7:11 PM Saturday20 - April 2024
ಬ್ರೇಕಿಂಗ್ ನ್ಯೂಸ್
ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್ ಬಿಜೆಪಿ ಸೇರ್ಪಡೆ: ಪಕ್ಷದ ಧ್ವಜ ನೀಡಿ… ಮಂಗಳೂರಿನಲ್ಲಿ ಕರ್ಕಶ ಹಾರ್ನ್ ಗಳ ಕಿರಿಕಿರಿ ತಪ್ಪಿಸಲು ಪೊಲೀಸ್ ಕಾರ್ಯಾಚರಣೆ: ಹಾರ್ನ್ ಕಿತ್ತೆಸೆದು… ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್…

ಇತ್ತೀಚಿನ ಸುದ್ದಿ

ಒಡಿಶಾ: ಭೀಕರ ರೈಲು ದುರಂತ; ಕರ್ನಾಟಕದ 110 ಮಂದಿ ಕನ್ನಡಿಗ ಪ್ರಯಾಣಿಕರು ಸೇಫ್

03/06/2023, 15:54

ಭುವನೇಶ್ವರ(reporterkarnataka.com): ಒಡಿಶಾದಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ಭೀಕರ ರೈಲು ದುರಂತದಲ್ಲಿ ಸತ್ತವರ ಸಂಖ್ಯೆ 233ಕ್ಕೆ ಏರಿದ್ದು, 900ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ನಡುವೆ ರೈಲಿನಲ್ಲಿದ್ದ ಕರ್ನಾಟಕದ ಎಲ್ಲ 110 ಮಂದಿ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಸುರಕ್ಷಿತರಾಗಿದ್ದಾರೆ ಎಂದು ತಿಳಿದು ಬಂದಿದೆ.
ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ 110 ಮಂದಿ ಪ್ರಯಾಣಿಕರಿದ್ದರು. ಇವರೆಲ್ಲ ಬೆಂಗಳೂರಿನಿಂದ ದುರಂತಕ್ಕೀಡಾದ ರೈಲಿನ ಕೊನೆಯ S5, S6, S7 ಬೋಗಿಯಲ್ಲಿ ಪ್ರಯಾಣಿಸುತ್ತಿದ್ದರು. ನಿನ್ನೆ ಮಧ್ಯಾಹ್ನ ಕೋಲ್ಕತ್ತಾ ಬಳಿ ಇಂಜಿನ್ ಬದಲಾಯಿಸಿದ್ದ ಕಾರಣ ರೈಲಿನ ಮೊದಲ ಬೋಗಿಗೆ ಸ್ಥಳಾಂತರಗೊಂಡಿದ್ದರು. ಹಾಗಾಗಿ ಇವರೆಲ್ಲ ಅಪಾಯದಿಂದ ಪಾರಾಗಿದ್ದಾರೆ.

ಇಲ್ಲಿನ ಬಾಲಾಸೋರ್ ಜಿಲ್ಲೆಯ ಬಹನಗ ರೈಲ್ವೆ ನಿಲ್ದಾಣದ ಬಳಿಕ ಈ ದುರ್ಘಟನೆ ನಡೆದಿತ್ತು. ಚೆನ್ನೈ- ಕೊರೊಮಂಡೆಲ್ ಎಕ್ಸ್ ಪ್ರೆಸ್ ರೈಲು ಹಾಗೂ ಯಶವಂತಪುರ- ಹೌರಾ ರೈಲು ಮತ್ತು ಗೂಡ್ಸ್ ರೈಲು ಡಿಕ್ಕಿ ಹೊಡೆದಿತ್ರು.
ಪಶ್ಚಿಮ ಬಂಗಾಳದ ಶಾಲಿಮಾರ್ ರೈಲು ನಿಲ್ದಾಣ ದಿಂದ ಚೆನ್ನೈಗೆ ಆಗಮಿಸುತ್ತಿದ್ದ ಈ ರೈಲು ಒಡಿಶಾದಲ್ಲಿ ತರ ಯಶವಂತ ಪುರ ಪ್ಯಾಸೆಂಜ್ ರೈಲು ಹಾಗೂ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿತ್ತು. ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ಹಾಗೂ ಗಾಯಗೊಂಡವರಿಗೆ 2 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಅಪಘಾತ ಸ್ಥಳದಲ್ಲಿ ರಕ್ಷಣಾ ತಂಡ ಬೀಡು ಬಿಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು