12:41 PM Friday17 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಪ್ರತಿ ಶಾಲೆ ಶಾಲೆಗಳಲ್ಲಿಯೂ ಕನ್ನಡದ ಕಂಪು ಹರಡಬೇಕು: ಕಸಾಪ ಮಂಗಳೂರು ತಾಲೂಕು ಅಧ್ಯಕ್ಷ ಮಂಜುನಾಥ ಎಸ್. ರೇವಣ್ಕರ್

19/07/2023, 10:42

ಮಂಗಳೂರು(reporterkarnataka.com): ಪ್ರತಿ ಶಾಲೆಯಲ್ಲಿಯೂ ಕನ್ನಡದ ಕಂಪನ್ನು ಹರಡುವ ಪ್ರಯತ್ನದಲ್ಲಿ ದ. ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಂಗಳೂರು ತಾಲೂಕು ಘಟಕ ತೊಡಗಿಕೊಳ್ಳಲಿದೆ ಎಂದು ಕಸಾಪ ಮಂಗಳೂರು ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ ಎಸ್. ರೇವಣ್ಕರ್ ಹೇಳಿದರು.
ನಗರದ ಬೆಂಗ್ರೆ ಸ್ಯಾಂಡ್ಸ್ ಪಿಟ್ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಕನ್ನಡ ಕವನ ಗಾಯನ ಸ್ಪರ್ಧೆಯಲ್ಲಿ ನಿರ್ಣಾಯಕ ಹಾಗೂ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಕನ್ನಡ ಭಾವಗೀತೆಗಳನ್ನು ಹಾಡುವ ಮಕ್ಕಳ ಉತ್ಸಾಹವನ್ನು ಕೊಂಡಾಡಿದ ಅವರು , ಅಧ್ಯಯನ, ಪ್ರತಿಭೆ ಮತ್ತು ಹವ್ಯಾಸಗಳ ಮೂಲಕ ಜೀವನದಲ್ಲಿ ಯಶಸ್ಸು ಗಳಿಸುವ ದಾರಿಯನ್ನು ತಿಳಿಸಿಕೊಟ್ಟರು.
ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ರಾಕೇಶ್ ವಿ. ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಗೀತ ಗಾಯನ ಸ್ಪರ್ಧೆ 7ನೇ ತರಗತಿ ವಿಭಾಗದಲ್ಲಿ ನವ್ಯ ( ಪ್ರಥಮ ) ಗಂಗಮ್ಮ ( ದ್ವಿತೀಯ ) ಗೌತಮ್ ( ತೃತೀಯ ) , 6 ನೇ ತರಗತಿ ವಿಭಾಗದಲ್ಲಿ ಹವಿಶ ( ಪ್ರಥಮ ) ದಿಯಾ ( ದ್ವಿತೀಯ ) ಅನುಷ್ಕಾ ( ತೃತೀಯ ) ಹಾಗೂ 1ರಿಂದ 4 ನೆಯ ತರಗತಿ ವಿಭಾಗದಲ್ಲಿ ಡಿಂಪಲ್ ( ಪ್ರಥಮ ) ನಿಹಾರಿಕಾ ( ದ್ವಿತೀಯ ) ತನು ( ತೃತೀಯ ) ಬಹುಮಾನ ಪಡೆದರು.ತಾಲೂಕು ಘಟಕದ ಕೋಶಾಧಿಕಾರಿ ಎನ್. ಸುಬ್ರಾಯ ಭಟ್ ವಿದ್ಯಾರ್ಥಿಗಳ ಗಾಯನದ ಬಗ್ಗೆ ಹರ್ಷ ವ್ಯಕ್ತ ಪಡಿಸುತ್ತಾ ಉಪಯುಕ್ತ ಸಲಹೆಗಳನ್ನು ನೀಡಿದರು.
ಶಾಲಾ ಮುಖ್ಯ ಶಿಕ್ಷಕಿ ಉಮಾಲಕ್ಷ್ಮೀ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿ ಇನ್ನಷ್ಟು ಇಂತಹ ಕಾರ್ಯಕ್ರಮಗಳಾಗಲಿ ಎಂದು ಹಾರೈಸಿದರು.
ಶಿಕ್ಷಕಿ ಸುಮಾ ಕಾರ್ಯಕ್ರಮ ನಿರೂಪಿಸಿದರು. ಬೋಧಕ ವರ್ಗದ ಉಷಾ ಕೆ , ಅಶ್ವಿನಿ , ಶೀತಲ್ , ದೀಪಾ ಉಪಸ್ಥಿತರಿದ್ದು ಸಹಕರಿಸಿದರು. ಸುಮಾರು 80 ವಿದ್ಯಾರ್ಥಿಗಳು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು