10:21 PM Tuesday21 - March 2023
ಬ್ರೇಕಿಂಗ್ ನ್ಯೂಸ್
ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾದರೆ ಕಂಟ್ರೋಲ್ ರೂಮ್‍ಗೆ ಕರೆ ಮಾಡಿ ದೂರು ನೀಡಿ ಲಕ್ಷ್ಮಣ ಸವದಿ ಬುದ್ದಿವಂತ ರಾಜಕಾರಣಿ, ಆದರೆ ಯಾಕೆ ಹಿಂಗೆ ಮಾಡುತ್ತಿದ್ದಾರೆ ಗೊತ್ತಿಲ್ಲ: ಮಾಜಿ… ಬಂಟ್ವಾಳ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ: ಶಾಸಕ ರಾಜೇಶ್ ನಾಯ್ಕ್… ಮಂಗಳೂರು ಉತ್ತರ ಸಂಚಾರಿ ಠಾಣೆ ನೂತನ ಕಟ್ಟಡ: ಶಾಸಕ ಡಾ. ಭರತ್ ಶೆಟ್ಟಿ… ಪಾಲಿಕೆ ಕಂಬ್ಳ ವಾರ್ಡ್‌ನಲ್ಲಿ ರಾಜ ಕಾಲುವೆ ತಡೆಗೋಡೆ ನಿರ್ಮಾಣ: ಶಾಸಕ ವೇದವ್ಯಾಸ ಕಾಮತ್… ಬಂಟ್ವಾಳ ಪ್ರಜಾಧ್ವನಿ ಯಾತ್ರೆ: ಪಣೋಲಿಬೈಲ್ ದೈವಸ್ಥಾನಕ್ಕೆ ಮಾಜಿ ಸಚಿವ ರಮಾನಾಥ ರೈ ಭೇಟಿ;… ಎಎಪಿ ಮೊದಲ ಪಟ್ಟಿ ಬಿಡುಗಡೆ: ಮಂಗಳೂರು ದಕ್ಷಿಣ ಕ್ಷೇತ್ರದಿಂದ ಸಂತೋಷ್ ಕಾಮತ್, ಮೂಡಬಿದರೆಯಿಂದ… ಜನಸಾಮಾನ್ಯರ ತಾಸುಗಟ್ಟಲೆ ಕಾಯಿಸಿದ ಪಾಲಿಕೆ ಕಮಿಷನರ್: ಸಾರ್ವಜನಿಕರಿಂದ ತರಾಟೆ, ತೀವ್ರ ಆಕ್ಷೇಪ ಕನ್ಯಾನದಲ್ಲಿ ಬಂಟ್ವಾಳ ಪ್ರಜಾಧ್ವನಿ 9ನೇ ದಿನದ ಯಾತ್ರೆ: ಅಪಪ್ರಚಾರದ ಮೂಲಕ ನನ್ನ ಸೋಲಿಸಲಾಯಿತು:… ಕನ್ನಡಿಗ ಛಾಯಾಗ್ರಾಹಕ, ‘ಪೊರ್ಲು’ ಖ್ಯಾತಿಯ ಜಿನೇಶ್ ಪ್ರಸಾದ್ ಗೆ ರಾಷ್ಟ್ರೀಯ ‘ಚಿತ್ರಾಂಜಲಿ ಪ್ರಶಸ್ತಿ’…

ಇತ್ತೀಚಿನ ಸುದ್ದಿ

ಮಾ.21ರಂದು ಸಾರಿಗೆ ನೌಕರರ ಮುಷ್ಕರ; 23 ಸಾವಿರ ಕೆಎಸ್ಸಾರ್ಟಿಸಿ ಬಸ್ ರಸ್ತೆಗೆ ಇಳಿಯೊಲ್ಲ; ಅನಂತ ಸುಬ್ಬರಾವ್

17/03/2023, 14:11

ಬೆಂಗಳೂರು(reporterkarnataka.com): ವೇತನ ಪರಿಷ್ಕರಣೆ ಸೇರಿದಂತೆ ಸಾರಿಗೆ ನೌಕರರ ಎಲ್ಲ ಬೇಡಿಕೆಗಳನ್ನು ಈಡೇರಿಸದಿದ್ದರೆ ಮಾ. 21ರಂದು ಕರೆ ನೀಡಿರುವ ಸಾರಿಗೆ ಮುಷ್ಕರದಿಂದ ಹಿಂದೇ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸಾರಿಗೆ ನೌಕರರ ಸಂಘದ ಅಧ್ಯಕ್ಷ ಎಚ್.ವಿ. ಅನಂತ ಸುಬ್ಬರಾವ್ ಹೇಳಿದ್ದಾರೆ.
ಮಾ.21ಕ್ಕೆ ಮುಷ್ಕರ ಆರಂಭಗೊಳ್ಳುತ್ತದೆ. ಮುಖ್ಯಮಂತ್ರಿ ಅವರು ನೇರವಾಗಿ ನಮ್ಮ ಜೊತೆ ಸಭೆ ಮಾಡದೇ ಮೂಲವೇತನ ಶೇ.15ರಚ್ಡು ಹೆಚ್ಚಳ ಘೋಷಣೆ ಮಾಡಿದ್ದಾರೆ. ಸಿಎಂ ನಮ್ಮೊಂದಿಗೆ ಚರ್ಚೆಗೆ ಬರಬೇಕು. ಕೇವಲ ಒಂದು ಬೇಡಿಕೆ ಈಡೇರಿಸುವ ಆದೇಶ ಬಂದರೆ ನಮ್ಮ ಹೋರಾಟ ನಿಲ್ಲದು. ಈ ಹೋರಾಟಕ್ಕೆ ನಾಲ್ಕು ನಿಗಮಗಳ ನೌಕರರು ಬೆಂಬಲ ವ್ಯಕ್ತಪಡಿಸಿದ್ದು, ಮಾ.21ರಿಂದ 23 ಸಾವಿರ ಕೆಎಸ್ಸಾರ್ಟಿಸಿ ಬಸ್‍ಗಳು ರಸ್ತೆಗೆ ಇಳಿಯಲ್ಲ ಎಂದರು.
ಸರಕಾರ ಏಕಪಕ್ಷೀಯವಾಗಿ ಮೂಲ ವೇತನದ ಶೇ15ರಷ್ಟು ಹೆಚ್ಚಳವನ್ನು ಘೋಷಿಸಿರುವುದು ಮಾಧ್ಯಮಗಳಿಂದ ತಿಳಿದು ಬಂದಿದೆ. ಅಧಿಕೃತ ಆದೇಶವೇ ಬಂದಿಲ್ಲ. ಇನ್ನೂ ನೌಕರರ ಭತ್ಯೆ, ವಜಾಗೊಂಡವರ ಮರು ನೇಮಕ ಸೇರಿದಂತೆ ಹಲವು ಬೇಡಿಕೆಗಳು ಹಾಗೆಯೆ ಉಳಿದಿವೆ. ಈ ಹಿನ್ನೆಲೆಯಲ್ಲಿ ಎಲ್ಲ ಬೇಡಿಕೆಗಳು ಈಡೇರಿಸುವವರೆಗೆ ಸಾರಿಗೆ ನೌಕರರ ಸಂಘವು ಮಾ 21 ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲಿದೆ. ಜನರಿಗೆ ತೊಂದರೆ ಮಾಡುವ ಉದ್ದೇಶವಿಲ್ಲ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು