5:16 AM Thursday18 - April 2024
ಬ್ರೇಕಿಂಗ್ ನ್ಯೂಸ್
ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ…

ಇತ್ತೀಚಿನ ಸುದ್ದಿ

ಅಥಣಿ: ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ; ಪೊಲೀಸರಿಂದ ತನಿಖೆ ಶುರು

18/03/2023, 16:59

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com
ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ಯುವಕನೊಬ್ಬನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ.
ಆಕಾಶ ಮಹಾದೇವ ಮಿರ್ಜಿ(22) ಎಂಬ ವಿದ್ಯಾರ್ಥಿ ಯ ಶವ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅಥಣಿಯ ಎಸ್ ಎಸ್ ಎಂಎಸ್ ಕಾಲೇಜನಲ್ಲಿ ಕಾಮರ್ಸ್ ವಿಭಾಗದ ದ್ವಿತೀಯ ವರ್ಷದಲ್ಲಿ ಓದುತ್ತಿದ್ದು, ನಿನ್ನೆ ರಾತ್ರಿ ತಾಂವಶಿ ಗ್ರಾಮದ ಅನಂತಪೂರ ರಸ್ತೆ ಪರಮಾನಂದ ತೋಟ ಹತ್ತಿರ ನೇಣಿಗೆ ಕೊರಳೊಡ್ಡಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

ತಾಂವಶಿ ಗ್ರಾಮದ ಮಹಾದೇವ ಮಿರ್ಜಿ ಅವರಿಗೆ ಒಬ್ಬನೇ ಮಗನಾಗಿದ್ದು ತಂದೆ ಮಹಾದೇವ ಮಿರ್ಜಿ ಮೂರು ವರ್ಷದ ಹಿಂದೆ ಆಕಸ್ಮಿಕವಾಗಿ ಹೃದಯಾಘಾತದಿಂದ ನಿಧನ ಹೊಂದಿದ್ದರು.
ಕುಟುಂಬ ನಿಭಾಯಿಸುವ ಸಂಪೂರ್ಣ ಜವಾಬ್ದಾರಿ ಆಕಾಶ್ ಮೇಲಿತ್ತು. ಈಗ ಗಂಡನನ್ನು ಮತ್ತು ಮಗನನ್ನು ಕಳೆದುಕೊಂಡ ಮೃತ ಆಕಾಶ ತಾಯಿಯ ಆಕ್ರಂದನ ಮುಗಿಲುಮುಟ್ಟಿದೆ
ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸ್ ತನಿಖೆಯಿಂದ ಸಾವಿಗೆ ನಿಖರ ಕಾರಣ ಗೊತ್ತಾಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು