1:09 PM Saturday18 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಮನೆ ಬಾಗಿಲಿಗೆ ಬಂದ ದೈತ್ಯ ಮೊಸಳೆ!: ಮರಕ್ಕೆ ಕಟ್ಟಿ ಹಾಕಿದ ಗ್ರಾಮಸ್ಥರು!!

12/06/2023, 10:50

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೇಸಿಗೆ ಹೊಡೆತಕ್ಕೆ ದಿನದಿಂದ ದಿನಕ್ಕೆ ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದ್ದು ನದಿ ಒಡಲಿನಿಂದ ಮೊಸಳೆಗಳು ಆಹಾರಗಳನ್ನು ಆರಿಸಿ ರೈತರ ತೋಟದ ವಸತಿ ಪ್ರದೇಶಕ್ಕೆ ಆಗಮಿಸಿದ್ದು,ಗ್ರಾಮಸ್ಥರು ಭೀತಿಗೊಂಡಿದ್ದಾರೆ.
ರೈತರಿಗೆ ಒಂದು ಕಡೆ ತಮ್ಮ ಪ್ರಾಣದ ಭೀತಿ ಎದುರಾದರೆ, ಇನ್ನೊಂದು ಕಡೆ ತಮ್ಮ ಪ್ರಾಣಿಗಳನ್ನು ರಕ್ಷಿಸಿಕೊಳ್ಳಲು ಮುಂದಾಗಿದ್ದಾರೆ. ಹಾಗಾಗಿ ಬೃಹದಾಕಾರದ ಮೊಸಳೆಯನ್ನು ಗಿಡಕ್ಕೆ ಕಟ್ಟಿಹಾಕಿ ಅಪಾಯಕಾರಿ ಸಾಹಸವನ್ನು ಮಾಡಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸವದಿ ದರ್ಗಾ ಗ್ರಾಮದ ನದಿ ತೀರದ ಜನ ವಸತಿ ಪ್ರದೇಶಗಳಿಗೆ ನಸುಕಿನ ಜಾವ 3 ಗಂಟೆ ಆಸುಪಾಸಿನಲ್ಲಿ ಪ್ರಕಾಶ ಸನದಿ ಎಂಬುವರ ಮನೆಯ ಬಳಿ ದೈತ್ಯಾಕಾರದ ಮೊಸಳೆ ಪತ್ತೆಯಾಗಿತ್ತು. ಇದೇ ವೇಳೆ ರೈತರು ಸಾಕಿರುವ ಪ್ರಾಣಿಗಳ ಮೇಲೆ ದಾಳಿ ಮಾಡಕ್ಕೆ ಮುಂದಾಗುತ್ತಿದ್ದಂತೆ ಕುಟುಂಬಸ್ಥರು ದೊಣ್ಣೆಯಿಂದ ಮೊಸಳೆಯನ್ನು ಹೊಡೆದು ಅಕ್ಕ ಪಕ್ಕದ ರೈತರು ಒಟ್ಟಾಗಿ ಮೊಸಳೆಯನ್ನು ಕಟ್ಟಾಕಿದ್ದಾರೆ. ನಂತರ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡುತ್ತಿದ್ದಂತೆ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಮೊಸಳೆಯನ್ನು ರಕ್ಷಣೆ ಕಾರ್ಯ ಮಾಡಿದ್ದಾರೆ.


ಇದೆ ವೇಳೆ ರೈತ ಪ್ರಕಾಶ ಸನದಿ ಮಾತನಾಡಿ, ನಸುಕಿನ ಮೂರು ಗಂಟೆಗೆ ಮೊಸಳೆ ಮನೆಗೆ ಬಂದಿತ್ತು, ನಮ್ಮ ಆಡಿನ ಮರಿಯನ್ನು ಮೊಸಳೆ ಹಿಡಿದಿತ್ತು. ಅವಾಗ ಮೇಕೆಗಳ ಚೀರಾಟ ಮಾಡುತ್ತಿದ್ದಂತೆ ನಾವು ಎಚ್ಚೆತ್ತುಕೊಂಡು ನಾವು ಮೊಸಳೆ ಬಾಯಿಂದ ನಮ್ಮ ಆಡದ ಮರಿಯನ್ನು ರಕ್ಷಣೆ ಮಾಡಿದ್ದೆವು, ನಂತರ ತೊಟದ ಜನರು ಸೇರಿ ಮೊಸಳೆಯನ್ನು ಹಗ್ಗದ ಸಹಾಯದಿಂದ ಮರಕ್ಕೆ ಕಟ್ಟಿಹಾಕಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ. ನದಿಯಲ್ಲಿ ನೀರು ಕಡಿಮೆ ಆಗುತ್ತಿದ್ದಂತೆ ಮೊಸಳೆಗಳು ಕೃಷಿ ಜಮೀನಿನಲ್ಲಿ ಬರುತ್ತಿದ್ದಾವೇ ನಮಗೆ ತುಂಬಾ ಆತಂಕಕ್ಕೆ ಕಾರಣವಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ನದಿ ತೀರದಲ್ಲಿ ಇದ್ದು ನಮಗೆ ರಕ್ಷಣೆ ನೀಡಬೇಕು ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು