10:05 AM Saturday4 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ವಿದ್ಯುತ್ ದರ ಏರಿಕೆಯಿಂದ ಕುಕ್ಕುಟೋದ್ಯಮಕ್ಕೆ ಹೊಡೆತ: ಸರಕಾರದ ಕ್ರಮಕ್ಕೆ ಕೆಪಿಎಫ್‌ಬಿಎ ವಿರೋಧ

27/06/2023, 14:53

ಬೆಂಗಳೂರು(reporterkarnataka.com): ರಾಜ್ಯದಲ್ಲಿ ವಿದ್ಯುತ್ ದರ ಪ್ರತಿ ಯುನಿಟ್‌ಗೆ 2.89 ರೂ.ಗೆ ಏರಿಕೆಯಾಗಿರುವುದ್ದರಿಂದ ಅನೇಕ ಕೋಳಿ ಸಾಕಣೆ ಕೇಂದ್ರಗಳು ಮತ್ತು ಸಂಸ್ಕರಣಾ ಘಟಕಗಳನ್ನು ನಡೆಸಲು ಸಾಧ್ಯವಿಲ್ಲವೆಂದು ಕರ್ನಾಟಕ ಪೌಲ್ಟ್ರಿ ಫಾರ್ಮರ್ಸ್‌ ಮತ್ತು ಬ್ರೀಡರ್ಸ್‌ ಅಸೋಸಿಯೇಶನ್(ಕೆಪಿಎಫ್‌ಬಿಎ) ವಿದ್ಯುತ್ ದರ ಏರಿಕೆಗೆ ವಿರೋಧ ವ್ಯಕ್ತಪಡಿಸಿದೆ.
ಕೆಪಿಎಫ್‌ಬಿಎ ಅಧ್ಯಕ್ಷ ಡಾ. ಸುಶಾಂತ್ ಬಿ.ರೈ ಮಾತನಾಡಿ, ವಿದ್ಯುತ್ ದರದ ಹೆಚ್ಚಳವು ಈಗಾಗಲೇ ಅತ್ಯಂತ ಕಡಿಮೆ ಲಾಭದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೋಳಿ ಫಾರಂಗಳಿಗೆ ಹೆಚ್ಚುವರಿ ಹೊರೆಯಾಗಲಿದ್ದು, ಕೋಳಿ ಘಟಕಗಳು ಮತ್ತು ಫೀಡ್ ತಯಾರಿಕೆಯ ಉತ್ಪಾದನಾ ವೆಚ್ಚದಲ್ಲಿ ಹೆಚ್ಚಳಕ್ಕೆ ಕಾರಣವಾಗುತ್ತದೆ. ಇದರ ಪರಿಣಾಮವಾಗಿ ಗ್ರಾಹಕರಿಗೂ ಖರೀದಿಯಲ್ಲಿಯೂ ದರ ಏರಿಕೆಯಾಗುವುದರಿಂದ ಸಮಸ್ಯೆಯಾಗುತ್ತದೆ. ಇದರೊಂದಿಗೆ ಅನೇಕ ಘಟಕಗಳು ತಮಿಳುನಾಡಿನ ಹೊಸೂರಿಗೆ ಮತ್ತು ನೆರೆಯ ರಾಜ್ಯಗಳಾದ ಕೇರಳ, ಆಂದ್ರಪ್ರದೇಶ, ತೆಲಂಗಾಣ ಮತ್ತು ಮಹಾರಾಷ್ಟ್ರದ ಇತರ ಗಡಿ ಪ್ರದೇಶಗಳಿಗೆ ವಲಸೆ ಹೋಗುತ್ತವೆ ಇದರಿಂದ ರಾಜ್ಯದ ಆದಾಯ ಜತೆಗೆ ಉದ್ಯೋಗ ಸೃಷ್ಟಿಯಲ್ಲೂ ನಷ್ಟವಾಗುತ್ತದೆ. ಕೋಳಿ ಮತ್ತು ಮೇವು ತಯಾರಿಕಾ ವಲಯದ ಹಿತಾಸಕ್ತಿಯಿಂದ ಮಾತ್ರವಲ್ಲದೆ ಹೂಡಿಕೆಯ ತಾಣವಾಗಿರುವ ಹಿನ್ನೆಲೆ ರಾಜ್ಯದ ಹೆಚ್ಚಿನ ಹಿತಾಸಕ್ತಿಯಲ್ಲಿ ವಿದ್ಯುತ್ ದರದ ಏರಿಕೆಯನ್ನು ತಕ್ಷಣವೇ ಹಿಂತೆಗೆದುಕೊಳ್ಳುವಂತೆ ಕೆಪಿಎಫ್‌ಬಿಎ ಸರ್ಕಾರವನ್ನು ಒತ್ತಾಯಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು