11:00 PM Friday3 - May 2024
ಬ್ರೇಕಿಂಗ್ ನ್ಯೂಸ್
ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ…

ಇತ್ತೀಚಿನ ಸುದ್ದಿ

ವಿಜಯ ಸಂಕಲ್ಪ ಟ್ರೋಫಿ: ಶಾಸಕ ಡಾ. ಭರತ್ ಶೆಟ್ಟಿ ಉಪಸ್ಥಿತಿ; 48 ವಾಲಿಬಾಲ್ ತಂಡಗಳು ಭಾಗಿ

22/02/2023, 09:22

ಸುರತ್ಕಲ್(reporterkarnataka.com):
ಶಾಸಕ ಡಾ. ವೈ ಭರತ್ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಕೇಸರಿ ಸಾಗರದ ವಿರಾಟ್ ಶಕ್ತಿ‌ ಪ್ರದರ್ಶನವಾದಂತೆ ಕಂಡ ವಿಜಯ ಸಂಕಲ್ಪ ಟ್ರೋಫಿ ನಭೂತೋ ನಭವಿಷ್ಯತಿ ಎಂಬಂತೆ ಅತ್ಯಂತ ಯಶಸ್ವಿಯಾಗಿ‌ ಜರುಗಿತು.

ಪಂದ್ಯಾಕೂಟವನ್ನು ಪಕ್ಷದ ಹಿರಿಯರ ಸಮ್ಮುಖದಲ್ಲಿ ಉದ್ಘಾಟಿಸಲಾಯಿತು.
ಮಹಾಶಕ್ತಿ ಕೇಂದ್ರದ ಮುಖಂಡರ ಸಮರ್ಥ ಮುಂದಾಳತ್ವದಲ್ಲಿ ಇಂಟರ್ ಶಕ್ತಿ ಕೇಂದ್ರ ಮಟ್ಟದ 48 ವಾಲಿಬಾಲ್ ತಂಡಗಳು‌ ಬಿರುಸಿನ ಸ್ಪರ್ಧೆಯನ್ನು ನೀಡಿದವು.


ನಾರಳಪದವಿನ ಆಳ್ವಾಸ್ ಕ್ರೀಡಾಂಗಣದಲ್ಲಿ ಹೊನಲು ಬೆಳಕಿನಲ್ಲಿ ನಡೆದ ಪಂದ್ಯಾಟಗಳು ಭಾಜಪಾ‌ ಕಾರ್ಯಕರ್ತರಲ್ಲಿ‌ ಕ್ರೀಡಾಸ್ಫೂರ್ತಿಯನ್ನು ತುಂಬಿದವು. ಭಾರತೀಯ ಜನತಾ ಪಾರ್ಟಿಯ ಹಿರಿಯರು, ಬೂತ್ ಅದ್ಯಕ್ಷರು, ಕಾರ್ಯದರ್ಶಿ,ಶಕ್ತಿ ಕೇಂದ್ರ ಪ್ರಮುಖ್, ಸಹ ಪ್ರಮುಖ್, ಮಂಡಲ ಪದಾಧಿಕಾರಿಗಳು, ಜನಪ್ರತಿನಿಧಿ ಗಳನ್ನು ಗೌರವಿಸಲಾಯಿತು.
ಉತ್ತರ ಮಂಡಲ‌ ಅಧ್ಯಕ್ಷರಾದ ತಿಲಕರಾಜ್ ಕೃಷ್ಣಾಪುರ, ಪ್ರಮುಖರಾದ ಕಸ್ತೂರಿ ಪಂಜ, ಪಕ್ಷದ ವಿವಿಧ ಮೋರ್ಚಾಗಳ ಮುಖಂಡರು, ಗಣ್ಯರು, ಕಾರ್ಯಕರ್ತರು, ನಾಗರಿಕರು ‌ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು