12:16 PM Saturday18 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಬಾನೊಟ್ಟು ಶ್ರೀ ಉಮಾಮಹೇಶ್ವರ ಸಾನಿಧ್ಯದಲ್ಲಿ ಅಖಂಡ ಏಕಾಹ ಭಜನಾ ಕಾರ್ಯಕ್ರಮ ಸಂಪನ್ನ

11/04/2023, 20:08

ಮಾಣಿ(reporterkarnataka.com): ಬಾನೊಟ್ಟು ಶ್ರೀ ಉಮಾಮಹೇಶ್ವರ ಸಾನ್ನಿದ್ಯ ದ ಜೀರ್ಣೋದ್ಧಾರ ಕುರಿತು ಧರ್ಮಜಾಗೃತಿ ಅಭಿಯಾನದ ಅಂಗವಾಗಿ ಅಖಂಡ- ಏಕಾಹ ಭಜನಾ ಕಾರ್ಯಕ್ರಮ ಎಪ್ರಿಲ್ 8 ನೇ ಸೂರ್ಯೋದಯದಿಂದ ಎಪ್ರಿಲ್ 9ರ ಸೂರ್ಯೋದಯದವರೆಗೆ ಊರ-ಪರವೂರ ವಿವಿಧ ಭಜನಾ ತಂಡಗಳ ಸಮ್ಮಿಲನ ದಲ್ಲಿ ಅದ್ದೂರಿಯಾಗಿ ಜರುಗಿತು.
ಶ್ರೀಧಾಮ ಮಾಣಿಲದ ಮೋಹನದಾಸ ಪರಮಹಂಸ ಸ್ವಾಮೀಜಿಯವರು ದೀಪ ಪ್ರಜ್ವಲನಗೊಳಿಸುವ ಮೂಲಕ ಈ ಅಖಂಡ ಏಕಾಹ ಭಜನಾ ಕಾರ್ಯಕ್ರಮಕ್ಕೆ ವಿಧ್ಯುಕ್ತವಾಗಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕ್ಷೇತ್ರ ಅಭಿವೃದ್ಧಿ ಸಮಿತಿ ಅಧ್ಯಕ್ಷ ನಾರಾಯಣ ರೈ ಪೆರ್ಲಬೀಡು, ಪ್ರಮುಖರಾದ ಎನ್ .ರವಿಶರ್ಮ, ಸದಾಶಿವ ಆಚಾರ್ಯ, ವೈದಿಕರಾದ ಪಳನೀರು ಅನಂತ ಭಟ್ ಗೂ ಕ್ಷೇತ್ರ ಅಭಿವೃದ್ಧಿ ಸಮಿತಿಯ ಸದಸ್ಯರು, ಮಹಿಳಾ ಸಮಿತಿ ಸದಸ್ಯರು, ಗ್ರಾಮಸ್ತರು ಹಾಗೂ ಊರ – ಪರವೂರಿನ ಭಕ್ತರು ಉಪಸ್ಥಿತರಿದ್ದರು.
ದೇವಾಲಯ ಜೀರ್ಣೋದ್ಧಾರ ಕುರಿತಾಗಿ ಜರುಗಿದ ಅಷ್ಟಮಂಗಲ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದಂತೆ ಪರಿಹಾರ ಹಾಗೂ ನಿವೃತ್ತಿಯ ಭಾಗವಾಗಿ ಗ್ರಾಮದ ಸುಬೀಕ್ಷೇಗಾಗಿ ಕ್ಷೇತ್ರ ಅಭಿವೃದ್ಧಿ ಸಮಿತಿ ಅಖಂಡ ಏಕಾಹ ಭಜನೆ ಹಾಗೂ ಇತರ ಧಾರ್ಮಿಕ ಕಾರ್ಯಕ್ರಮ ಆಯೋಜಿಸಿದ್ದು 20ಕ್ಕೂ ಹೆಚ್ಚು ವಿವಿಧ ಭಜನಾ ತಂಡಗಳು ಭಾಗವಹಿಸಿದ್ದವು. ಶ್ರೀ ಗುರುದೇವದತ್ತ ಸಂಸ್ಥಾನ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಈ ಕಾರ್ಯಕ್ರಮ ಕ್ಕೆ ಚಿತೈಸಿ ಶುಭಹಾರೈಸಿದರು.


ಕಾರ್ಯಕ್ರಮದಲ್ಲಿ ನೂಜಿಬೈಲು ರಮೇಶ್ ಭಟ್, ವೇದ ವಿದ್ವಾಂಸರಾದ ವೇ| ಮೂ| ಪಳ್ಳತ್ತಡ್ಕ ಘನಪಾಠಿ ಶಂಕರನಾರಾಯಣ ಭಟ್, ರಾಕೋಡಿ ಈಶ್ವರ ಭಟ್,ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ,ಸೇರಿದಂತೆ ಹಲವು ಮಂದಿ ಪ್ರಮುಖರು ಪಾಲ್ಗೊಂಡಿದ್ದರು.
ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಯವರು ಹಾಗೂ ರಾಜರಾಜೇಶ್ವರಿ ಭಜನಾ ಮಂಡಳಿಯ ಸದಸ್ಯರಿಂದ ಶುಭಾರಂಭಗೊಂಡ ಬಾನೊಟ್ಟು ಅಖಂಡ ಏಕಾಹ ಭಜನೆ ನೇರಳಕಟ್ಟೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಸದಸ್ಯ ರ ಭಜನೆಯ ಮೂಲಕ ಮಂಗಳಾಚರಣೆ ಕಾಣುವ ಮೂಲಕ ಬಾನೊಟ್ಟು ಅಖಂಡ ಏಕಾಹ ಭಜನೆ ಸಂಪನ್ನ ಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು