1:57 AM Friday3 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ಉಡುಪಿ: ಆಗಸ್ಟ್ 6ರಂದು ಹಿರಿಯ ವಿದ್ವಾಂಸ, ನಾಡೋಜ ಕೆ. ಪಿ. ರಾವ್ ಅವರಿಗೆ ಅಭಿನಂದನಾ ಕಾರ್ಯಕ್ರಮ

13/07/2023, 18:38

ಉಡುಪಿ(reporterkarnataka.com): ನಾಡಿನ ಹಿರಿಯ ವಿದ್ವಾಂಸ, ನಾಡೋಜ ಡಾ. ಕೆ. ಪಿ ರಾವ್ ಅವರಿಗೆ ಅಭಿನಂದನಾ ಕಾರ್ಯಕ್ರಮ ಆಗಸ್ಟ್ 6ರಂದು ಬೆಳಗ್ಗೆ 9.00 ಗಂಟೆಗೆ ಉಡುಪಿಯ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ.
ಕೆ.ಪಿ.ರಾವ್ ಕಿರು ಪರಿಚಯ: ಕಿನ್ನಿಕಂಬಳ ಪದ್ಮನಾಭ ರಾವ್ (ಫೆಬ್ರವರಿ ೨೯, ೧೯೪೦), ಭಾರತೀಯ ಭಾಷೆಗಳಲ್ಲಿ ಕಂಪ್ಯೂಟಿಂಗ್ ಕ್ಷೇತ್ರದ ಪಿತಾಮಹರೆಂದೇ ಪ್ರಸಿದ್ಧರು.
ಈಗ ವ್ಯಾಪಕವಾಗಿ ಬಳಕೆಯಲ್ಲಿರುವ ಕರ್ನಾಟಕ ಸರ್ಕಾರದ ಅಧಿಕೃತ ಕೀಲಿಮಣೆಯ ಮೂಲ ವಿನ್ಯಾಸವನ್ನು (‘ನುಡಿ’ ವಿನ್ಯಾಸ) ರೂಪಿಸಿದ್ದು ಕೆ. ಪಿ. ರಾವ್ ಅವರ ಸಾಧನೆ.
ಜನನ ಮತ್ತು ವಿದ್ಯಾಭ್ಯಾಸ: ಜನನ ೧೯೪೦ರ ಫೆಬ್ರುವರಿ ೨೯ರಂದು, ಮಂಗಳೂರು ಬಳಿಯ ಕಿನ್ನಿಕಂಬಳದಲ್ಲಿ. ಕಿನ್ನಿಕಂಬಳದಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ, ಮಂಗಳೂರಿನಲ್ಲಿ ಪ್ರೌಢಶಾಲೆ ಹಾಗೂ ಕಾಲೇಜು ವ್ಯಾಸಂಗ. ೧೯೫೯ರಲ್ಲಿ ಮಂಗಳೂರಿನ ಅಲೋಶಿಯಸ್ ಕಾಲೇಜಿನಿಂದ ಬಿಎಸ್ಸಿ ಪದವಿ.
ಕುಟುಂಬ: ಪತ್ನಿ ನಿರ್ಮಲಾ ಉಡುಪಿಯವರು, ವಿವಾಹವಾದದ್ದು ೧೯೬೪ರಲ್ಲಿ. ಈ ದಂಪತಿಗೆ ಇಬ್ಬರು ಮಕ್ಕಳು ಹಾಗೂ ನಾಲ್ವರು ಮೊಮ್ಮಕ್ಕಳು.
ಉದ್ಯೋಗ: ಮೊದಲಿಗೆ ಮುಂಬಯಿಯ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರೀಸರ್ಚ್(ಟಿಐಎಫ್‌ಆರ್)ನ ಆಣುಶಕ್ತಿ ವಿಭಾಗದಲ್ಲಿ ಸಂಶೋಧಕರು.
೧೯೭೦ರ ದಶಕದಲ್ಲಿ ಟಾಟಾ ಪ್ರೆಸ್ ಸೇರಿದಾಗ ಅಕ್ಷರಗಳೊಡನೆ ಒಡನಾಟದ ಪ್ರಾರಂಭ. ಮುಂದೆ ಮಾನೋಟೈಪ್ ಸಂಸ್ಥೆಯ ನಿರ್ದೇಶಕರಾಗಿ, ಕ್ವಾರ್ಕ್ ಎಕ್ಸ್‌ಪ್ರೆಸ್ – ಅಡೋಬಿ ಸಿಸ್ಟಂಸ್ ಮುಂತಾದ ಸಂಸ್ಥೆಗಳ ಸಲಹೆಗಾರರಾಗಿ, ಮಣಿಪಾಲ ಸಮೂಹದ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಾಧ್ಯಾಪಕರಾಗಿ ಕೆಲಸ ನಿರ್ವಹಣೆ.
ಸಾಧನೆಗಳು: ಸಿಂಧೂ ಲಿಪಿಯನ್ನು ಕಂಪ್ಯೂಟರ್ ಬಳಸಿ ಮುದ್ರಿಸುವ ಪ್ರಯತ್ನದಲ್ಲಿ ಮಹತ್ವದ ಪಾತ್ರ. ಉಚ್ಚಾರಣಾತ್ಮಕ ತರ್ಕ ಬಳಸಿದ ಮೊದಲ ಕೀಬೋರ್ಡ್ ವಿನ್ಯಾಸದ ಸೃಷ್ಟಿ. ಇದೇ ತರ್ಕ ಬಳಸಿ ಕನ್ನಡದ ಕೀಬೋರ್ಡ್ ವಿನ್ಯಾಸ ತಯಾರಿಕೆ. ಕನ್ನಡದ ಪದಸಂಸ್ಕಾರಕ ತಂತ್ರಾಂಶ ‘ಸೇಡಿಯಾಪು’ ರಚಿಸಿ ಮುಕ್ತ ಬಳಕೆಗೆ ನೀಡಿದ ಹಿರಿಮೆ.
ಪ್ರಶಸ್ತಿ ಗೌರವಗಳು: ಕನ್ನಡ ಕೀಲಿಮಣೆ ವಿನ್ಯಾಸಕ್ಕೆ ‘ಕರ್ನಾಟಕ ಸರಕಾರದ ಅಧಿಕೃತ ಕೀಲಿಮಣೆ ವಿನ್ಯಾಸ’ವೆಂಬ ಮಾನ್ಯತೆ. ತುಳು ಅಕಾಡೆಮಿ ಸೇರಿದಂತೆ ಹಲವು ಸಂಘಸಂಸ್ಥೆಗಳಿಂದ ಗೌರವ ಸಮರ್ಪಣೆ.
ಆಳ್ವಾಸ್ ನುಡಿಸಿರಿ ೨೦೦೯ರಲ್ಲಿ ಸನ್ಮಾನ.
೨೦೧೩ ರಲ್ಲಿ ವಿಶ್ವಕರ್ಮ ಪ್ರಶಸ್ತಿ. ೨೦೧೩ರಲ್ಲಿ ಕನ್ನಡ ವಿಶ್ವವಿದ್ಯಾಲಯದಿಂದ ನಾಡೋಜ ಪ್ರಶಸ್ತಿ. ೨೦೧೩ ರ ಏಪ್ರಿಲ್ ತಿಂಗಳಲ್ಲಿ ಬೆಂಗಳೂರಿನ ಉದಯಭಾನು ಕಲಾಸಂಘದಿಂದ ಪರಿಚಯಾತ್ಮಕ ಕೃತಿ “ಕಂಪ್ಯೂಟರ್ ಕನ್ನಡ ಕೆ. ಪಿ. ರಾವ್” ಪ್ರಕಟಣೆ. ೨೦೧೩ ರ ಸಾಲಿನ ರಾಜ್ಯೋತ್ಸವ ಪ್ರಶಸ್ತಿ.
೨೦೨೧ ರಲ್ಲಿ ‘ಕಾರಂತ ಬಾಲವನ ಪ್ರಶಸ್ತಿ’
ಕೃತಿಗಳು: ರಾವ್ ಅವರು ‘ವರ್ಣಕ’ ಎಂಬ ಕಾದಂಬರಿಯನ್ನು ಬರೆದಿದ್ದಾರೆ. ೨೦೨೧ರಲ್ಲಿ ಅಂಕಿತ ಪ್ರಕಾಶನದಿಂದ ಪ್ರಕಟಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು