ಇತ್ತೀಚಿನ ಸುದ್ದಿ
ಬಿಜೆಪಿಯಿಂದ ಯುಗಾದಿ ಸೀರೆ ಹಂಚಿಕೆ: ಗ್ರಾಮಸ್ಥರ ಆರೋಪ; ಸೀರೆಗೆ ಬೆಂಕಿ ಹಚ್ಚಿ ಮತದಾರನಿಂದ ಆಕ್ರೋಶ
08/03/2023, 19:15
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.ಕಾಂ
ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಭಕ್ತರಹಳ್ಳಿ, ಮಲ್ಲೇನಹಳ್ಳಿ ಬಿಜೆಪಿಯಿಂದ ಯುಗಾದಿ ಹಬ್ಬದ ಪ್ರಯುಕ್ತ ಗ್ರಾಮಸ್ಥರಿಗೆ ಸೀರೆ ಹಂಚಿಕೆ ಆರೋಪ ಕೇಳಿ ಬಂದಿದ್ದು, ವ್ಯಕ್ತಿಯೊಬ್ಬರು ಸೀರೆಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೀರೆ ಸುಟ್ಟ ವ್ಯಕ್ತಿ ಬಿಜೆಪಿ ಮುಖಂಡರಿಗೆ ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಇತರ ಮತದಾರರು ಕೂಡ ಸಾಥ್ ನೀಡಿದ್ದಾರೆ. ಕೊರೋನಾ ವೇಳೆ 1 ಕೆಜಿ ಅಕ್ಕಿ ಕೊಡುವ ಯೋಗ್ಯತೆಯಿಲ್ಲದ ನೀವು ಸೀರೆ ಹಂಚಿಕೆ ಮಾಡ್ತೀರಾ ಎಂದು ಮತದಾರರು ಬಿಜೆಪಿ ಮುಖಂಡರಿಗೆ ಮಂಗಳಾರತಿ ಎತ್ತಿದ್ದಾರೆ.
ಯುಗಾದಿ ಹಬ್ಬಕ್ಕಾಗಿ ಬಿಜೆಪಿಯಿಂದ ಮತದಾರರಿಗೆ ಸೀರೆ ಗಿಫ್ಟ್ ನೀಡಲಾಗಿದೆ ಎನ್ನಲಾಗಿದೆ. ಆದರೆ ಸೀರೆ ಹಂಚಿಕೆ ಮಾಡಿದ್ದಕ್ಕೆ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೀರೆಯನ್ನ ರಸ್ತೆಯಲ್ಲಿ ಸುಟ್ಟು ಆಕ್ರೋಶ ವ್ಯಕ್ತಪಡಿಸಲಾಗಿದೆ.
ಎಲೆಕ್ಷನ್ ಬಂತು ಅಂತ ಸೀರೆ ಹಂಚಿಕೆ ಮಾಡ್ತೀರಾ
ಶಾಸಕ ಸಿ.ಟಿ.ರವಿ ಬೆಂಬಲಿಗರಿಗೆ ಮತದಾರರು ಕ್ಲಾಸ್ ತೆಗೆದುಕೊಂಡಿದ್ದಾರೆ.