2:58 PM Thursday2 - May 2024
ಬ್ರೇಕಿಂಗ್ ನ್ಯೂಸ್
ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ…

ಇತ್ತೀಚಿನ ಸುದ್ದಿ

ಉಪ್ಪಿನಂಗಡಿ: ಬಾಲಕಿಯ ಅತ್ಯಾಚಾರ ಯತ್ನ; ಇಬ್ಬರು ಆರೋಪಿಗಳ ಬಂಧನ, ಪೋಕ್ಸೋ ದಾಖಲು

13/03/2023, 17:48

ಪುತ್ತೂರು(reporterkarnataka.com): ಮನೆಗೆ ನುಗ್ಗಿ ಬಾಲಕಿಯೋರ್ವಳನ್ನು ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಕಡಬ ತಾಲೂಕಿನ ಕೊಯಿಲ ಗ್ರಾಮದ ನಿವಾಸಿಗಳಾದ ಹಸೈನಾರ್ (24) ಹಾಗೂ ಅಬ್ಬಾಸ್ (30) ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಮರ ತುಂಡರಿಸುವ ಕೆಲಸ ಮೇಲೆ ಆರೋಪಿಗಳಿಬ್ಬರು ಕಳೆದ ಮೂರು ದಿನಗಳಿಂದ ಕರಾಯ ಗ್ರಾಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.ಈ ಸಂದರ್ಭ ನೀರು ಕೇಳುವ ನೆಪದಲ್ಲಿ ಸಂತ್ರಸ್ತ ಬಾಲಕಿಯ ಮನೆಗೆ ಹೋಗಿ ಮನೆಯಲ್ಲಿನ ಸದಸ್ಯರ ಬಗ್ಗೆ ಗಮನಿಸಿದ ಆರೋಪಿಗಳ ಪೈಕಿ ಹಸೈನಾರ್ ಶುಕ್ರವಾರ ಸಂಜೆ ಸಂತ್ರಸ್ತೆಯ ಮನೆಗೆ ಬಂದು ಮರ ತುಂಡರಿಸುವ ಚೈನ್ ಇಲ್ಲಿ ಬಾಕಿಯಾಗಿದೆ ಎಂದು ಹೇಳಿ ಬಾಲಕಿಯ ಕೈಗೆ ಚೀಟಿಯೊಂದನ್ನು ನೀಡಿ, ಈ ನಂಬ್ರರಿಗೆ ಫೋನ್ ಮಾಡು, ಇಲ್ಲದಿದ್ದರೆ ನಿನ್ನನ್ನು ಬಿಡುವುದಿಲ್ಲ ಎಂಬುವುದಾಗಿ ಜೀವ ಬೆದರಿಕೆಯೊಡ್ಡಿ ಹೋಗಿದ್ದ ಎಂದು ಬಾಲಕಿ ದೂರಿನಲ್ಲಿ ತಿಳಿಸಿದ್ದಾಳೆ.
ಇನ್ನು ಮರು ದಿನ ರಾತ್ರಿ 8 ಗಂಟೆಯ ಸುಮಾರಿಗೆ ಹಸೈನಾರ್ ತನ್ನ ಸಹಚರ ಅಬ್ಬಾಸ್ ಎಂಬಾತನೊಂದಿಗೆ ಮನೆಯ ಒಳಗೆ ಅಕ್ರಮವಾಗಿ ಪ್ರವೇಶ ಮಾಡಿ, ಬಾಲಕಿಯನ್ನು ಅತ್ಯಾಚಾರಕ್ಕೆ ಯತ್ನಿಸಿದರು. ಆಗ ಬಾಲಕಿ ಹಾಗೂ ಆಕೆಯ ತಾಯಿ ರಕ್ಷಣೆಗಾಗಿ ಬೊಬ್ಬೆ ಹೊಡೆದಾಗ ನೆರೆ ಮನೆಯವರು ಓಡಿ ಬಂದು ಬಾಲಕಿಯನ್ನು ರಕ್ಷಿಸಿದ್ದಾರೆ. ಬಳಿಕ ಸ್ಥಳೀಯರ ಸಹಕಾರದಿಂದ ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ‌.

ಇತ್ತೀಚಿನ ಸುದ್ದಿ

ಜಾಹೀರಾತು