1:54 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಜಮೀನಿಗಾಗಿ ವಿಧವೆಯ ಅರೆ ಬೆತ್ತಲೆಗೊಳಿಸಿ ಹಲ್ಲೆ: ಕ್ರಮ ಕೈಗೊಳ್ಳದ ಪೊಲೀಸರು!; ಆರೋಪಿ ಪರ ನಿಂತ್ರಾ ಖಾಕಿ ಅಧಿಕಾರಿಗಳು..?

25/02/2023, 09:58

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.ಕಾಂ

ಓರ್ವ ವಿಧವೆ ಹಾಗೂ ಮಗಳನ್ನ ಜಮೀನಿನ ವ್ಯಾಜ್ಯದ ಸಲುವಾಗಿ ಸಂಬಂಧಿಕರೇ ಅರೆಬೆತ್ತಲಾಗಿ ಥಳಿಸಿ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ, ಅವರ ವಿರುದ್ದ ದೂರು ನೀಡಿದ್ರೂ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳದೆ ಅವರ ಬೆಂಬಲವಾಗಿ ನಿಂತಿದೆ ಎಂದು ಶಾಂತವ್ವ ನಾಗಪ್ಪ ಮಾಂಗ ಎಂಬ ಮಹಿಳೆ ಆರೋಪಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಘಟನಟ್ಟಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ ಶಾಂತವ್ವ ನಾಗಪ್ಪ ಮಾಂಗ್ ಎಂಬ ವಿಧವೆಯ ಜಮೀನು ವಶಪಡಿಸಿಕೊಳ್ಳಲು ಗಂಡನ ಅಣ್ಣತಮ್ಮಂದಿರಾದ ಲಕ್ಕಪ್ಪ ಬಾಬು ಮಾಂಗ, ಭೀಮಪ್ಪ ಲಕ್ಕಪ್ಪ ಮಾಂಗ, ಹಣಮಂತ ಲಕ್ಕಪ್ಪ ಮಾಂಗ ಎಂಬುವವರು ಸಂತ್ರಸ್ತೆ ಶಾಂತವ್ವ ಹಾಗೂ ಅವಳ ಅಪ್ರಾಪ್ತ ಮಗಳ ಎದೆಗೆ ಕೈ ಹಾಕಿ, ಜಡೆ ಹಿಡಿದು ಬಡಿಗೆಯಿಂದು ಬಡಿದು ಹಲ್ಲೆ ಮಾಡಿದ್ದರಿಂದ ಕಳೆದ ಮೂರು ದಿನದಿಂದ ಪ್ರಜ್ಞೆ ತಪ್ಪಿದ್ದಾಳೆ. ಈ ಕುರಿತು ಅಥಣಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮೂರು ದಿನಗಳಾಗಿದೆ. ಆರೋಪಿತರು ಪೋಲಿಸ್ ಠಾಣೆ ಸುತ್ತಮುತ್ತ ತಿರುಗುತ್ತಿದ್ದರೂ ಸಹ ಬಂಧನ ಮಾಡದೆ ಅವರನ್ನು ಪರಾರಿಯಾಗಲು ಬಿಟ್ಟಿದ್ದಾರೆ ಎಂದು ಸಂತ್ರಸ್ತ ಮಹಿಳೆ ಪೊಲೀಸ್ ಇಲಾಖೆ ಕಾರ್ಯವೈಖರಿ ಪ್ರಶ್ನಿಸುವಂತಹ ಗಂಭೀರ ಆರೋಪ ಮಾಡಿದ್ದಾಳೆ.


ಹಲ್ಲೆಗೊಳಗಾದ ಅಪ್ರಾಪ್ತ ಯುವತಿ ಹಾಗೂ ಸಂತ್ರಸ್ತೆಯ ಆರೋಗ್ಯ ಪರಿಸ್ಥಿತಿ ಗಂಭಿರವಾಗಿದ್ದು, ಅಥಣಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿಜವಾಗಿಯೂ ಪೊಲೀಸ್ ಇಲಾಖೆ ಆರೋಪಿತರನ್ನು ರಕ್ಷಿಸುತ್ತಿದೆಯಾ ? ಹಾಗೂ ಮಹಿಳಾ ಆಯೋಗ ಏನ್ಮಾಡ್ತಿದೆ ? ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು