12:10 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್: ಕಡಲನಗರಿಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್

06/06/2023, 17:57

ಮಂಗಳೂರು(reporterkarnataka.com): ಪೊಲೀಸ್ ಇಲಾಖೆ ನೈತಿಕ ಪೊಲೀಸ್ ಗಿರಿ ನಡೆಯಲು ಯಾವುದೇ ಕಾರಣಕ್ಕೂ ಅವಕಾಶವೇ ನೀಡಬಾರದು. ಈ ನಿಟ್ಟಿನಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.

ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಶ್ಚಿಮ ವಲಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೇನೆ. ಕೋಮು ಸಾಮರಸ್ಯ ತರಲು ಸೂಚನೆ ನೀಡಿದ್ದೇನೆ. ನೈತಿಕ ಪೊಲೀಸ್ ಗಿರಿ ನಡೆದರೆ ರಾಜ್ಯಕ್ಕೆ ಕೆಟ್ಟ ಹೆಸರು ಬರುತ್ತದೆ. ಇದಕ್ಕೆ ಕಠಿಣ ಕ್ರಮ ತೆಗೆದುಕೊಳ್ಳಲು ಸೂಚನೆ ಕೊಟ್ಟಿದ್ದೇನೆ ಎಂದರು.
ಕರಾವಳಿ ಮಾತ್ರವಲ್ಲ ಕೋಮು ವೈಷಮ್ಯ ಇರುವ ಕಡೆಗಳಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ ಮಾಡುತ್ತೇವೆ. ಅದರ ರೂಪುರೇಷೆ ಬಗ್ಗೆ ಕಮಿಷನರ್ ತಯಾರಿಸುತ್ತಾರೆ. ಇದರ ಮುಖ್ಯ ಉದ್ದೇಶ ನೈತಿಕ ಪೊಲೀಸ್‌ಗಿರಿ ಹತ್ತಿಕ್ಕುವುದು. ಮೊದಲಿಗೆ ಮಂಗಳೂರು ಕಮಿಷನರ್ ವ್ಯಾಪ್ತಿಯಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ ಮಾಡುತ್ತೇವೆ. ಇಲ್ಲಿ ಯಶಸ್ವಿಯಾದರೆ ಇಡೀ ರಾಜ್ಯದಲ್ಲಿ ವಿಸ್ತರಣೆ ಮಾಡುತ್ತೇವೆ ಎಂದು ಅವರು ನುಡಿದರು.
ಬಿಜೆಪಿ ಆಡಳಿತದಲ್ಲಿ ಮತೀಯ ಕೊಲೆಗಳು ನಡೆದಾಗ ಪರಿಹಾರ ನೀಡುವಲ್ಲಿ ತಾರತಮ್ಯವಾಗಿದೆ. ಈ ತಾರತಮ್ಯವನ್ನು ಸರಿಪಡಿಸಲು ನಿರ್ಧರಿಸಲಾಗಿದೆ.‌ ಹತ್ಯೆಗೀಡಾದ ಫಾಝಿಲ್, ಮಸೂದ್ ಮತ್ತು ಜಲೀಲ್ ಕುಟುಂಬಗಳಿಗೆ ಪರಿಹಾರ ಕೊಡುವ ಬಗ್ಗೆ ಶೀಘ್ರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವರು ಹೇಳಿದರು.
ಯುವ ಸಮೂಹದಲ್ಲಿ ಡ್ರಗ್ಸ್ ಗೆ ಬಲಿಯಾಗಿದೆ. ಡ್ರಗ್ಸ್ ದಂಧೆ ತಡೆಯೋಕೆ ಆಗದ ರೀತಿಯಲ್ಲಿ ಬೆಳೆಯುತ್ತಿದೆ. ಆಗಸ್ಟ್ 15ರೊಳಗೆ ಕರಾವಳಿಯಲ್ಲಿ ಯಾವುದೇ ಡ್ರಗ್ಸ್ ಸಿಗದಂತೆ ಕ್ರಮ ತೆಗೆದುಕೊಳ್ಳಲು ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದರು.
ಸರ್ವ ಜನಾಂಗದ ಶಾಂತಿಯ ತೋಟ ಎಂದು ಪ್ರಣಾಳಿಕೆ ಭರವಸೆ ಕೊಟ್ಟಿದ್ದೇವೆ. ಶಾಂತಿಯ ತೋಟಕ್ಕೆ ತೊಂದರೆ ಮಾಡುವ ಕೆಲಸ ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ನಡೀತಿದೆ. ನಮಗೆ ಕೋಮು ಸಾಮರಸ್ಯ ಇರಬೇಕು. ಯಾರು ಪ್ರಚೋದನೆ ಮಾಡುತ್ತಾರೋ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು ನಮ್ಮ ಬಳಿ ಕಾನೂನುಗಳಿವೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು