11:16 PM Tuesday21 - March 2023
ಬ್ರೇಕಿಂಗ್ ನ್ಯೂಸ್
ನಾಗಠಾಣ, ಇಂಡಿಯಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ; ಮಾಜಿ ಡಿಸಿಎಂ ಸವದಿ ನೇತೃತ್ವದಲ್ಲಿ… ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾದರೆ ಕಂಟ್ರೋಲ್ ರೂಮ್‍ಗೆ ಕರೆ ಮಾಡಿ ದೂರು ನೀಡಿ ಲಕ್ಷ್ಮಣ ಸವದಿ ಬುದ್ದಿವಂತ ರಾಜಕಾರಣಿ, ಆದರೆ ಯಾಕೆ ಹಿಂಗೆ ಮಾಡುತ್ತಿದ್ದಾರೆ ಗೊತ್ತಿಲ್ಲ: ಮಾಜಿ… ಬಂಟ್ವಾಳ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ: ಶಾಸಕ ರಾಜೇಶ್ ನಾಯ್ಕ್… ಮಂಗಳೂರು ಉತ್ತರ ಸಂಚಾರಿ ಠಾಣೆ ನೂತನ ಕಟ್ಟಡ: ಶಾಸಕ ಡಾ. ಭರತ್ ಶೆಟ್ಟಿ… ಪಾಲಿಕೆ ಕಂಬ್ಳ ವಾರ್ಡ್‌ನಲ್ಲಿ ರಾಜ ಕಾಲುವೆ ತಡೆಗೋಡೆ ನಿರ್ಮಾಣ: ಶಾಸಕ ವೇದವ್ಯಾಸ ಕಾಮತ್… ಬಂಟ್ವಾಳ ಪ್ರಜಾಧ್ವನಿ ಯಾತ್ರೆ: ಪಣೋಲಿಬೈಲ್ ದೈವಸ್ಥಾನಕ್ಕೆ ಮಾಜಿ ಸಚಿವ ರಮಾನಾಥ ರೈ ಭೇಟಿ;… ಎಎಪಿ ಮೊದಲ ಪಟ್ಟಿ ಬಿಡುಗಡೆ: ಮಂಗಳೂರು ದಕ್ಷಿಣ ಕ್ಷೇತ್ರದಿಂದ ಸಂತೋಷ್ ಕಾಮತ್, ಮೂಡಬಿದರೆಯಿಂದ… ಜನಸಾಮಾನ್ಯರ ತಾಸುಗಟ್ಟಲೆ ಕಾಯಿಸಿದ ಪಾಲಿಕೆ ಕಮಿಷನರ್: ಸಾರ್ವಜನಿಕರಿಂದ ತರಾಟೆ, ತೀವ್ರ ಆಕ್ಷೇಪ ಕನ್ಯಾನದಲ್ಲಿ ಬಂಟ್ವಾಳ ಪ್ರಜಾಧ್ವನಿ 9ನೇ ದಿನದ ಯಾತ್ರೆ: ಅಪಪ್ರಚಾರದ ಮೂಲಕ ನನ್ನ ಸೋಲಿಸಲಾಯಿತು:…

ಇತ್ತೀಚಿನ ಸುದ್ದಿ

ಕುಲಶೇಖರ ಶ್ರೀ ವೀರ ನಾರಾಯಣ ದೇವಸ್ಥಾನ ಬ್ರಹ್ಮಕಲಶೋತ್ಸವದ ಸಮಾಲೋಚನಾ ಸಭೆ

19/03/2023, 00:12

ಮಂಗಳೂರು(reporterkarnataka.com):ಇತಿಹಾಸ ಪ್ರಸಿದ್ದ ಮಂಗಳೂರಿನ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನ ಸಮಗ್ರ ಜೀರ್ಣೋದ್ಧಾರಗೊಂಡು ಮೇ 14ರಿಂದ 24ರ ವರೆಗೆ ನಡೆಯಲಿರುವ ಬ್ರಹ್ಮ ಕಲಶೋತ್ಸವದ ಸಮಾಲೋಚನಾ ಸಭೆ ಕ್ಷೇತ್ರದ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು,
ಸಭೆಯಲ್ಲಿ ಬ್ರಹ್ಮ ಕಲಶೋತ್ಸವದ ಅಧ್ಯಕ್ಷರಾಗಿ ಪ್ರೇಮಾನಂದ ಕುಲಾಲ್ ಅವರನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷತೆಯನ್ನು ವಹಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್ ಮಾತನಾಡಿ, ದೇವಸ್ಥಾನ ಜೀರ್ಣೋದ್ಧಾರಗೊಂಡಾಗ ಗ್ರಾಮ ಅಭಿವೃದ್ಧಿಯಾಗುತ್ತದೆ. ಸಮಾಜ ಬಲಿಷ್ಠ ಕೊಳ್ಳುತ್ತದೆ. ದೇವಸ್ಥಾನ ಧಾರ್ಮಿಕ ಕೇಂದ್ರವಾಗದೆ ಸಾಮಾಜಿಕ ಶೈಕ್ಷಣಿಕ ಸೇವಾಕಾರ್ಯಗಳ ಕೇಂದ್ರವಾಗಲಿದೆ‌. ವೀರನಾರಾಯಣ ಕ್ಷೇತ್ರ ಹಿಂದು ಸಮಾಜದ ಪವಿತ್ರ ಕ್ಷೇತ್ರವಾಗಲಿದೆ ಎಂದು ನುಡಿದರು‌.

ವೀರನಾರಾಯಣ ದೇವಸ್ಥಾನದ ಆಡಳಿತ ಮೊಕ್ತೇಸರ ಪುರುಷೋತ್ತಮ ಕುಲಾಲ್ ಕಲ್ಪಾವಿ ಜೀರ್ಣೋದ್ಧಾರದ ಪ್ರಕ್ರಿಯೆಗೆಗಳ ಬಗ್ಗೆ ಮತ್ತು ಸಮಿತಿಯ ಪದಾಧಿಕಾರಿಗಳ ಸದಸ್ಯರ ಯಾದಿಯನ್ನು ವಾಚಿಸಿದರು.
ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಎ. ದಾಮೋದರ್ ಪ್ರಾಸ್ತಾವಿಕ ಮಾತುಗಳಾಡಿದರು. ವೇದಿಕೆಯಲ್ಲಿ ದೇವಸ್ಥಾನದ ಮಹಿಳಾ ವಿಭಾಗದ ಅಧ್ಯಕ್ಷ ಗೀತಾ ಮನೋಜ್, ಮುಂಬಯಿ ಸಮಿತಿಯ ಅಧ್ಯಕ್ಷ ಬಿ. ದಿನೇಶ್ ಕುಲಾಲ್, ಬೆಂಗಳೂರು ಸಮಿತಿಯ ಅಧ್ಯಕ್ಷ ಮಾಧವ ಕುಲಾಲ್ ಉಪಸ್ಥತರಿದ್ದರು.


ಪ್ರೇಮಾನಂದ ಕುಲಾಲ್ ಮಾತನಾಡುತ್ತಾ ಭಕ್ತಾಭಿಮಾನಿಗಳ ಸಹಕಾರದಿಂದ ದೇವಸ್ಥಾನದ ಜೀರ್ಣೋದಾರದ ಕಾರ್ಯ ವೇಗದಲ್ಲಿ ಸಾಗುತ್ತಿದೆ. ಮುಂದೆ ನಡೆಯಲಿರುವ ಬ್ರಹ್ಮ ಕಲಶ ಅಭೂತಪೂರ್ವಾಗಿ ನಡೆಯುವುದಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದು ನುಡಿದರು.
ಕಾರ್ಯಕ್ರಮವನ್ನು ನ್ಯಾಯವಾದಿ ರವೀಂದ್ರ ಮುನ್ನಿಪಾಡಿ, ನಿರೂಪಿಸಿದರು, ಸದಾಶಿವ ಕುಲಾಲ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು