11:39 PM Friday3 - May 2024
ಬ್ರೇಕಿಂಗ್ ನ್ಯೂಸ್
ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ…

ಇತ್ತೀಚಿನ ಸುದ್ದಿ

ಜೈನ ಮುನಿ ಹತ್ಯೆ: ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ರಾಷ್ಟ್ರೀಯ ಕಾರ್ಯಕಾರಿ ನಿರ್ದೇಶಕ ರೋಹಿತ್ ಕುಮಾರ್ ಕಟೀಲ್ ಖಂಡನೆ

10/07/2023, 18:27

ಕಾರ್ಕಳ(reporterkarnataka.com): ಚಿಕ್ಕೋಡಿ ಹಿರೇಕೋಡಿಯ ನಂದಿಪರ್ವತ ಆಶ್ರಮದ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜ ಅವರ ಹತ್ಯೆ ಖಂಡನೀಯ. ಇದು ಕೇವಲ ಒಬ್ಬ ವ್ಯಕ್ತಿಯ ಹತ್ಯೆಯಲ್ಲ ಸರ್ವ ಮನುಕುಲದ ಹತ್ಯೆಯಾಗಿದೆ. ತನ್ನ ಜೀವನವನ್ನು ಸೇವೆಗಾಗಿ ಮುಡಿಪಾಗಿಟ್ಟ,ಜೀವನ ಪರ್ಯಂತ ಮಾನವ ಸಮುದಾಯಕ್ಕೆ ಶಾಂತಿಯ ಸಂದೇಶವನ್ನು ಸಾರುತ್ತಿದ್ದ ಜೈನ ಮುನಿಗಳ ಹತ್ಯೆ ಕೇವಲ ಒಂದು ಸಮುದಾಯಕ್ಕೆ ಮಾತ್ರವಲ್ಲದೆ ಸಮಸ್ತ ಮಾನವ ಸಮುದಾಯಕ್ಕೆ ಆಘಾತ ಉಂಟು ಮಾಡಿದೆ. ಈ ಅಮಾನವೀಯ ಕ್ರತ್ಯವನ್ನು ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ರಾಷ್ಟ್ರೀಯ ಕಾರ್ಯ ಕಾರಿ ನಿರ್ದೇಶಕ ರೋಹಿತ್ ಕುಮಾರ್ ಕಟೀಲ್ ಖಂಡಿಸಿದ್ದಾರೆ ಮನುಕುಲದ ಸೇವೆಗಾಗಿ ತಮ್ಮ ಆಶೆ , ಆಕಾಂಕ್ಷೆ , ಆಸ್ತಿ , ಸಂಪತ್ತು , ಕುಟುಂಬವನ್ನು ತ್ಯಜಿಸಿರುವ ಜೈನ ಮುನಿಗಳು ಒಂದು ಸಮುದಾಯಕ್ಕೆ ಸೀಮಿತವಾಗದೆ ಜಗತ್ತಿಗೆ ಶಾಂತಿ, ಅಹಿಂಸೆ ಸಂದೇಶ ನೀಡುವವರು. ಅವರ ಸದ್ಗುಣ, ಸಹಾಯವನ್ನು ದುರುಪಯೋಗ ಮಾಡಿಕೊಂಡು ಕೊಲೆ ಮಾಡುವ ಮಟ್ಟಕ್ಕೆ ಇಳಿದಿರುವ ಕೊಲೆಗಡುಕರನ್ನು ಸರಕಾರ ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಂಡು ತಕ್ಷಣವೇ ಕಠಿಣ ಶಿಕ್ಷೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು