3:16 AM Friday17 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಸರಕಾರಿ ಬಸ್ ಕಾದು ಸುಸ್ತಾದ ಮಹಿಳೆಯರು : ಹೊರನಾಡಿಗೆ ಸಾಗಲು ಮಹಿಳೆಯರ ಪರದಾಟ

17/06/2023, 19:17

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@mail.com

ಸರ್ಕಾರ ಉಚಿತ ಬಸ್ ನಲ್ಲಿ ಹೊರನಾಡು ಪ್ರವಾಸಿ ತಾಣಕ್ಕೆ ಸಾಗಲು ಮಹಿಳೆಯರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಬೆಳಿಗ್ಗೆಯಿಂದಲೇ ಹರಿಹರ, ಹೊಸಪೇಟೆ, ಶಿವಮೊಗ್ಗ, ಬೇಲೂರು ಮತ್ತಿತರ ಕಡೆಯಿಂದ ಸರ್ಕಾರಿ ಬಸ್ ನಲ್ಲಿ ಮಹಿಳೆಯರು ಕೊಟ್ಟಿಗೆಹಾರ ಬಸ್ ನಿಲ್ದಾಣಕ್ಕೆ ಬಂದಿಳಿದು ಹೊರನಾಡು ದೇವಸ್ಥಾನಕ್ಕೆ ಸಾಗಲು ಬಸ್ ಕಾಯುತ್ತಿದ್ದರು.
ಆದರೆ ಕೊಟ್ಟಿಗೆಹಾರದಿಂದ ಹೊರನಾಡಿಗೆ ಸರ್ಕಾರಿ ಬಸ್ ಸಂಜೆ 3.30ಗೆ ಕೆಲವೇ ಒಂದು ಬಸ್ ಗಳು ಇರುವುದರಿಂದ ಬಸ್ ಭರ್ತಿಯಾಗಿರುವ ಬರುತ್ತಿವೆ. ಇದರಿಂದ ಬೆಳಿಗ್ಗೆಯಿಂದಲೇ ವಿವಿಧ ಊರುಗಳಿಂದ ಬಂದ ಮಹಿಳೆಯರು ಬಸ್ ಕಾದು ಸುಸ್ತಾಗುತ್ತಿದ್ದಾರೆ. ಬಸ್ ಕಾಯುತ್ತೇವೆ ಇಲ್ಲವಾದರೆ ಬಸ್ ನಿಲ್ದಾಣದಲ್ಲೇ ಮಲಗುತ್ತೇವೆ. ಸರ್ಕಾರ ಹೊರನಾಡಿಗೆ ಹೆಚ್ಚು ಬಸ್ ಗಳನ್ನು ಬಿಟ್ಟು ಮಹಿಳೆಯರಿಗೆ ದೇವಸ್ಥಾನಕ್ಕೆ ತೆರಳಲು ಸಹಕರಿಸಬೇಕು ಎಂದು ಬೇಲೂರಿನ ಮಹಿಳೆ ಶಕುಂತಲಾ ರಿಪೋರ್ಟರ್ ಕರ್ನಾಟಕಕ್ಕೆ ತಿಳಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ರಾಜ್ಯದ ಒಳಗಡೆ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಟ್ಟಿರುವುದು ಸಂತಸ ತಂದಿದೆ.ಆದರೆ ಬಸ್ ಗಳ ಕೊರತೆಯಿಂದ ನಿರೀಕ್ಷಿತ ಸಮಯಕ್ಕೆ ತಲುಪಲಾಗುತ್ತಿಲ್ಲ. ಬಸ್ ಪ್ರಯಾಣಿಕರಿಂದ ಭರ್ತಿಯಾಗಿ ಬರುವುದರಿಂದ ಬಸ್ ಹತ್ತಲು ಆಗುತ್ತಿಲ್ಲ ಎಂದು ಬೇಸರ ವ್ಯಕ್ತ ಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು