1:29 PM Monday5 - June 2023
ಬ್ರೇಕಿಂಗ್ ನ್ಯೂಸ್
ರೈಲು ದುರಂತ ಗಾಯಾಳುಗಳ ಪ್ರಧಾನಿ ಮೋದಿ ಭೇಟಿ: ಯೋಗಕ್ಷೇಮ ವಿಚಾರಣೆ; ಮಡಿದವರಿಗೆ 10… ಕಡಲನಗರಿ ಕುಡ್ಲದಲ್ಲಿ 2 ದಿನಗಳ ‘ಹಲಸಿನ ಹಬ್ಬ’; ಜಾಕ್ ಫ್ರುಟ್ ಐಸ್ ಕ್ರೀಂ,… ಫಲ್ಗುಣಿ ನದಿಗೆ ರುಚಿ ಗೋಲ್ಡ್ ತ್ಯಾಜ್ಯ ವಿಸರ್ಜಿಸುವ ಕೊಳವೆ ಪತ್ತೆ: ನಾಗರಿಕ ಹೋರಾಟ… ಒಡಿಸ್ಸಾ ರೈಲು ದುರಂತ: ಕಳಸದಿಂದ ಸಮೇದ್ ಶಿಖರ್ಜಿ ಯಾತ್ರೆಗೆ ತೆರಳಿದ್ದ 110 ಮಂದಿ… ಇವರೇ ಅದೃಷ್ಟವಂತ 110 ಮಂದಿ ಕನ್ನಡಿಗರು!: ಒಡಿಶಾದಲ್ಲಿ ಭೀಕರ ದುರಂತಕ್ಕೀಡಾದ ರೈಲಿನ ಪ್ರಯಾಣಿಕರು;… ಒಡಿಶಾ: ಭೀಕರ ರೈಲು ದುರಂತ; ಕರ್ನಾಟಕದ 110 ಮಂದಿ ಕನ್ನಡಿಗ ಪ್ರಯಾಣಿಕರು ಸೇಫ್ ಲೋಕಸಭೆ ಚುನಾವಣೆ: ನಳಿನ್, ಡಿವಿ, ಮಂಗಳಾ ಅಂಗಡಿ ಸಹಿತ 10ಕ್ಕೂ ಹೆಚ್ಚು ಸಂಸದರು… ಮಾಣಿ: ಬಾಲವಿಕಾಸ ಅಂಗ್ಲ ಮಾಧ್ಯಮ ಶಾಲೆ ಕಚೇರಿ ಉದ್ಘಾಟನೆ; ವೆಲ್ ಕಮ್ ಡೇ… 5 ಲಕ್ಷ ರೂ. ವಂಚನೆ ಪ್ರಕರಣ: ಪೋಲಿಸ್ ಕಾನ್ ಸ್ಟೇಬಲ್ ಸಹಿತ 3… ಮುಡಾ ಉದ್ಯೋಗಿ ನೇಣಿಗೆ ಶರಣು: ಅನಾರೋಗ್ಯದಿಂದ ಬೇಸೆತ್ತು ಆತ್ಮಹತ್ಯೆ?

ಇತ್ತೀಚಿನ ಸುದ್ದಿ

ರಾಜಕೀಯ ತೆವಳಿಗೆ ಆರಾಧ್ಯ ದೇವರಿಗೆ ಅವಮಾನ ಮಾಡಿದರೆ ಕ್ಷಮೆ ಇರದು: ಜೆಡಿಎಸ್ ಮುಖಂಡೆ ಡಾ. ಸುಮತಿ ಹೆಗ್ಡೆ

24/02/2023, 23:39

ಮಂಗಳೂರು(reporterkarnataka.com): ಶತಮಾನಗಳಿಂದ ತುಳುನಾಡ ಜನರು ಆರಾಧಿಸುತ್ತಾ ಬಂದಿರುವ ನಾಗಬನ , ಪಂಜುರ್ಲಿ ದೈವಗಳ ಹೆಸರಲ್ಲಿ ತನ್ನ ರಾಜಕೀಯ ತೆವಳು ತೀರಿಸುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿಯವರ ನಡೆಯು ತುಳುನಾಡ ಜನರಿಗೆ ಅತ್ಯಂತ ನೋವನ್ನು ತಂದಿದೆ ಎಂದು ಜೆಡಿಎಸ್ ಮಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರದ ಅಧ್ಯಕ್ಷೆ ಸುಮತಿ ಎಸ್. ಹೆಗ್ಡೆ ಹೇಳಿದ್ದಾರೆ.

ಆಚಾರ ವಿಚಾರವಿಲ್ಲದ ಜನರಿಂದ ಮಾತ್ರ ಇಂತಹ ನಡೆಯನ್ನು ನಿರೀಕ್ಷೆ ಮಾಡಬಹುದು. ಅದೇ ರೀತಿ ತುಳು ಭಾಷೆಯ ಬಗ್ಗೆ ವ್ಯಂಗ್ಯವಾಗಿ ಮಾತಾಡಿದ ಸಚಿವ ಮಾಧುಸ್ವಾಮಿಯವರು ಕೂಡ ತಮ್ಮ ನೈಜ ಸ್ವಭಾವವನ್ನು ವ್ಯಕ್ತಪಡಿಸುತ್ತಿದ್ದಾರೆ.ಈ ರೀತಿಯ ರಾಜಕಾರಣವು ಅತ್ಯಂತ ಕೀಳು ಮಟ್ಟದ್ದಾಗಿದೆ. ಇದರ ಗಂಭೀರ ಪರಿಣಾಮವನ್ನು ಬರುವ ಚುನಾವಣೆಯಲ್ಲಿ ಎದುರಿಸಬೇಕಾದಿತು ಎಂದು
ಡಾ‌ ಸುಮತಿ ಹೆಗ್ಡೆ ಅವರು ಎಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು