11:14 AM Friday19 - April 2024
ಬ್ರೇಕಿಂಗ್ ನ್ಯೂಸ್
ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ…

ಇತ್ತೀಚಿನ ಸುದ್ದಿ

ಉಡುಪಿ: ಹಿರಿಯ ಪತ್ರಕರ್ತ ಬಿ. ರವೀಂದ್ರ ಶೆಟ್ಟಿ ಅವರ ‘ನಮ್ಮ ಉಡುಪಿ’ ಕೃತಿ ನಾಳೆ ಬಿಡುಗಡೆ

18/03/2023, 11:46

ಮಂಗಳೂರು(reporterkarnataka.com) : ವಿಜಯ ಕರ್ನಾಟಕ ಸ್ಥಾನೀಯ ಸಂಪಾದಕ ಹಾಗೂ ಹಿರಿಯ ಪತ್ರಕರ್ತ ಬಿ. ರವೀಂದ್ರ ಶೆಟ್ಟಿ ಅವರ ‘ನಮ್ಮ ಉಡುಪಿ’ ಕೃತಿ ಮಾರ್ಚ್ 19ರಂದು ಬಿಡುಗಡೆಗೊಳ್ಳಲಿದೆ.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವ ಸಮಾರಂಭದಲ್ಲಿ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ
ಜಸ್ಟಿಸ್ ಸಂತೋಷ್ ಹೆಗ್ಡೆ ಅವರು ಉಡುಪಿ ಎಂಜಿಎಂ ಕಾಲೇಜಿನ ಆವರಣದಲ್ಲಿ ಕೃತಿ ಬಿಡುಗಡೆಗೊಳಿಸಲಿದ್ದಾರೆ. ಕೃತಿಯಲ್ಲಿ ಉಡುಪಿ ಜಿಲ್ಲೆಯ ಭೌಗೋಳಿಕ ವಿವರಗಳು,ಭಾಷೆ, ಧಾರ್ಮಿಕ ಆಚರಣೆ, ಬ್ಯಾಂಕಿಂಗ್, ಉಡುಪಿ ಲೋಕಸಭೆ, ವಿಧಾನ ಸಭೆ ಸದಸ್ಯರ ವಿವರಗಳು, ಸ್ಥಳೀಯಾಡಳಿತ ಸಂಸ್ಥೆಗಳ ಮಾಹಿತಿ,ಪ್ರವಾಸೋದ್ಯಮ, ಪ್ರಮುಖ ತಾಣಗಳ ಚಿತ್ರಣ, ಪ್ರಾಥಮಿಕ, ಪ್ರೌಢ, ಕಾಲೇಜು, ವೃತ್ತಿಪರ ಕಾಲೇಜುಗಳು, ಪೊಲೀಸ್ ಠಾಣೆ, ಮಾಧ್ಯಮ ಸಂಸ್ಥೆಗಳು, ತುಳು ಸಿನಿಮಾಗಳ ಮಾಹಿತಿ, ರಾಜಕೀಯ ವಿವರಗಳು, ಆಡಳಿತ ಮಾಹಿತಿ, ಪ್ರವಾಸೋದ್ಯಮ, ಶಿಕ್ಷಣ ಸಂಸ್ಥೆಗಳು, ವೃತ್ತಿಪರ ಕಾಲೇಜುಗಳು, ಗ್ರಂಥಾಲಯಗಳು, ಪ್ರಮುಖ ದೇವಸ್ಥಾನ, ಚರ್ಚ್, ಮಸೀದಿಗಳು, ಹೊಟೇಲ್, ಲಾಡ್ಜ್ ಗಳು, ರೆಸಾರ್ಟ ಗಳು, ಕಲ್ಯಾಣ ಮಂಟಪಗಳು, ಪ್ರಮುಖ ಕೆರೆ, ಮದಗಗಳು, ಸಾರಿಗೆ ಸೌಲಭ್ಯ,ಆಸ್ಪತ್ರೆಗಳು, ಆರೋಗ್ಯ ಕೇಂದ್ರಗಳು, ಬ್ಲಾಡ್ ಬ್ಯಾಂಕ್‌ಗಳು ಹೀಗೆ ಸಮಗ್ರ ಮಾಹಿತಿಗಳನ್ನು ಈ ಕೃತಿ ಒಳಗೊಂಡಿದೆ. ಕೃತಿಗೆ ಮಂಗಳೂರು ಕುಲಪತಿ ಪ್ರೊ. ಪಿ.ಎಸ್. ಯಡಪಡಿತ್ತಾಯ ಮುನ್ನುಡಿ ಬರೆದಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್ ಬೆನ್ನುಡಿ ಬರೆದಿದ್ದಾರೆ. ಕೃತಿಗೆ ಡಿಜಿಟಲ್ ಸ್ಪರ್ಶ ಕೂಡ ನೀಡಲಾಗಿದ್ದು, ಉಡುಪಿ ಜಿಲ್ಲೆಯ ಸಮಗ್ರ ಚಿತ್ರಣದ ದ್ರಶ್ಯವನ್ನು ಕೂಡ ಪುಸ್ತಕದಲ್ಲಿರುವ ಕ್ಯೂ ಆರ್ ಕೋಡ್ ಬಳಸಿಕೊಂಡು ವೀಕ್ಷಿಸಬಹುದಾಗಿದೆ.
ಆಕೃತಿ ಆಶಯ ಪಬ್ಲಿಕೇಶನ್‌ ಕೃತಿ ಪ್ರಕಟಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು