3:55 AM Friday3 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ಕಾಂಗ್ರೆಸ್‌ ಗ್ಯಾರಂಟಿ ಯೋಜನೆ ಬಗ್ಗೆ ಮನುವಾದಿಗಳಿಂದ ಲೇವಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ

11/06/2023, 14:32

ಮೃದುಲಾ ನಾಯರ್ ಬೆಂಗಳೂರು

info.reporterkarnataka@gmail.com

ಕಾಂಗ್ರೆಸ್ ಪಕ್ಷದ 5 ಗ್ಯಾರಂಟಿ ಯೋಜನೆಗಳ ಪೈಕಿ 4 ಯೋಜನೆಗಳು ಮಹಿಳೆಯರಿಗೆ ಸಂಬಂಧಿಸಿದ್ದು, ಸಮಾಜದಲ್ಲಿ ಮಹಿಳೆಯರ ಸಬಲೀಕರಣ ನಡೆದರೆ ಮಾತ್ರ ದೇಶ ಅಭಿವೃದ್ಧಿ ಯಾಗಲು ಸಾಧ್ಯ. ಆದರೆ ಕಾಂಗ್ರೆಸ್ ನ ಗ್ಯಾರಂಟಿ ಬಗ್ಗೆ ಮನುವಾದಿಗಳು ಲೇವಡಿ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಮಹಿಳೆಯರಿಗೆ ಸರಕಾರಿ ಬಸ್ ಗಳಲ್ಲಿ ರಾಜ್ಯಾದ್ಯಂತ ಉಚಿತ ಪ್ರಯಾಣವನ್ನು ನೀಡುವ ಶಕ್ತಿ ಯೋಜನೆಗೆ ಭಾನುವಾರ ಚಾಲನೆ ನೀಡಿ ಅವರು ಮಾತನಾಡಿದರು.
ಸಮಾಜದಲ್ಲಿ ಶೇ. 50ರಷ್ಟು ಮಹಿಳೆಯರಿದ್ದಾರೆ. ಮಹಿಳೆಯರ ಸಬಲೀಕರಣ ಆಗಬೇಕಾಗಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದೆ. ಆದರೆ ಮನುವಾದಿಗಳು ಇದನ್ನು ಟೀಕೆ ಮಾಡುತ್ತಿದ್ದಾರೆ. ನಾವು ಈ ಟೀಕೆಗಳಿಗೆಲ್ಲ ಉತ್ತರ ನೀಡೊಲ್ಲ. ಸರಕಾರದ ನಡೆಸಿದವರೇ ಎಡಬಿಡಂಬಿಗಳ ತರಹ ವರ್ತಿಸುತ್ತಿದ್ದಾರೆ. ಅವರಿಗೆ ಮಹಿಳೆಯರ ಅಭಿವೃದ್ಧಿ, ಮಹಿಳೆಯರ ಸಬಲೀಕರಣ ಬೇಕಾಗಿಲ್ಲ ಎಂದು ಮುಖ್ಯಮಂತ್ರಿ ನುಡಿದರು.


ಸಾರ್ವಜನಿಕ ಕ್ಷೇತ್ರದಲ್ಲಿ ಮಹಿಳೆಯರು ತಮ್ಮನ್ನು ತೊಡಗಿಸಿಕೊಂಡರೆ ಮಾತ್ರ ಸಮಾಜ ಮತ್ತು ದೇಶದ ಅಭಿವೃದ್ಧಿ ಸಾಧ್ಯ. ಈ ಹಿಂದೆ ನಮ್ಮ ದೇಶದಲ್ಲಿ ಶೇ.30ರಷ್ಟು ಮಹಿಳೆಯರು ಸಾರ್ವಜನಿಕ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಆದರೆ 2014ರ ಬಳಿಕ ಅದರ ಪ್ರಮಾಣ ಶೇ. 24ಕ್ಕೆ ಇಳಿದಿದೆ. ಮನುವಾದಿಗಳು ಮಹಿಳೆಯರು ಹೊಸ್ತಿಲು ದಾಟಿ ಹೊರಗೆ ಹೋಗುವುದನ್ನು ಇಷ್ಟಪಡುವುದಿಲ್ಲ ಎಂಬುದನ್ನು ಇದು ಸೂಚಿಸುತ್ತದೆ ಎಂದು ಸಿದ್ದರಾಮಯ್ಯ ಟೀಕಿಸಿದರು.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಸಚಿವರಾದ ಕೆ.ಜೆ. ಜಾರ್ಜ್, ಶಾಸಕರಾದ ರಿಜ್ವಾನ್, ಸರಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು