11:01 AM Tuesday7 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಭೀತಿ: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆ ಸಾಧ್ಯತೆ; ಮೀನುಗಾರರಿಗೆ ಮುನ್ನೆಚ್ಚರಿಕೆ

07/06/2023, 19:42

ಮಂಗಳೂರು(reporterkarnataka.com): ಹವಾಮಾನ ಮುನ್ಸೂಚನೆಯಂತೆ ಇದೇ ಜೂ. 6 ರಿಂದ 11ರ ವರೆಗೆ ಬಿಪೊರ್ ಜಾಯ್ ಚಂಡಮಾರುತದಿಂದಾಗಿ ಅರಬ್ಬಿ ಸಮುದ್ರವು ಪ್ರಕ್ಷುಬ್ಧಗೊಂಡಿದ್ದು, ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು ಕೂಡಲೇ ದಡ ಸೇರುವಂತೆ ಸೂಚಿಸಲಾಗಿದೆ.
ವಾಯುಭಾರ ಕುಸಿತ: ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನಲೆಯಲ್ಲಿ ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಮಳೆ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತರ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು ಅದರಂತೆ, ಜೂ. 11 ರವರೆಗೆ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಕೋರಲಾಗಿದೆ.
ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆವಹಿಸುವುದು. ಮೀನುಗಾರರಿಗೆ ಕಡ್ಡಾಯವಾಗಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ. ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದು. ಪ್ರವಾಸಿಗರು, ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಎಚ್ಚರಿಕೆವಹಿಸುವುದು. ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಟೋಲ್ ಫ್ರೀ ಸಂಖ್ಯೆ 24/7 ಕಂಟ್ರೋಲ್ ರೂಮ್- 1077/0824-2442590 ಸಂಪರ್ಕಿಸುವುದು.
ತುರ್ತು ಸೇವೆಗೆ ನಿಯಂತ್ರಣ ಕೊಠಡಿಗಳ ವಿವರ.
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಂಟ್ರೋಲ್ ರೂಮ್ ದೂರವಾಣಿ ಸಂಖ್ಯೆ-1077 (0824- 2442590) 24/7 ಕಾರ್ಯಾಚರಣೆಯಲ್ಲಿರುತ್ತದೆ.
ವಿಪತ್ತು ನಿರ್ವಹಣೆ ಕುರಿತಾಗಿ ನಿರ್ದೇಶನಗಳನ್ನು ನೀಡಲು, ತುರ್ತಾಗಿ ಮಾಹಿತಿಯನ್ನು ಸಂಗ್ರಹಿಸಲು ಹಾಗೂ ಸಂಬಂಧಿಸಿದವರಿಗೆ ವಿನಿಮಯ ಮಾಡಿಕೊಳ್ಳಲು ಪ್ರತ್ಯೇಕವಾಗಿ ಜಿಲ್ಲಾ ಮಟ್ಟದ, ಉಪ ವಿಭಾಗ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳನ್ನೊಳಗೊಂಡ ವಾಟ್ಸಪ್ ಗ್ರೂಪ್ ರಚಿಸಲಾಗಿದೆ.
ಜಿಲ್ಲೆಯ ಎಲ್ಲಾ ಉಪ-ವಿಭಾಗಾಧಿಕಾರಿಗಳ ಹಾಗೂ ಎಲ್ಲಾ ತಹಶೀಲ್ದಾರರ ಕಾರ್ಯಾಲಯದಲ್ಲಿ ಕಂಟ್ರೋಲ್ ರೂಮ್ ಗಳನ್ನು ತೆರೆದು 24/7 ಕಾಲ ಕಾಯನಿರ್ವಹಿಸುವ ಮೂಲಕ ಪ್ರತಿ ದಿನ ಮಳೆ ಮತ್ತು ಮಳೆಹಾನಿ ಮಾಹಿತಿಯನ್ನು ಜಿಲ್ಲಾಡಳಿತಕ್ಕೆ ಕಡ್ಡಾಯವಾಗಿ ಸಲ್ಲಿಸುವಂತೆ ನಿರ್ದೇಶನ ನೀಡಲಾಗಿರುತ್ತದೆ.
ತಾಲೂಕು ವಿಪತ್ತು ನಿರ್ವಹಣಾ ಪ್ರಾಧಿಕಾರದ ನಿಯಂತ್ರಣ ಕೊಠಡಿ ಸಂಖ್ಯೆಗಳು:
ಮಂಗಳೂರು-0824-2220587/596, ಉಳ್ಳಾಲ-0824-2204424, ಬಂಟ್ವಾಳ- 08255-232120/232500, ಪುತ್ತೂರು- 08251-230349/232799, ಬೆಳ್ತಂಗಡಿ-08256-232047/233123, ಸುಳ್ಯ- 08257-231231/230330/298330, ಮೂಡಬಿದ್ರೆ- 08258-238100/239900, ಕಡಬ-08251-260435, ಮುಲ್ಕಿ- 0824-2294496 ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು