿತು:…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟ್ ನಲ್ಲಿ ಯುವಕನ ಶವ ಪತ್ತೆ: ಬೆಂಗಳೂರಿನ ಯುವಕನ ಅಪಹರಿಸಿ ಕೊಲೆ; ಪ್ರೇಮ ಪ್ರಕರಣ ಹತ್ಯೆಗೆ ಕಾರಣ

01/02/2023, 15:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka agnail.com

ಅಪಹರಣಕ್ಕೊಳಗಾಗಿ ದುಷ್ಕರ್ಮಿಗಳಿಂದ ಹತ್ಯೆ ಗೀಡಾದ ಬೆಂಗಳೂರಿನ ಯುವಕನ ಮೃತದೇಹ ಚಾರ್ಮಾಡಿ ಘಾಟಿಯ ರಸ್ತೆಯ ಪಕ್ಕದ ಕಂದಕದಲ್ಲಿ ಪತ್ತೆಯಾಗಿದ್ದು, ಮೃತದೇಹವನ್ನು ಬೆಂಗಳೂರಿಗೆ ಸಾಗಿಸಲಾಗಿದೆ.
ಕೊಲೆಗೀಡಾದ ಯುವಕನನ್ನು ಬೆಂಗಳೂರಿನ ಮತ್ರಿ ಕೆರೆ ನಿವಾಸಿ ಗೋವಿಂದರಾಜು(19) ಎಂದು ಗುರುತಿಸಲಾಗಿದೆ. ಗೋವಿಂದರಾಜು ಸಂಬಂಧಿಕ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಆ ಯುವತಿಗೆ ಮೆಸೇಜ್ ಮಾಡಿದ್ದಕ್ಕೆ ಯುವಕನ ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.


ಗೋವಿಂದರಾಜು ಅವರನ್ನು ಬೆಂಗಳೂರಿನಿಂದ ಸಂಬಂಧಿಕರೇ ಅಪಹರಣ ನಡೆಸಿದ್ದರು. ಈ ಕುರಿತು ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಗೋವಿಂದರಾಜುಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು. ಆದರೆ ಅಪಹರಣಕಾರರು ಗೋವಿಂದರಾಜು ಅವರನ್ನು ಕೊಲೆ ಮಾಡಿ ಮೃತದೇಹವನ್ನು ಚಾರ್ಮಾಡಿ ಘಾಟಿಯ ಪ್ರಪಾತಕ್ಕೆ ಎಸೆದಿದ್ದರು. ಈ ಹಿನ್ನೆಲೆಯಲ್ಲಿ ನಾಲ್ವರು ಆರೋಪಿಗಳನ್ನ ಚಾರ್ಮಾಡಿ ಘಾಟ್ಗೆ ಯಶವಂತಪುರ ಪೊಲೀಸರು ಕರೆದು ತಂದಿದ್ದರು‌.

ಏನಿದು ಪ್ರಕರಣ?: ಕೊಲೆಯಾದ ಗೋವಿಂದರಾಜು ಕುಟುಂಬದಲ್ಲಿಯೇ ಹುಡುಗಿಯೊಬ್ಬಳನ್ನು ಪ್ರೀತೀಸಿದ್ದ. ಇದನ್ನು ಸಹಿಸದ ಕುಟುಂಬದ ಅನಿಲ್ ಕುಮಾರ್, ಭರತ್ ಹಾಗೂ ಮತ್ತಿಬ್ಬರು ಆರೋಪಿಗಳು ಕಳೆದ ಸೋಮವಾರ ಮತ್ತಿಕೆರೆಯಿಂದ ಗೋವಿಂದರಾಜನನ್ನು ಅಪಹರಿಸಿ ರಾಜ್ ಗೋಪಾಲ್ ನಗರದ ಅಂದರಳ್ಳಿಯಲ್ಲಿ ಕೊಲೆ ಮಾಡಿ ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟಿಯ ಮಲಯ ಮಾರುತದ ಬಳಿ ವಾಹನದಲ್ಲಿ ದೇಹ ತಂದು ಬಿಸಾಕಿ ಪರಾರಿಯಾಗಿದ್ದರು. ಕುಟುಂಬದವರು ಗೋವಿಂದರಾಜು ಕಾಣೆಯಾಗಿರುವ ಬಗ್ಗೆ ಯಶವಂತಪುರ ಠಾಣೆಗೆ ದೂರು ನೀಡಿದ್ದರು. ಕುಟುಂಬದವರಿಗೆ ಅನಿಲ್ ಕುಮಾರ್ ಮೇಲೆ ಅನುಮಾನವಿದ್ದರಿಂದ ಪೊಲೀಸರು ಅವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಭರತ್ ಮತ್ತಿತರ ಇಬ್ಬರು ಆರೋಪಿಗಳು ತಪ್ಪನ್ನು ಒಪ್ಪಿಕೊಂಡಿದ್ದು ಬುಧವಾರ ಆರೋಪಿಗಳನ್ನು ಚಾರ್ಮಾಡಿ ಘಾಟಿಗೆ ಕರೆ ತಂದು ಯಶವಂತಪುರ ಠಾಣೆಯ ಸಬ್ ಇನ್ ಸ್ಪೆಕ್ಟರ್ ಮಹೇಶ್ ಅವರ ತಂಡ ಸ್ಥಳೀಯ ಸಮಾಜ ಸೇವಕರ ಜತೆ ಸೇರಿ ಮೃತದೇಹವನ್ನು ಮೇಲೆತ್ತಿ ಆಸ್ಪತ್ರೆಗೆ ಸಾಗಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು