5:49 PM Friday29 - March 2024
ಬ್ರೇಕಿಂಗ್ ನ್ಯೂಸ್
ನಂಜನಗೂಡು: ಕಳಲೆ ಜಾತ್ರಾ ಮಹೋತ್ಸವದಲ್ಲಿ ನಡೆದ ಅದ್ದೂರಿ ತೇರಡಿ ಉತ್ಸವ ಕಾಜೂರು ದರ್ಗಾಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ: ಚುನಾವಣಾ ಉಸ್ತುವಾರಿ ರಮಾನಾಥ… ವಿಶಾಖಪಟ್ಟಣದಿಂದ ತಂದ 6 ಕೆಜಿಗೂ ಅಧಿಕ ಗಾಂಜಾ ವಶ: ಆರೋಪಿ ಬಂಧನ; 9… ಚುನಾವಣೆಗೆ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್: ಸಚಿವ ತಂಗಡಗಿ ಹೇಳಿಕೆಗೆ ಶಾಸಕ ಹರೀಶ್ ಪೂಂಜ… ಕುಕ್ಕೆ ಸುಬ್ರಹ್ಮಣ್ಯಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ; ಹೊಸಳಿಗಮ್ಮ… ಮಂಗಳೂರು: ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡ ಬಳಿಕ ಮೊದಲ ಬಾರಿ ಆಗಮಿಸಿದ ಡಾ. ಮಂಜುನಾಥ… ಜೆಡಿಎಸ್ ಸ್ಪರ್ಧಿಸಲಿರುವ 3 ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ: ಮಂಡ್ಯದಿಂದ ಕುಮಾರಸ್ವಾಮಿ, ಹಾಸನದಿಂದ ಪ್ರಜ್ವಲ್… ಮನೆಯಲ್ಲಿ ಅಕ್ರಮ ನಾಡ ಬಂದೂಕು: ಬಣಕಲ್ ಸಮೀಪದ ವ್ಯಕ್ತಿಯ ಬಂಧನ ಅಭಿವೃದ್ಧಿ ಮತ್ತು ಕಾಂಗ್ರೆಸ್- ಎರಡೂ ವಿರೋಧ ಪದಗಳು: ಬಿಜೆಪಿ ರಾಜ್ಯ ಪ್ರಕೋಷ್ಠ ಸಂಚಾಲಕ… ಲೋಕಸಭೆ ಚುನಾವಣೆ: ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟನೆ: ಹಿರಿಯ ಮುತ್ಸದ್ಧಿ ಜನಾರ್ದನ ಪೂಜಾರಿ…

ಇತ್ತೀಚಿನ ಸುದ್ದಿ

ಶಾರ್ಜಾದಲ್ಲಿ ಅಂತಾರಾಷ್ಟೀಯ ಪ್ಯಾರಾ ಅಥ್ಲೆಟಿಕ್: ಚಿಕ್ಕಮಗಳೂರಿನ ರಾಧಾಗೆ ಚಿನ್ನ, ರಕ್ಷಿತಾ ರಾಜುಗೆ ಬೆಳ್ಳಿ

23/02/2023, 19:12

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ದುಬೈಯ ಶಾರ್ಜಾದಲ್ಲಿ ಬುಧವಾರ ನಡೆದ ಅಂತರಾಷ್ಟ್ರೀಯ ಪ್ಯಾರಾ ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಚಿಕ್ಕಮಗಳೂರಿನ ಆಶಾ ಕಿರಣ ಅಂಧ ಶಾಲೆಯ ವಿದ್ಯಾರ್ಥಿನಿಯರಾದ ರಾಧಾ ವೆಂಕಟೇಶ್ ಪ್ರಥಮ ಹಾಗೂ ರಕ್ಷಿತಾರಾಜು ದ್ವಿತೀಯ ಸ್ಥಾನ ಪಡೆದು ಅಕ್ಟೋಬರ್ ನಲ್ಲಿ ಚೀನಾದಲ್ಲಿ ನಡೆಯುವ ಪ್ಯಾರಾ ಏಷ್ಯನ್ ಗೇಮ್ಸ್ ಗೆ ಆಯ್ಕೆಯಾಗಿದ್ದಾರೆ.

ಬೆಂಗಳೂರಿನ ಸಾಯಿ ಕ್ರೀಡಾ ಹಾಸ್ಟೆಲ್ ನಲ್ಲಿ ಕ್ರೀಡಾಭ್ಯಾಸ ಮಾಡುತ್ತಿರುವ ಈ ಇಬ್ಬರು ವಿದ್ಯಾರ್ಥಿನಿಯರು ಕೋಚ್ ರಾಹುಲ್ ಬಾಲಕೃಷ್ಣ, ಗೋವಿಂದ್, ಸೌಮ್ಯ ಸಾವಂತ್,ಗೈಡ್ ರನ್ನರ್ ತಬರೇಶ್ ಗರಡಿಯಲ್ಲಿ ಕ್ರೀಡೆಯಲ್ಲಿ ಸಾಧನೆ ಮಾಡುತ್ತಿದ್ದು ಕಳೆದ ಬಾರಿ ದೆಹಲಿಯಲ್ಲಿ ನಡೆದ 400ಮೀ,800ಮೀ ಹಾಗೂ 1500ಮೀ ಓಟದಲ್ಲಿ ಚಿನ್ನದ ಪದಕ ಪಡೆದಿದ್ದರು. ಬುಧವಾರ ಶಾರ್ಜಾದಲ್ಲಿ ನಡೆದ ಅಂತರಾಷ್ಟ್ರೀಯ ಪ್ಯಾರಾ ಅಥ್ಲೆಟಿಕ್ಸ್ ಮೀಟ್ ನಲ್ಲಿ ಟಿ12 ವಿಭಾಗದ ಕ್ರೀಡಾಕೂಟದ 1500 ಮೀ ಓಟದಲ್ಲಿ ರಾಧಾವೆಂಕಟೇಶ್ 5:16,77 ನಿಮಿಷದಲ್ಲಿ ಕ್ರಮಿಸಿ ಚಿನ್ನದ ಪದಕ ಪಡೆದಿದ್ದಾರೆ.ಟಿ11 ವಿಭಾಗದ 1500ಮೀ ಓಟದಲ್ಲಿ ರಕ್ಷಿತಾರಾಜು 5:44,67ನಿಮಿಷದಲ್ಲಿ ಗುರಿ ಮುಟ್ಟುವ ಮೂಲಕ ಬೆಳ್ಳಿ ಪದಕ ಪಡೆದು ಜಿಲ್ಲೆಗೆ ಮಾತ್ರವಲ್ಲದೇ ರಾಜ್ಯಕ್ಕೂ ಕೀರ್ತಿ ತಂದಿದ್ದಾರೆ.ರಾಧಾ ವೆಂಕಟೇಶ್ ಮೂಲತ: ಚಿತ್ರದುರ್ಗದ ಹೊಳಲ್ಕೆರೆ ಯವರಾಗಿದ್ದು,ರಕ್ಷಿತಾ ರಾಜು ಮೂಡಿಗೆರೆ ತಾಲ್ಲೂಕಿನ ಬಾಳೂರು ಸಮೀಪದ ಗುಡ್ನಳ್ಳಿ ಗ್ರಾಮದವರಾಗಿದ್ದಾರೆ. ಇವರ ಸಾಧನೆಗೆ ಆಶಾ ಕಿರಣ ಶಾಲೆಯ ಆಡಳಿತ ವರ್ಗ ಹಾಗೂ ಸಿಬ್ಬಂದಿ ವರ್ಗ ಹಾಗೂ ಕ್ರೀಡಾಭಿಮಾನಿಗಳು ಪ್ರಶಂಸೆ ವ್ಯಕ್ತ ಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು