2:16 PM Saturday4 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ಮಂಗಳೂರು ಉತ್ತರ: ಕೊನೆಗೂ ಇನಾಯತ್ ಆಲಿಗೆ ಒಲಿದ ಕಾಂಗ್ರೆಸ್ ಟಿಕೆಟ್; ನಾಳೆ ನಾಮಪತ್ರ ಸಲ್ಲಿಕೆ

19/04/2023, 21:06

ಮಂಗಳೂರು(reporterkarnantaka.com): ತೀವ್ರ ಕುತೂಹಲ ಕೆರಳಿಸಿದ ಮಂಗಳೂರು ಉತ್ತರ ಕ್ಷೇತ್ರ ಕಾಂಗ್ರೆಸ್ ಟಿಕೆಟ್ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಅವರಿಗೆ ಕೊನೆಗೂ
ಒಲಿದಿದ್ದು, ನಾಳೆ ನಾಮಪತ್ರ ಸಲ್ಲಿಸುವರು.
ಮಾಜಿ ಶಾಸಕ ಮೊಯ್ದೀನ್ ಬಾವಾ ಹಾಗೂ ಆಲಿ ಅವರ ನಡುವೆ ಟಿಕೆಟ್ ಗಾಗಿ ಜಿದ್ದಾಜಿದ್ದಿ ನಡೆದಿತ್ತು.
ಪ್ರಸ್ತುತ ದಿಲ್ಲಿಯಲ್ಲಿರುವ ಇನಾಯತ್ ಆಲಿ ಅವರು ಕಾಂಗ್ರೆಸ್ ಟಿಕೆಟ್ ಹಾಗೂ ಬಿ ಫಾರಂನೊಂದಿಗೆ ಇವತ್ತು ರಾತ್ರಿ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸುವರು. ನಾಳೆ ಅವರು ಮಿನಿ ವಿಧಾನಸೌಧದಲ್ಲಿರುವ ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸುವರು.
ಜಾತ್ಯತೀತ ಮನೋಭಾವದ ಇನಾಯತ್ ಅಲಿ ಅವರು ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿ ಎಂದರೆ ತಪ್ಪಾಗಲಾರದು. ವಿಧ್ಯಾರ್ಥಿ ದಿಸೆಯಿಂದಲೇ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡು ಕಾಂಗ್ರೆಸ್ ವಿಧ್ಯಾರ್ಥಿ ಘಟಕವಾದ NSUI ಮೂಲಕ ಅಂದು ಹಲವಾರು ವಿಧ್ಯಾರ್ಥಿ ಹೋರಾಟಗಳಲ್ಲಿ ಮಂಚೂಣಿಯಲ್ಲಿ ಕಾಣುತ್ತಿದ್ದ ಇನಾಯತ್ ಅವರು ಸ್ಥಳೀಯ ಮಟ್ಟದಿಂದ ಹಿಡಿದು ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ಸೇವೆಗೈದ ಕಟ್ಟಾ ಕಾಂಗ್ರೆಸಿಗ.
ಮೊದಲ ಬಾರಿ 1997 ನೇ ಇಸವಿಯಲ್ಲಿ NSUI ನ ಬ್ಲಾಕ್ ಅಧ್ಯಕ್ಷರಾಗಿ ಆಯ್ಕೆಯಾದ ಇವರು ನಂತರದಲ್ಲಿ 2000ನೇ ಇಸವಿಯಲ್ಲಿ NSUI ರಾಜ್ಯ ಉಪಾಧ್ಯಕ್ಷನಾಗಿ, 2003 ರಲ್ಲಿ NSUI ರಾಷ್ಟ್ರೀಯ ಕಾರ್ಯದರ್ಶಿಯಾಗಿ, 2005 ರಲ್ಲಿ NSUI ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ, 2009 ರಲ್ಲಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ, ಪ್ರಸ್ತುತ KPCC ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಹುದ್ದೆ ಮಾತ್ರವಲ್ಲದೆ NSUI ನ ರಾಜ್ಯ ಉಸ್ತುವಾರಿಯಾಗಿ ಕಾಂಗ್ರೆಸ್ ಪಕ್ಷದ ಸೇವೆಗೈಯುತ್ತಿದ್ದಾರೆ.
ವೃತ್ತಿಯಲ್ಲಿ ಇನಾಯತ್ ಅಲಿ ಅವರು ಒಬ್ಬ ಯಶಸ್ವಿ ಉದ್ಯಮಿಯೂ ಹೌದು.
ಇವರು ಈ‌ ಹಿಂದಿನಿಂದಲೂ ಪ್ರತಿಫಲಾಪೇಕ್ಷೆ ಬಯಸದೆ ಸಮಾಜ ಸೇವಾ ಚಟುವಟಿಕೆಗಳಲ್ಲಿ ತನ್ನನ್ನು ಸಕ್ರಿಯವಾಗಿ ತೊಡಗಿಸಿಕೊಂಡವರು.
ತನ್ನ ಸಾಮಾಜಿಕ ‌ಸೇವಾ ಕಾರ್ಯಗಳಿಗಾಗಿ ನೋಂದಾಯಿತ ಐಎಎಮ್ ಫೌಂಡೇಶನ್ ಸಂಸ್ಥೆಯನ್ನು ಸ್ಥಾಪಿಸಿ ಸಂಸ್ಥೆಯ ಮೂಲಕ ಕಳೆದ ಹಲವಾರು ವರ್ಷಗಳಿಂದ ಬಡಜನರ ಶೈಕ್ಷಣಿಕ, ಆರೋಗ್ಯ, ವಸತಿ ಇತ್ಯಾದಿ ಅಗತ್ಯಗಳಿಗೆ ಸ್ಪಂದಿಸಿದ್ದಾರೆ ಹಾಗೂ ಅದೆಷ್ಟೋ ಬಡ ಕುಟುಂಬದ ಯುವತಿಯರ ವಿವಾಹ ಕಾರ್ಯದಲ್ಲಿ ಜಾತಿ-ಮತ ನೋಡದೆ ಸಹಾಯ ಮಾಡಿರುತ್ತಾರೆ. ಮಂಗಳೂರು ಉತ್ತರ ಕ್ಷೇತ್ರದಲ್ಲೂ ವರ್ಷಗಳಿಂದ ನಿರಂತರವಾಗಿ ತನ್ನ ಸೇವಾ ಚಟುವಟಿಕೆಗಳ ಮೂಲಕ ತನ್ನದೇ ಆದ ಛಾಪನ್ನು ಮೂಡಿಸಿರುತ್ತಾರೆ.
ಕೊರೋನ ಸಂಧರ್ಭದಲ್ಲೂ ಆರ್ಥಿಕವಾಗಿ ಕಂಗೆಟ್ಟಿದ್ದ ಅದೆಷ್ಟೋ ಕುಟುಂಬಗಳಿಗೆ ಅಗತ್ಯ ವಸ್ತುಗಳನ್ನು ಪೂರೈಸಿದ್ದಾರೆ.
ಸ್ನೇಹಮಯಿ, ಸದಾ ಹಸನ್ಮುಖಿ ಮತ್ತು ಸಂವೇದನಾಶೀಲ ಗುಣವುಳ್ಳ ವ್ಯಕ್ತಿತ್ವ ಇನಾಯತ್ ಅಲಿ ಅವರದ್ದಾಗಿದೆ.
ಇವರು ರಾಜಕೀಯ, ಸಾಮಾಜಿಕ ರಂಗದಲ್ಲಿ ಸಾಕಷ್ಟು ಅನುಭವವನ್ನು ಹೊಂದಿರುತ್ತಾರೆ.
ತನ್ನ ಸೇವಾ ಚಟುವಟಿಕೆಗಳ ಮೂಲಕ ಹೆಸರಾಗಿರುವ ಇವರು ಈ ಬಾರಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ವಿರೋಧ ಪಕ್ಷಗಳಿಗೆ ಪ್ರಬಲ ಪ್ರತಿಸ್ಪರ್ಧಿಯಾಗಲಿದ್ದಾರೆ ಎಂದು ರಾಜಕೀಯ ತಜ್ಞರ ಅಭಿಪ್ರಾಯ.

ಇತ್ತೀಚಿನ ಸುದ್ದಿ

ಜಾಹೀರಾತು