4:55 PM Saturday20 - April 2024
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಕರ್ಕಶ ಹಾರ್ನ್ ಗಳ ಕಿರಿಕಿರಿ ತಪ್ಪಿಸಲು ಪೊಲೀಸ್ ಕಾರ್ಯಾಚರಣೆ: ಹಾರ್ನ್ ಕಿತ್ತೆಸೆದು… ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ…

ಇತ್ತೀಚಿನ ಸುದ್ದಿ

ಒಡಿಸ್ಸಾ ರೈಲು ದುರಂತ: ಕಳಸದಿಂದ ಸಮೇದ್ ಶಿಖರ್ಜಿ ಯಾತ್ರೆಗೆ ತೆರಳಿದ್ದ 110 ಮಂದಿ ಯಾತ್ರಾರ್ಥಿಗಳು

03/06/2023, 19:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಒಡಿಶಾದ ಬಹನಾಗ ರೈಲ್ವೆ ನಿಲ್ದಾಣದಲ್ಲಿ ದುರಂತಕ್ಕೀಡಾದ
ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಚಿಕ್ಕಮಗಳೂರು ಜಿಲ್ಲೆಯ
ಕಳಸ ತಾಲೂಕಿನ 110 ಮಂದಿ
ಕಳಸದಿಂದ ಸಮೇದ್ ಶಿಖರ್ಜಿ ಯಾತ್ರೆಗೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.
ಕಳಸ, ಹೊರನಾಡು, ಬಲಿಗೆ, ಯಡೂರು, ಸಂಸೆ, ಸುತ್ತ ಮುತ್ತಲ ಪ್ರದೇಶದ 110 ಜನ ಯಾತ್ರಿಕರು ರೈಲಿನಲ್ಲಿದ್ದರು. ಇವರಲ್ಲಿ ಹೆಂಗಸರು, ಮಕ್ಕಳು, ಹಿರಿಯ ನಾಗರಿಕರು ಕೂಡ ಸೇರಿದ್ದರು. ಒಟ್ಟಿಗೆ ಒಂದೇ ಕುಟುಂಬದ ಸದಸ್ಯರಂತೆ ಪ್ರಯಾಣ ಬೆಳೆಸಿದ್ದರು. ಅದೃಷ್ಟವಶಾತ್ ಕಳಸದ ಇವರೆಲ್ಲ ಸೇಫ್ ಆಗಿದ್ದಾರೆ.
ಗುರುವಾರ ಬೆಳಗ್ಗೆ 11:30ಕ್ಕೆ ಬೆಂಗಳೂರಿನ ಯಶವಂತಪುರದಿಂದ ರೈಲು ಹೊರಟಿತ್ತು. ಹೊರನಾಡಿನ ಅಜಿತ್ ಕುಮಾರ್ ಜೈನ್ ನೇತೃತ್ವದಲ್ಲಿ ಯಾತ್ರೆ ಹೊರಟಿತ್ತು.
ಮಲೆನಾಡಿನ ಸಂತ ಎಂದೇ ಖ್ಯಾತಿ ಪಡೆದಿದ್ದ ಮಹಿಮಾ ಸಾಗರ್ ಮುನಿ ಮಹಾರಾಜ್ ದರ್ಶನಕ್ಕೆ ಯಾತ್ರಾರ್ಥಿಗಳು ತೆರಳಿದ್ದರು. ಜೊತೆಗೆ 24 ತೀರ್ಥಂಕರರ ಮೋಕ್ಷ ಹೊಂದಿದ ಸ್ಥಳದ ದರ್ಶನ ಕೂಡ ಇತ್ತು. ಜೈನ ಕಾಶಿ ಎಂದೇ ಪ್ರಸಿದ್ಧಿಯಾದ ಸಮೇದ್ ಶಿಖರ್ಜಿ ಯಾತ್ರಾ ಸ್ಥಳವಾಗಿದೆ.
ಒಡಿಶಾ ಮೂಲಕ ಜಾರ್ಖಂಡ್ ತಲುಪಿ ಸಮೇದ್ ಶಿಖರ್ಜಿ ಯಾತ್ರಿಗಳು ತೆರಳಬೇಕಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು