3:45 AM Wednesday1 - May 2024
ಬ್ರೇಕಿಂಗ್ ನ್ಯೂಸ್
ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ…

ಇತ್ತೀಚಿನ ಸುದ್ದಿ

ಮಂಗಳೂರು: ಭಾರೀ ಗಾಳಿ ಮಳೆಗೆ ಬಿಕರ್ಣಕಟ್ಟೆ ಸಮೀಪ ಉರುಳಿ ಬಿದ್ದ ಬೃಹತ್ ಹೋರ್ಡಿಂಗ್ಸ್; ಪಡೀಲ್ ನಲ್ಲಿ ಹೊಸ ಡಿಸಿ ಕಚೇರಿಗೆ ನೆರೆ!

05/07/2023, 15:18

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com
ಕರಾವಳಿಯಲ್ಲಿ ಇಂದು ಕೂಡ ಬಿರುಸಿನ ಮಳೆ ಮುಂದುವರಿದಿದ್ದು, ಬುಧವಾರ ಸುರಿದ ಭಾರೀ ಮಳೆಗೆ ನಗರದ ಹಲವೆಡೆ ಆವಾಂತರ ಸೃಷ್ಟಿ ಯಾಗಿದೆ.


ಬುಧವಾರ ಬೆಳಗ್ಗಿನ ನಂತರ ಸುರಿದ ಭಾರೀ ಗಾಳಿ ಮಳೆಗೆ ನಗರದ ಹಲವೆಡೆ ವಿದ್ಯುತ್ ಕಂಬ, ಬೃಹತ್ ಹೋರ್ಡಿಂಗ್ಸ್ ಧರಾಶಾಹಿಯಾಗಿದೆ. ನಗರದ ಬಿಕರ್ಣಕಟ್ಟೆ ಬಳಿ ಬೃಹತ್ ಹೋರ್ಡಿಂಗ್ಸ್ ಗಾಳಿ ಮಳೆಯ ಅಬ್ಬರಕ್ಕೆ ನೆಲಕ್ಕಪ್ಪಳಿಸಿದೆ. ಇದರಿಂದ ಹಲವು ವಾಹನಗಳು ಜಖಂಗೊಂಡಿವೆ. ಅದೃಷ್ಟವಶಾತ್ ಯಾರೂ ಇಲ್ಲದಿರುವುದರಿಂದ ಪ್ರಾಣಾಪಾಯ ತಪ್ಪಿದೆ. ನಂತೂರು- ಪಡೀಲ್ ರಸ್ತೆಯಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಯಿತು. ಪಡೀಲ್ ಸಮೀಪ ನಿರ್ಮಿಸಿದ ನೂತನ ಜಿಲ್ಲಾಧಿಕಾರಿ ಕಚೇರಿ ಮಂಭಾಗದಲ್ಲಿ ನೆರೆ ಬಂದಿದೆ. ಕದ್ರಿ ಕೈಬಟ್ಟಲ್ ನಲ್ಲಿ ವಿದ್ಯುತ್ ಕಂಬ ಉರುಳಿ ಬಿದ್ದಿದೆ. ಮೆಸ್ಕಾಂ ವಿದ್ಯುತ್ ತಂತಿ ತುಂಡಾಗಿ ನೆಲಕ್ಕೆ ಬಿದ್ದಿವೆ. ನಗರದ ಪಿವಿಎಸ್ ಬಳಿಯ ಖೈಬರ್ ಪಾಸ್ ನ ಗುಡ್ಡ ಕುಸಿದಿದೆ. ಹಂಪನಕಟ್ಟೆಯ ಸಿಗ್ನಲ್ ಕೆಟ್ಟು ಹೋಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು