10:32 PM Tuesday23 - April 2024
ಬ್ರೇಕಿಂಗ್ ನ್ಯೂಸ್
ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ… ತಂತ್ರಜ್ಞಾನ ಅಭಿವೃದ್ಧಿಯಾಗಿದ್ದರೂ ಚುನಾವಣೆ 60 ದಿನಗಳ ಕಾಲ ನಡೆಯುತ್ತಿರುವುದು ಅನುಮಾನಾಸ್ಪದ: ಮಾಜಿ ಸಿಎಂ… ಸಿದ್ದರಾಮಯ್ಯ ಸರಕಾರದಲ್ಲಿ ಬದುಕಿನ ಗ್ಯಾರಂಟಿ ಕಳೆದುಕೊಂಡ ಕನ್ನಡಿಗರು: ಶಾಸಕ ಡಾ. ವೈ ಭರತ್… ನಮ್ಮ ಕೆಲಸವೇ ಅಪಪ್ರಚಾರ ನಡೆಸುವವರಿಗೆ ತಕ್ಕ ಉತ್ತರ: ಸರಪಾಡಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ… ಗಾಳಿ ಮಳೆಗೆ ಮರ ಬಿದ್ದು ತಂಡಾದ ಪವರ್ ಲೈನ್: ವಿದ್ಯುತ್ ಶಾಕ್ ಹೊಡೆದು… ಕೊಲ್ಯದಿಂದ ಅಬ್ಬಕ್ಕ ರಾಣಿ ಸರ್ಕಲ್‌ ವರೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ…

ಇತ್ತೀಚಿನ ಸುದ್ದಿ

ಮಂಗಳೂರು ಉತ್ತರ ಸಂಚಾರಿ ಠಾಣೆ ನೂತನ ಕಟ್ಟಡ: ಶಾಸಕ ಡಾ. ಭರತ್ ಶೆಟ್ಟಿ ಉದ್ಘಾಟನೆ

21/03/2023, 13:30

ಸುರತ್ಕಲ್(reporterkarnataka.com):
ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಾಣವಾದ ಮಂಗಳೂರು ಉತ್ತರ ಸಂಚಾರಿ ಠಾಣೆಯ ನೂತನ ಕಟ್ಟಡವನ್ನು ಶಾಸಕ ಡಾ. ವೈ ಭರತ್ ಶೆಟ್ಟಿ ಉದ್ಘಾಟಿಸಿದರು.
ನೂತನ ಠಾಣೆ 2 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು, ವಿಶಾಲವಾದ ಪಾರ್ಕಿಂಗ್ , ಪೆರೆಡ್‍ಗೆ ಬೇಕಾದ ಸ್ಥಳಾವಕಾಶ, ವಿಶಾಲವಾದ ಕಟ್ಟಡವನ್ನು ಹೊಂದಿದೆ. ಪ್ರಸ್ತುತ ಬೈಕಂಪಾಡಿ ಎಪಿಎಂಸಿ ಯಾರ್ಡ್‍ನಲ್ಲಿರುವ ಈ ಠಾಣೆ ಶೀಘ್ರ ಸ್ಥಳಾಂತರಗೊಳ್ಳಲಿದೆ.
ಇದಕ್ಕೆ ಅನುದಾನ ಒದಗಿಸಿಕೊಡುವಲ್ಲಿ ಸಹಕರಿಸಿದ ಗೃಹಮಂತ್ರಿಗಳು, ಸಂಬಂಧಪಟ್ಟ ಇಲಾಖೆಯ ಪೊಲೀಸ್ ನಿರ್ದೇಶಕರು ಹಾಗೂ ಇತರ ಅಧಿಕಾರಿಗಳನ್ನು ಶಾಸಕರು ಸ್ಮರಿಸಿಕೊಂಡರಲ್ಲದೆ, ನೂತನ ಠಾಣೆಗೆ ಕಂಪ್ಯೂಟರ್ ಹಾಗೂ ಇತರ ಮೂಲಸೌಕರ್ಯದ ಅಗತ್ಯವಿದ್ದು ಉದ್ಯಮಿಗಳು ಸಹಕರಿಸುವಂತೆ ಮನವಿ ಮಾಡಿದರು.


ಪೊಲೀಸ್ ಆಯುಕ್ತ ಕುಲ್‍ದೀಪ್ ಆರ್. ಜೈನ್, ಕಾನೂನು ಸುವ್ಯವಸ್ಥೆ ಪೊಲೀಸ್ ಉಪ ಆಯುಕ್ತ ಅಂಶು ಕುಮಾರ್, ಅಪರಾಧಿಕ ಸಂಚಾರ ಪೊಲೀಸ್ ಉಪ ಆಯುಕ್ತ ಬಿ.ಪಿ. ದಿನೇಶ್ ಕುಮಾರ್, ಪೊಲೀಸ್ ವಸತಿ ವ್ಯವಸ್ಥಾಪಕಿ ಪ್ರಜ್ಞಾ ಆನಂದ್, ಸಂಚಾರ ಎಸಿಪಿ ಗೀತಾ ಕುಲಕರ್ಣಿ, ಉತ್ತರ ಸಂಚಾರಿ ಸಿಐ ಸುರೇಶ್ ಕುಮಾರ್, ಮನಪಾ ಸದಸ್ಯರು, ಉದ್ಯಮಿಗಳು, ವಿವಿಧ ಸಂಘ ಸಂಸ್ಥೆ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು