9:23 AM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಚಿತ್ರಾಪುರ ದುರ್ಗಾಪರಮೇಶ್ವರಿ ದೇಗುಲ ಆಮಂತ್ರಣ ಪತ್ರಿಕೆ ಬಿಡುಗಡೆ: ಪೇಜಾವರ ಶ್ರೀ, ಶಾಸಕ ಡಾ. ಭರತ್ ಶೆಟ್ಟಿ ಉಪಸ್ಥಿತಿ

08/02/2023, 20:40

ಸುರತ್ಕಲ್(reporterkarnataka.com):
ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಮಂತ್ರಣ ಪತ್ರಿಕೆಯನ್ನು ಬುಧವಾರ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು, ಚಿತ್ರಾಪುರ ಮಠದ ಶ್ರೀ ವಿದ್ಯೇಂದ್ರ ಶ್ರೀಪಾದರು ಹಾಗೂ ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರು ದೇವಸ್ಥಾನದಲ್ಲಿ ಬಿಡುಗಡೆಗೊಳಿಸಿದರು.

ಶಾಸಕರೂ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರೂ ಆದ ಡಾ. ಭರತ್ ಶೆಟ್ಟಿ ವೈ. ಮಾತನಾಡಿ, ಕ್ಷೇತ್ರದಲ್ಲಿ 2 ಕೋಟಿ ರೂ. ಸರಕಾರದ ಅನುದಾನ ಮತ್ತು ಭಕ್ತರು ದಾನಿಗಳ ಅಂದಾಜು 8-10 ಕೋಟಿ ರೂ.ಗಳ ನೆರವಿನಿಂದ ಜೀರ್ಣೋದ್ಧಾರ ಸಮಿತಿ ಮುಂದಾಳತ್ವ , ಸ್ವಾಮೀಜಿಗಳ ಮಾರ್ಗದರ್ಶನದಲ್ಲಿ ಅಭಿವೃದ್ಧಿ ಕಾರ್ಯಗಳು ಪೂರ್ಣಗೊಳ್ಳುವ ಹಂತದಲ್ಲಿದೆ. ಮುಂದೆ 15 ದಿನಗಳ ಕಾಲ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮಗಳು ಇದೇ ರೀತಿ ಭಕ್ತರ, ಹಿಂದೂ ಸಂಘಟನೆಗಳ ಮತ್ತು ಮೊಗವೀರ ಸಮಾಜ ಬಾಂಧವರಿಂದ ಸಹಕಾರದಲ್ಲಿ ಯಶಸ್ವಿಯಾಗಿ ನಡೆಯಬೇಕೆಂದರು.


ಕಾರ್ಪೋರೇಟರ್ ಸುಮಿತ್ರಾ ಕರಿಯ, ಪ್ರಮುಖರಾದ ಉಮೇಶ್ ಟಿ. ಕರ್ಕೇರ, ವಿಷ್ಣುಮೂರ್ತಿ ಏಗಳ್, ಲಕ್ಷ್ಮಣ ಅಮೀನ್, ಭರತ್ ಕುಮಾರ್, ಕೇಶವ ಸಾಲಿಯಾನ್, ಗಣೇಶ್ ಹೊಸಬೆಟ್ಟು, ಎನ್. ಆರ್ ಪುರುಷೋತ್ತಮ, ಹೆಚ್ ಎಲ್ ರಾವ್, ದೇವಿಪ್ರಸಾದ್ ಶೆಟ್ಟಿ, ಹರೀಶ್ ಶೆಟ್ಟಿ, ಸುರೇಶ್, ಕೃಷ್ಣ ಶೆಟ್ಟಿ, ಶ್ರೀಧರ್ ದೇವಾಡಿಗ, ಮೋಹನ್ ಕರ್ಕೇರ, ರೋಹಿದಾಸ್ ಸಾಲಿಯಾನ್, ಚಂದ್ರಶೇಖರ ಎಂಸಿಸಿ, ಓಂದಾಸ್ ಕಾಂಚನ್, ಹರೀಶ್ಚಂದ್ರ ಕರ್ಕೇರ, ದಿನೇಶ್ ಕರ್ಕೇರ, ಆಶಾಕಿರಣ ರೈ, ಪವಿತ್ರ ಕೋಡಿಕೆರೆ, ಶಿವಾಜಿ ದೇವಾಡಿಗ, ನಿಶ್ಚಲ್ ನಿಖಿಲ್, ದಿವಾಕರ್ ಉದ್ಯಾವರ, ಲೀಲಾಧರ ಕೋಡಿಕಲ್, ಚಂದ್ರಹಾಸ್ ಕರ್ಕೇರ, ಗಿರೀಶ್ ಶ್ರೀಯನ್, ಸುಕುಮಾರ್ ದೇವಾಡಿಗ, ಸಂತೋಷ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು