4:58 AM Saturday18 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಕೃಪಾಕಟಾಕ್ಷದಡಿಯಲ್ಲೇ ಕರ್ನಾಟಕದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ: ಎಐಸಿಸಿ ವಕ್ತಾರ ಸಪ್ನಾಲ್ ಆರೋಪ

21/04/2023, 20:22

ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರ ಕೃಪಾಕಟಾಕ್ಷದಡಿಯಲ್ಲೇ ಕರ್ನಾಟಕದಲ್ಲಿ ಬಿಜೆಪಿ ಸರಕಾರದ ವ್ಯಾಪಕ ಭ್ರಷ್ಟಚಾರ ನಡೆದಿದೆ ಎಂದು ಎಐಸಿಸಿ ವಕ್ತಾರ ಚರಣ್‌ಸಿಂಗ್ ಸಪ್ನಾಲ್ ಆರೋಪಿಸಿದ್ದಾರೆ.
ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಎಂದರೆ ಭ್ರಷ್ಟಚಾರಿ ಜನತಾ ಪಕ್ಷ . ಕರ್ನಾಟಕದ ಬಿಜೆಪಿ ಸರಕಾರ ಶೇ.40 ಕಮಿಷನ್ ಸರಕಾರವೆಂದೇ ದೇಶದಲ್ಲಿ ಕುಖ್ಯಾತಿಯನ್ನು ಪಡೆದಿದೆ. ಕರ್ನಾಟಕದಲ್ಲಿ
ಬಿಜೆಪಿ ಆಡಳಿತದಲ್ಲಿ ಟೆಂಡರ್ ಹಗರಣ, ಪಿಎಸ್‌ಐ ನೇಮಕಾತಿ ಹಗರಣ, ಭೂ ಹಗರಣ, ಕೋವಿಡ್ ಹಗರಣ, ಬಿಟ್‌ಕಾಯಿನ್ ಹಗರಣ ಸೇರಿದಂತೆ
ಹಲವಾರು ಹಗರಣಗಳು ನಡೆದಿವೆ. ಆದರೆ ಪ್ರಧಾನಿ ನರೇಂದ್ರ ಮೋದಿಯವರು ಇದರ ಬಗ್ಗೆ ಯಾವುದೇ ಚಕಾರವೆತ್ತಿಲ್ಲ. ನರೇಂದ್ರ ಮೋದಿಯವರು ಕೆ.ಎಸ್.ಈಶ್ವರಪ್ಪ ಅವರಿಗೆ ಕರೆ ಮಾಡಿ ಶ್ಲಾಘನೆ ವ್ಯಕ್ತಪಡಿಸಿರುವ ವರದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈಶ್ವರಪ್ಪ ಅವರ ಮೇಲೆ ಅವರದ್ದೇ ಪಕ್ಷದ ಕಾರ್ಯಕರ್ತ ಸಂತೋಷ್ ಎಂಬವರು ಭ್ರಷ್ಟಚಾರದ ಆರೋಪ ಮಾಡಿ ಸಾವಿಗೆ ಶರಣಾಗಿದ್ದರು.ಮೋದಿಯವರು ಆಗ ಸಂತೋಷ್ ಕುಟುಂಬಕ್ಕೆ ಕರೆ ಮಾಡಿ ಸಾಂತ್ವನ ಹೇಳುವ ಕಾರ್ಯ ಮಾಡಲಿಲ್ಲ. ಮೋದಿಯವರ ನಡೆ ಭ್ರಷ್ಟಚಾರಕ್ಕೆ ಅಧಿಕೃತ ಮುದ್ರೆಯೊತ್ತಿದಂತಾಗಿದೆ ಎಂದವರು ಆರೋಪಿಸಿದರು.
ಪಕ್ಷದ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮೂಡುಬಿದಿರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ, ಮುಖಂಡರಾದ ಎ.ಸಿ.ವಿನಯರಾಜ್,
ಸಂತೋಷ್ ಕುಮಾರ್ ಶೆಟ್ಟಿ, ನೀರಜ್‌ಪಾಲ್,ವಸಂತ ಬೆನಾರ್ಡ್,ಶುಬೋಧಯ ಆಳ್ವ, ಶಾಲೆಟ್ ಪಿಂಟೋ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು