9:05 PM Saturday18 - May 2024
ಬ್ರೇಕಿಂಗ್ ನ್ಯೂಸ್
ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ…

ಇತ್ತೀಚಿನ ಸುದ್ದಿ

ಸೋಮೇಶ್ವರ ನೈತಿಕ ಪೊಲೀಸ್ ಗಿರಿ ಪ್ರಕರಣ: ಬಂಧಿತರ ಸಂಖ್ಯೆ 7ಕ್ಕೆ ಏರಿಕೆ; ಆರೋಪಿಗಳಲ್ಲಿ ಓರ್ವ ಅಪ್ರಾಪ್ತ ಬಾಲಕ!!

02/06/2023, 22:32

ಮಂಗಳೂರು(reporterkarnataka.com): ಉಳ್ಳಾಲದ ಸೋಮೇಶ್ವರ ಬೀಚ್ ಗೆ ವಿದ್ಯಾರ್ಥಿನಿಯರ ಜತೆ ಬಂದ ಅನ್ಯಕೋಮಿನ ವಿದ್ಯಾರ್ಥಿಗಳ ಮೇಲೆ ತಂಡವೊಂದು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ 7ಕ್ಕೆ ಏರಿದೆ.
ಬಂಧಿತರನ್ನು ಯತೀಶ್, ಸಚಿನ್, ಸುಹಾನ್, ಭವಿಷ್, ಜೀತು, ಅಖಿಲ್ ಮತ್ತು ಓರ್ವ ಅಪ್ರಾಪ್ತ ಬಾಲಕ ಎಂದು ಗುರುತಿಸಲಾಗಿದೆ. ಇವರಲ್ಲಿ ಯತೀಶ್, ಸಚಿನ್ ಹಾಗೂ ಸುಹಾನ್ ಪ್ರಮುಖ 3 ಮಂದಿ ಆರೋಪಿಗಳಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


ನಗರದ ಹೊರವಲಯದ ಉಳ್ಳಾಲ ಸೋಮೇಶ್ವರ ಬೀಚ್ ಗೆ ಬಂದಿದ್ದ ಮಂಗಳೂರಿನ ಖಾಸಗಿ ಅರೆ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲಾಗಿತ್ತು. ಮೂವರು
ವಿದ್ಯಾರ್ಥಿನಿಯ ಜತೆ ಈ ಅನ್ಯಕೋಮಿಗೆ ಸೇರಿದ ವಿದ್ಯಾರ್ಥಿಗಳು ಗುರುವಾರ ಸಂಜೆ ಬೀಚಿಗೆ ಆಗಮಿಸಿದ್ದರು. ಹಲ್ಲೆ ನಡೆಯುತ್ತಿದ್ದಂತೆ ಮೂವರು ವಿದ್ಯಾರ್ಥಿನಿಯರು ಅಲ್ಲಿಂದ ಪರಾರಿಯಾಗಿದ್ದರು. ಅವರೆಲ್ಲರು ಕೇರಳದ ನಿವಾಸಿಗಳು ಎನ್ನಲಾಗಿದೆ. ಗಾಯಾಳುಗಳು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಕರಣದ ಕುರಿತಂತೆ ಆರೋಪಿಗಳ ಪತ್ತೆಗಾಗಿ ಎರಡು ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿತ್ತು. ಮೊದಲಿಗೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದೀಗ ವಶಕ್ಕೆ ಪಡೆದವರ ಸಂಖ್ಯೆ 7ಕ್ಕೇರಿದೆ.
ಹಲ್ಲೆ ಮಾಡಿದ್ದ ತಂಡದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕ ಕೂಡ ಇದ್ದ ಎನ್ನುವುದು ಗಮನಾರ್ಹವಾಗಿದೆ. ಘಟನೆಯಲ್ಲಿ ಭಾಗಿ ಆಗಿದ್ದವರನ್ನು ವಶಕ್ಕೆ ಪಡೆಯಲಾಗುತ್ತದೆ, ಇದಕ್ಕಾಗಿ ತಂಡವನ್ನು ರಚನೆ ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು