10:11 PM Tuesday7 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಮಣಿಪುರದಲ್ಲಿ ಕ್ರೈಸ್ತರ ಮೇಲೆ ದೌರ್ಜನ್ಯ: ಮಂಗಳೂರಿನಲ್ಲಿ ಸಮಾನ ಮನಸ್ಕರ ಪ್ರತಿಭಟನೆ; ಕೇಂದ್ರ ಸರಕಾರ ಮಧ್ಯಪ್ರವೇಶಕ್ಕೆ ಆಗ್ರಹ

06/06/2023, 22:22

ಮಂಗಳೂರು(reporterkarnataka.com): ಮಣಿಪುರದಲ್ಲಿ ಕ್ರಿಶ್ಚಿಯನರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಮಂಗಳವಾರ ಮಂಗಳೂರಿನ ಕ್ಲಾಕ್ ಟವರ್ ಬಳಿ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ, ದ.ಕ.ಜಿಲ್ಲೆ, ಮಂಗಳೂರು ಕಥೊಲಿಕ್ ಸಭಾ ಮಂಗಳೂರು ಪ್ರದೇಶ(ರಿ) ಯುನೈಟೆಡ್ ಕ್ರಿಶ್ಚಿಯನ್ ಫೋರಂ,ಮಂಗಳೂರು ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.


ಮಣಿಪುರ ರಾಜ್ಯದಲ್ಲಿ ಬುಡಕಟ್ಟು ಜನರ ಮೀಸಲಾತಿ ವಿಚಾರದಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ ಚರ್ಚ್ ಗಳು ಹಾಗೂ ಕ್ರಿಶ್ಚಿಯನ್ ರ ಮೇಲೆ ನಡೆದ ವ್ಯಾಪಕ ದಾಳಿಯನ್ನು ಖಂಡಿಸಿದರು. ಮಣಿಪುರದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಬೇಕು ಎಂದು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಮುಖಂಡರು ಆಗ್ರಹಿಸಿದರು.
ಮಣಿಪುರದಲ್ಲಿ ಬಹುಸಂಖ್ಯಾತರಾಗಿರುವ ಕ್ರಿಸ್ಚಿಯನ್ ಸಮುದಾಯದ ನಡುವೆ ಸೌಹಾರ್ದ ವಾತಾವರಣವನ್ನು ಸಾಧಿಸುವ ಬದಲು, ಅಲ್ಲಿನ ಬಿಜೆಪಿ ರಾಜ್ಯ ಸರಕಾರವು ದ್ವೇಷದ ರಾಜಕಾರಣವನ್ನು ನಡೆಸುತ್ತಿದೆ. ಮೈತೈ ಸಮುದಾಯಕ್ಕೆ ಮೀಸಲಾತಿ ನೀಡುವ ವಿಚಾರದಲ್ಲಿ ಭುಗಿಲೆದ್ದ ಗಲಭೆ ಮುಂದಿಟ್ಟು ಕ್ರಿಶ್ಚಿಯನ್ನರ ಹಾಗೂ ಅವರ ಚರ್ಚ್ ಗಳ ಮೇಲೆ ವ್ಯಾಪಕ ದಾಳಿಗಳನ್ನು ನಡೆಸುತ್ತಿರುವ ದೌರ್ಜನ್ಯ ನಿಲ್ಲಬೇಕು. ಸಾಕಷ್ಟು ಸಂಖ್ಯೆಯ ಜನರು ಸಂತ್ರಸ್ತರಾಗಿದ್ದಾರೆ. ಕರ್ಫ್ಯೂ ಕೂಡ ಹಾಕಲಾಗಿದೆ. ದೂರಸಂಪರ್ಕ,ಇಂಟರ್ ನೆಟ್ ಸೇರಿದಂತೆ ಎಲ್ಲಾ ಸಂಪರ್ಕಗಳನ್ನು ಕಡಿತಗೊಳಿಸಲಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ದೇಶದ ಒಂದು ಪುಟ್ಟ ರಾಜ್ಯದಲ್ಲಿ ಇಂತಹ ಗಂಭೀರ ಸಮಸ್ಯೆ ತಲೆದೋರಿದೆ. ಆದರೆ ಕೇಂದ್ರ ಸರಕಾರವು ಯಾವುದೇ ಕ್ರಮಕ್ಕೆ ಮುಂದಾಗದೇ ಇರುವುದು ಖಂಡನೀಯ ಎಂದು ಪ್ರತಿಭಟನಾನಿರತರು ಆಗ್ರಹಿಸಿದರು.
ರೊಯ್ ಕ್ಯಾಸ್ಟಲಿನೊ ಅವರು ಮಾತನಾಡಿ, ಮಣಿಪುರ ರಾಜ್ಯದಲ್ಲಿ ಗಲಭೆಯನ್ನು ಸಂಪೂರ್ಣವಾಗಿ ನಿಯಂತ್ರಿಸಿ, ಮತ್ತೆ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕು. ತೀರ ಕಡಿಮೆ ಜನಸಂಖ್ಯೆಯ ಮಣಿಪುರ, ರಾಜಕೀಯ ಮತ್ತು ಸಾಮಾಜಿಕವಾಗಿ ಅಸಮತೋಲನದಿಂದ ಕೂಡಿದೆ. ಇಲ್ಲಿನ ಬುಡಕಟ್ಟು ಜನರು ಶಾಂತಿಯುತವಾಗಿ ಮೀಸಲಾತಿಗಾಗಿ ಮೆರವಣಿಗೆ ನಡೆಸಿದರು. ಆದರೆ ಇದನ್ನು ಸಮಾಜ ವಿರೋಧಿ ಶಕ್ತಿಗಳು ಹಿಂಸಾಚಾರಕ್ಕೆ ತಿರುಗಿಸಿದ್ದಾರೆ ಎಂದರು.
ಸುನಿಲ್ ಕುಮಾರ್ ಬಜಾಲ್, ಆಲ್ಫ್ರೆಡ್ ಮನೋಹರ್, ಸ್ಟ್ಯಾನಿ ಲೋಬೊ, ಕೆ ಅಶ್ರಫ್, ಮಂಜುಳಾ ನಾಯಕ್, ಫಾದರ್ ಮ್ಯಾಕ್ಸಿಂ ನೊರೊನ್ಹಾ, ಆಲ್ಫ್ರೆಡ್, ಅನಿಲ್ ಸಿಕ್ವೇರ, ನೊರಿನಾ ಪಿಂಟೋ, ಮೊಹಮದ್ ಕುಂಜತ್ತಬೈಲ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು