5:29 PM Wednesday1 - May 2024
ಬ್ರೇಕಿಂಗ್ ನ್ಯೂಸ್
ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ… ಸುಪ್ರೀಂ ಕೋರ್ಟ್ ಸೂಚಿಸಿದ ಬಳಿಕ ಕೊನೆಗೂ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ…

ಇತ್ತೀಚಿನ ಸುದ್ದಿ

ಗಾಂಧಿ ಪ್ರತಿಮೆಗೆ ನಮಿಸಿ ಸಂಸತ್ತಿಗೆ ಆಗಮಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ: ಇಂಡಿಯ ಒಕ್ಕೂಟದಿಂದ ಭರ್ಜರಿ ಸ್ವಾಗತ

07/08/2023, 14:47

ಹೊಸದಿಲ್ಲಿ(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗಾಂಧಿ ಪ್ರತಿಮೆಗೆ ನಮಸ್ಕರಿಸಿ ಸೋಮವಾರ ಸಂಸತ್ತಿಗೆ ಮರು ಪ್ರವೇಶ ಮಾಡಿದರು.
ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರ ರಾಹುಲ್ ಗಾಂಧಿ ಅವರ ಸದಸ್ಯತ್ವವನ್ನು ಅನರ್ಹಗೊಳಿಸಿತ್ತು. ರಾಹುಲ್ ಗಾಂಧಿ ಅವರಿಗೆ ವಿಧಿಸಿದ ಶಿಕ್ಷೆಗೆ ಸುಪ್ರೀಂಕೋರ್ಟ್ ತಡೆ ನೀಡಿದ ಹಿನ್ನೆಲೆಯಲ್ಲಿ ಅವರ ಲೋಕಸಭಾ ಸದಸ್ಯತ್ವ ಸ್ಥಾನವನ್ನು ಪುನಃಸ್ಥಾಪಿಸಲಾಗಿದೆ.
ಸಂಸತ್ತಿಗೆ ಆಗಮಿಸಿದ ರಾಹುಲ್ ಅವರಿಗೆ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷದ ಸಂಸದರು ಆತ್ಮೀಯ ಸ್ವಾಗತ ಕೋರಿದರು.
ಮಧ್ಯಾಹ್ನ 12 ಗಂಟೆ ಸುಮಾರಿಗೆ ಸಂಸತ್ ಭವನಕ್ಕೆ ಆಗಮಿಸಿದ ರಾಹುಲ್ ಗಾಂಧಿ, ನೇರವಾಗಿ ಮಹಾತ್ಮ ಗಾಂಧಿ ಪ್ರತಿಮೆ ಬಳಿಗೆ ತೆರಳಿ ಪುಷ್ಪ ನಮನ ಸಲ್ಲಿಸಿದರು.
ಸಂಸತ್ತಿನ ಗೇಟ್ ನಂಬರ್ ಒಂದರಲ್ಲಿ ಅವರನ್ನು ಸ್ವಾಗತಿಸಿದ ಕಾಂಗ್ರೆಸ್ ಸಂಸದರು ಮತ್ತು ಇಂಡಿಯ ಒಕ್ಕೂಟದ ವಿರೋಧ ಪಕ್ಷದ ಸದಸ್ಯರು ರಾಹುಲ್ ಪರ ಘೋಷಣೆಗಳನ್ನು ಕೂಗಿದರು.

ಇತ್ತೀಚಿನ ಸುದ್ದಿ

ಜಾಹೀರಾತು