12:16 PM Saturday18 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಮೆಥಾಂಪೆಟಾಮೈನ್ ಡ್ರಗ್ಸ್ ಮಾರಾಟ: ತಲಪಾಡಿ ಕೆ.ಸಿ.ರೋಡ್ ಮೂಲದ ಇಬ್ಬರು ಆರೋಪಿಗಳ ಬಂಧನ

13/06/2023, 00:18

ಮಂಗಳೂರು(reporterkarnataka.com): ನಿಷೇಧಿತ ಮೆಥಾಂಪೆಟಾಮೈನ್ ಮಾದಕ ದ್ರವ್ಯವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಪೊಲೀಸರು ನೆತ್ತಿಲಪದವು ಬಳಿ ಬಂಧಿಸಿದ್ದಾರೆ.
ತಲಪಾಡಿ ಕೆ.ಸಿ. ರೋಡ್ ನಿವಾಸಿಯಾಗಿರುವ ಅಬ್ದುಲ್ ರಶೀದ್ ಮೊಯದ್ದೀನ್ (41) ಹಾಗೂ ದೇರಳಕಟ್ಟೆಯ ಪಿ. ಆರೀಫ್ (40) ಬಂಧಿತ ಆರೋಪಿಗಳು. ಇವರು ರಾಜಕೀಯ ಪಕ್ಷವೊಂದಕ್ಕೆ ಸೇರಿದ ಕಾರ್ಯಕರ್ತರು ಎಂದು ತಿಳಿದು ಬಂದಿದೆ.



ನೆತ್ತಿಲಪದವು ಕಂಬಳ ನಡೆಸುವ ಜಾಗದ ಬಳಿ ಅಕ್ರಮವಾಗಿ ಮೆಥಾಂಪೆಟಾಮೈನ್ ಮಾದಕ ದ್ರವ್ಯವನ್ನು ಮಾರಾಟ ಮಾಡುತ್ತಿರುವುದಾಗಿ ಕೊಣಾಜೆ ಪೊಲೀಸ್ ಠಾಣೆ ಪಿ.ಎಸ್.ಐ ಅಶೋಕ್ ಅವರಿಗೆ ಬಂದ ಖಚಿತ ಮಾಹಿತಿಯಂತೆ ಸ್ಥಳಕ್ಕೆ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ ವೇಳೆ ಇಬ್ಬರು ಆರೋಪಿಗಳು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
ಆರೋಪಿಗಳಿಂದ 20 ಗ್ರಾಂ ಮೆಥಾಂಪೆಟಾಮೈನ್ ಹಾಗೂ ಕೃತ್ಯಕ್ಕೆ ಉಪಯೋಗಿಸಿದ ಸ್ಕೂಟರ್ ನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ವಶಪಡಿಸಿದ ಸೊತ್ತುಗಳ ಒಟ್ಟು ಮೌಲ್ಯ 1,06,500/ ಎಂದು ಪೊಲೀಸರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು