5:46 AM Monday20 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರನಾಗಿ ಶಾಸಕ ಪೊನ್ನಣ್ಣ ನೇಮಕ

02/06/2023, 16:23

ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರರಾಗಿ ವಿರಾಜಪೇಟೆಯ ಕಾಂಗ್ರೆಸ್ ಶಾಸಕ‌ ಎ. ಎಸ್. ಪೊನ್ನಣ್ಣ ನೇಮಕಗೊಂಡಿದ್ದಾರೆ.
ಪೊನ್ನಣ್ಣ ಅವರು ಮಾಜಿ ಜನಸಂಘ, ಜನತಾ ಪಕ್ಷ ಅಧ್ಯಕ್ಷರಾಗಿದ್ದ ದಿವಂಗತ ಎ. ಕೆ. ಸುಬ್ಬಯ್ಯರ ಪುತ್ರ. ಸುಬ್ಬಯ್ಯ ಅವರು 70ರ ದಶಕದಲ್ಲಿ ರಾಜ್ಯದ ಪ್ರಮುಖ ನಾಯಕರುಗಳಲ್ಲಿ ಒಬ್ಬರಾಗಿದ್ದರು. ಜನಸಂಘ ಮೂಲದಿಂದ ರಾಜಕೀಯ ಪ್ರವೇಶಿಸಿದ ಸುಬ್ಬಯ್ಯ ಅವರು ಅಂದು ಆಡಳಿತ ಪಕ್ಷದ ರೋಲೆಕ್ಸ್ ವಾಚ್ ಹಗರಣದ ವಿರುದ್ಧ ಸದನದ ಒಳಗೆ ಹಾಗೂ ಹೊರಗೆ ಹೋರಾಟ ನಡೆಸಿದ್ದರು.
ಜನಸಂಘ ಹಾಗೂ ಬಿಜೆಪಿಯಲ್ಲಿ ಗರ್ಭಗುಡಿ ಸಂಸ್ಕೃತಿ ಇದೆ ಎಂದು ಆರೋಪಿಸಿ ಪಕ್ಷದಿಂದ ಹೊರಗೆ ಬಂದು ತನ್ನದೇ ಆದ ಕನ್ನಡ ನಾಡು ಪಕ್ಷ ಕಟ್ಟಿದ್ದರು. ಬಿಜೆಪಿ ಹಾಗೂ ಸಂಘ ಪರಿವಾರದ ಕಟು ಟೀಕೆಕಾರರಾಗಿದ್ದರು. ನೇರ ನಡೆ ನುಡಿಗೆ ಸುಬ್ಬಯ್ಯ ಅವರು ಖ್ಯಾತರಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು