9:25 AM Saturday20 - April 2024
ಬ್ರೇಕಿಂಗ್ ನ್ಯೂಸ್
ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ

ಇತ್ತೀಚಿನ ಸುದ್ದಿ

ಕಾರ್ಕಳ: ತಮಿಳುನಾಡು ಮೂಲದ ಲಾರಿ ಚಾಲಕನ ಇರಿದು ಕೊಲೆ; ಇನ್ನೋರ್ವ ಚಾಲಕನ ಮೇಲೆ ಶಂಕೆ

01/02/2023, 09:40

ಕಾರ್ಕಳ(reporterkarnataka.com) ಲಾರಿ ಚಾಲಕನನ್ನು ಆಯುಧದಿಂದ ಇರಿದು ಕೊಲೆಗೈದ ಘಟನೆ ಕಾರ್ಕಳ ತಾಲೂಕಿನ ಮುಡಾರು ಗ್ರಾಮದ ಮುಡ್ರಾಲು ಸಮೀಪದ ಗೇರುಬೀಜ ಪ್ಯಾಕ್ಟರಿ ಬಳಿ ನಡೆದಿದೆ.
ತಮಿಳುನಾಡು ಮೂಲದ ಮಣಿ (36) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.

ಮುಡ್ರಾಲುನ ಫ್ಯಾಕ್ಟರಿ ಗೆ ಪ್ರತಿವರ್ಷವೂ ತಮಿಳುನಾಡಿನಿಂದ ಗೇರು ಬೀಜ ಲೋಡ್ ಬರುತ್ತಿದ್ದು ಅವರುಗಳು ಲಾರಿಯಲ್ಲಿ ಅನ್‌ಲೋಡ್ ಮಾಡಿ ಹೋಗುತ್ತಿದ್ದರು. ಅದರಂತೆ ಜ.30ರಂದು ಸಂಜೆ 4:00 ಗಂಟೆಗೆ ಗೇರುಬೀಜದ ಲೋಡ್ ಇರುವ ಲಾರಿಗಳು ಬಂದಿದ್ದು ಅವರುಗಳು ಅನ್ ಲೋಡ್ ಮಾಡಿ ಹೋಗಿದ್ದು ಇನ್ನೆರಡು ಲಾರಿಗಳು ಸಂಜೆ 5:30 ಗಂಟೆಗೆ ಬಂದಿದ್ದು ತಡವಾದ್ದರಿಂದ ಲಾರಿಯು ಅನ್‌ಲೋಡ್ ಆಗದೇ ಫ್ಯಾಕ್ಟರಿಯ ಬಳಿ ನಿಂತುಕೊಂಡಿತ್ತು. ಲಾರಿಗಳ ಚಾಲಕ ಹಾಗೂ ಬದಲಿ ಚಾಲಕರುಗಳು ಕೂಡಾ ಅಲ್ಲಿಯೇ ಇದ್ದು ರಾತ್ರಿ 8:30 ಗಂಟೆಗೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡುವ ಕಾರ್ಮಿಕರೋರ್ವರಿಗೆ ಫ್ಯಾಕ್ಟರಿಯ ಮೇಲ್ಗಡೆ ಕೆಲಸ ಮಾಡುತ್ತಿರುವಾಗ ಲಾರಿ ನಿಲ್ಲಿಸಿದ ಸ್ಥಳದಿಂದ ಜೋರಾಗಿ ಬೊಬ್ಬೆ ಕೇಳಿಸಿದ್ದು, ಅಲ್ಲಿಗೆ ಹೋಗಿ ನೋಡಿದಾಗ ಲಾರಿಯ ಚಾಲಕ ಮಣಿ (36) ಲಾರಿಯ ಎದುರುಗಡೆ ಆತನ ಕುತ್ತಿಗೆಗೆ ಶಾಲ್ ಬಿಗಿದು ಯಾವುದೋ ಆಯುಧದಿಂದ ಇರಿದು ಕೊಲೆ ಮಾಡಿರುವುದು ಕಂಡುಬಂದಿದೆ.

ಲಾರಿಯ ಇನ್ನೋರ್ವ ಚಾಲಕ ವೀರಬಾಹು ಹಾಗೂ ಮೃತ ಮಣಿ ಗಲಾಟೆ ಮಾಡಿಕೊಳ್ಳುತ್ತಿದ್ದು, ಯಾವುದೋ ಕಾರಣದಿಂದ ಲಾರಿಯ ಇನ್ನೋರ್ವ ಚಾಲಕ ವೀರಬಾಹು ಮಣಿಯನ್ನು ಕೊಲೆ ಮಾಡಿರುವ ಬಗ್ಗೆ ಸಂಶಯ ವ್ಯಕ್ತವಾಗಿದ್ದು ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು