3:02 PM Wednesday24 - April 2024
ಬ್ರೇಕಿಂಗ್ ನ್ಯೂಸ್
ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ… ತಂತ್ರಜ್ಞಾನ ಅಭಿವೃದ್ಧಿಯಾಗಿದ್ದರೂ ಚುನಾವಣೆ 60 ದಿನಗಳ ಕಾಲ ನಡೆಯುತ್ತಿರುವುದು ಅನುಮಾನಾಸ್ಪದ: ಮಾಜಿ ಸಿಎಂ… ಸಿದ್ದರಾಮಯ್ಯ ಸರಕಾರದಲ್ಲಿ ಬದುಕಿನ ಗ್ಯಾರಂಟಿ ಕಳೆದುಕೊಂಡ ಕನ್ನಡಿಗರು: ಶಾಸಕ ಡಾ. ವೈ ಭರತ್…

ಇತ್ತೀಚಿನ ಸುದ್ದಿ

ನಿವೃತ್ತ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಎಚ್.ಎಂ. ಪೂವಪ್ಪ ಅವರಿಗೆ ಬೀಳ್ಕೊಡುಗೆ

04/06/2023, 19:46

ಮಂಗಳೂರು(reporterkarnataka.com): ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಆಗಿ ಬಜಪೆ ಪೊಲೀಸ್ ಠಾಣೆಯಲ್ಲಿ ನಿವೃತ್ತರಾದ ಎಚ್.ಎಂ.ಪೂವಪ್ಪ ಅವರಿಗೆ ಬೀಳ್ಕೊಡುಗೆ ನಡೆಯಿತು.
ಎಚ್.ಎಂ.ಪೂವಪ್ಪ ಅವರನ್ನು ಸನ್ಮಾನಿಸಿ, ಸ್ಮರಣಿಕೆ ನೀಡಿ ಗೌರವಿಸಿದ ಮಂಗಳೂರು ಸಹಾಯಕ ಪೊಲೀಸ್ ಆಯುಕ್ತ ಮನೋಜ್ ಕುಮಾರ್ ಅವರು ಮಾತನಾಡಿ, ಉತ್ತಮ ಸೇವಾ ಹಿನ್ನೆಲೆಯೊಂದಿಗೆ ಎಚ್.ಎಂ. ಪೂವಪ್ಪ ಅವರು ಸೇವೆಯಿಂದ ನಿವೃತ್ತರಾಗುತ್ತಿರುವುದು ಸಂತೋಷದ ವಿಷಯ. ನಿವೃತ್ತ ಜೀವನದಲ್ಲಿ ಕುಟುಂಬದ ಸದಸ್ಯರೊಂದಿಗೆ ಸೇವಾ ಅವಧಿಯ ಒಳ್ಳೆಯ ಅನುಭವಗಳನ್ನು ಮೆಲುಕು ಹಾಕುತ್ತಾ ಸಂತೃಪ್ತ ಜೀವನ ನಡೆಸುವಂತೆ ಶುಭ ಹಾರೈಸಿದರು.


ಪೂವಪ್ಪ ಅವರು ನಡೆಸಿರುವ 38 ವರ್ಷ ಎರಡು ತಿಂಗಳ ಸೇವಾವಧಿ ಸುದೀರ್ಘವಾಗಿದೆ. ಪೊಲೀಸ್ ಇಲಾಖೆಯ ಅಧಿಕಾರಿಗಳು ತಮ್ಮ ಸೇವಾಅವಧಿಯ ಸುಮಾರು ಶೇ.70 ಬಾಗವನ್ನು ಇಲಾಖೆ ಸಿಬ್ಬಂದಿ ಜೊತೆಯಲ್ಲೇ ಸಮವಸ್ತ್ರದೊಂದಿಗೆ ಕಳೆದಿರುತ್ತಾರೆ. ಕುಟುಂಬದ ಜೊತೆಗೆ ಕಳೆದಿರುವುದು ಕಡಿಮೆ. ಈ ವೃತ್ತಿಯಲ್ಲಿ ಇಲಾಕೆ ಸಿಬ್ಬಂದಿ ಮತ್ತು ಕುಟುಂಬದ ಸದಸ್ಯರ ತ್ಯಾಗ ಅನನ್ಯವಗಿದೆ ಎಂದು ಅವರು ಹೇಳಿದರು.
ಇಲಾಖೆಯ ಗೌರವ ಸ್ವೀಕರಿಸಿ ಮಾತನಾಡಿದ ಎಚ್.ಎಂ.ಪೂವಪ್ಪ ಅವರು, ಬಜಪೆ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಆಗಿ 38 ವರ್ಷಗಳ ಹಿಂದೆ ವೃತ್ತಿ ಜೀವನ ಆರಂಭಿಸಿದ ತಾನು ಅದೇ ಬಜಪೆ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ನಿವೃತ್ತಿಯಾಗುತ್ತಿದ್ದೇನೆ. ಸೇವಾ ಅವಧಿಯನ್ನು ಪೂರ್ಣಗೊಳಿಸಿದ ಸಂತೃಪ್ತಿಯಿದೆ. ಇಲಾಖೆ ಹಿರಿಯ ಅಧಿಕಾರಿಗಳು, ಸಹದ್ಯೋಗಿ ಮಿತ್ರರು ತೋರಿದ ಪ್ರೀತಿ, ವಿಶ್ವಾಸ, ಸಹಕಾರಕ್ಕೆ ಅಭಾರಿಯಾಗಿದ್ದೇನೆ ಎಂದು ಹೇಳಿದರು.
ಹಿರಿಯ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ನಿವೃತ್ತರ ಜೊತೆಗಿನ ಅನುಭವ ಹಂಚಿಕೊಂಡರು.
ಬಜಪೆ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಸರ್ಕಲ್ ಇನ್ಸ್‌ಪೆಕ್ಟರ್ ಕೆ.ಆರ್.ನಾಯಕ್ ಕೆ.ಆರ್.ನಾಯಕ್ ಮುಖ್ಯ ಅತಿಥಿಗಳಾಗಿದ್ದರು. ನಿವೃತ್ತ ಎಚ್.ಎಂ.ಪೂವಪ್ಪ ಅವರ ಪತ್ನಿ ಶಕುಂತಳಾ ಪೂವಪ್ಪ ಅವರು ಉಪಸ್ಥಿತರಿದ್ದರು.
ನಿವೃತ್ತ ಸಬ್ ಇನ್ಸ್‌ಪೆಕ್ಟರ್ ರಾಜಾರಾಂ ಕಾರ್ಯಕ್ರಮ ನಿರ್ವಹಿಸಿದರು. ಕೆಂಚಪ್ಪ ವಂದಿಸಿದರು.
…..

ಇತ್ತೀಚಿನ ಸುದ್ದಿ

ಜಾಹೀರಾತು