6:22 AM Wednesday24 - April 2024
ಬ್ರೇಕಿಂಗ್ ನ್ಯೂಸ್
ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ… ತಂತ್ರಜ್ಞಾನ ಅಭಿವೃದ್ಧಿಯಾಗಿದ್ದರೂ ಚುನಾವಣೆ 60 ದಿನಗಳ ಕಾಲ ನಡೆಯುತ್ತಿರುವುದು ಅನುಮಾನಾಸ್ಪದ: ಮಾಜಿ ಸಿಎಂ… ಸಿದ್ದರಾಮಯ್ಯ ಸರಕಾರದಲ್ಲಿ ಬದುಕಿನ ಗ್ಯಾರಂಟಿ ಕಳೆದುಕೊಂಡ ಕನ್ನಡಿಗರು: ಶಾಸಕ ಡಾ. ವೈ ಭರತ್… ನಮ್ಮ ಕೆಲಸವೇ ಅಪಪ್ರಚಾರ ನಡೆಸುವವರಿಗೆ ತಕ್ಕ ಉತ್ತರ: ಸರಪಾಡಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ… ಗಾಳಿ ಮಳೆಗೆ ಮರ ಬಿದ್ದು ತಂಡಾದ ಪವರ್ ಲೈನ್: ವಿದ್ಯುತ್ ಶಾಕ್ ಹೊಡೆದು…

ಇತ್ತೀಚಿನ ಸುದ್ದಿ

ನೆಲ್ಯಾಡಿ ವಿವಿ ಕಾಲೇಜು: ಕೌಶಲ್ಯಾಧಾರಿತ ಉದ್ಯಮ ಕ್ಷೇತ್ರ ಕುರಿತು ತರಬೇತಿ ಕಾರ್ಯಾಗಾರ

01/06/2023, 23:09

ಉಪ್ಪಿನಂಗಡಿ(reporterkarnataka.com): ನೆಲ್ಯಾಡಿಯ ವಿವಿ ಕಾಲೇಜಿನ ವಾಣಿಜ್ಯ ಸಂಘದ ವತಿಯಿಂದ ಪ್ರಸ್ತುತ ಔದ್ಯೋಗಿಕ ಮಾರುಕಟ್ಟೆಗೆ ಹೊಂದಿಕೊಳ್ಳುವ ಕೌಶಲ್ಯಾಧಾರಿತ ಉದ್ಯಮ ಕ್ಷೇತ್ರ ಕುರಿತು ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು.


ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಂಗಳೂರು ಇನ್ಸ್ಟಿಟ್ಯೂಟ್ ಆಫ್‌ ಟೆಕ್ನಾಲಜಿ ಆಂಡ್ ಎಂಜಿನಿಯರಿಂಗ್ ನ ಸಹಾಯಕ ಪ್ರಾಧ್ಯಾಪಕರಾದ ವರುಣ್ ಕೆ. ಅವರು ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಯಾವುದೇ ಉದ್ಯೋಗ ಪಡೆಯಲು ಬೇಕಾದ ಮೂಲಭೂತ ಆರ್ಹತೆಗಳು, ಕೌಶಲ್ಯಗಳು ಹಾಗೂ ಸಂದರ್ಶನವನ್ನು ಎದುರಿಸಲು ವಿದ್ಯಾರ್ಥಿಗಳಿಗೆ ಬೇಕಾಗುವ ಆತ್ಮವಿಶ್ವಾಸ ಮತ್ತು ಸಂವಹನ ಕೌಶಲ್ಯಗಳ ಬಗ್ಗೆ ಸವಿವರವಾಗಿ ಮಾಹಿತಿಯನ್ನು ನೀಡುತ್ತಾ ವಿದ್ಯಾರ್ಥಿಗಳೊಂದಿಗೆ ಪ್ರಾಯೋಗಿಕ ನಿದರ್ಶನಗಳ ಮೂಲಕ ಸಂವಾದ ನಡೆಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಸಹ ಸಂಯೋಜಕರಾದ ಡಾ. ಸೀತಾರಾಮ ಪಿ., ಪ್ರಸ್ತುತ ಜಾಗತೀಕರಣದ ಪರಿಣಾಮದಿಂದ ಖಾಸಗೀಕರಣದ ಪಾಲುದಾರಿಕೆಯಿಂದ ಔದ್ಯೋಗಿಕ ಕ್ಷೇತ್ರವು ಅನಿರಿಕ್ಷೀತ ಬದಲಾವಣೆಗಳನ್ನು ಕಂಡಿದೆ. ಒಬ್ಬ ಸಾಮಾನ್ಯ ವ್ಯಕ್ತಿಯು ಕೂಡ ಅಲ್ಪ ಬಂಡವಾಳದೊಂದಿಗೆ ಕೌಶಲ್ಯ ಮತ್ತು ದೂರದೃಷ್ಟಿಯಿಂದ ಔದ್ಯೋಗಿಕ ಕ್ಷೇತ್ರದಲ್ಲಿ ಯಶಸ್ವಿಯಾಗಲು ಪೂರಕವಾದ ವಾತಾವರಣವು ಈ ಸಂದರ್ಭದಲ್ಲಿ ಕಾಣುತ್ತಿದ್ದೇವೆ. ಹಾಗಾಗಿ ವಿದ್ಯಾರ್ಥಿ ದೆಸೆಯಿಂದಲೇ ಕೌಶಲ್ಯಾಧಾರಿತ ಉದ್ಯಮ ಕ್ಷೇತ್ರದ ಬಗ್ಗೆ ಜ್ಞಾನ ಪಡೆದುಕೊಳ್ಳುವುದು ಮಹತ್ವದ್ದಾಗಿದೆ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ವಾಣಿಜ್ಯ ಸಂಘದ ಸಂಚಾಲಕರಾದ ದಿವ್ಯ ಕೆ. ಪ್ರಾಸ್ತಾವಿಕವಾಗಿ ಮಾತನಾಡಿ, ಸರ್ವರನ್ನು ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ವೆರೋನಿಕಾ ಪ್ರಭಾ ವಂದಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ದಿವ್ಯ ಶ್ರೀ ಜಿ. ನಿರೂಪಿಸಿದರು. ಕಾರ್ಯಕ್ರಮದಲ್ಲಿ ಎಲ್ಲಾ ಬೋಧಕ , ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು