7:52 PM Saturday18 - May 2024
ಬ್ರೇಕಿಂಗ್ ನ್ಯೂಸ್
ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ…

ಇತ್ತೀಚಿನ ಸುದ್ದಿ

ರೋಟರಿ ಜಿಲ್ಲೆ 3181ರ ಪ್ರಥಮ ವಾಶ್ ಗ್ರೂಪ್ ರಾಯಭಾರಿಯಾಗಿ ಡಾ.ರಾಜೇಶ್ ಬೆಜ್ಜಂಗಳ ನೇಮಕ

07/08/2023, 13:33

ಪುತ್ತೂರು(reporterkarnataka.com): ಅಂತಾರಾಷ್ಟ್ರೀಯ ರೋಟರಿಯಲ್ಲಿ ನೀರು ಮತ್ತು ಶುಚಿತ್ವಕ್ಕೆ ಸಂಬಂಧಿಸಿದ ಕ್ರಿಯಾತ್ಮಕ ಗುಂಪು (WASH – water,sanitation ,hygiene) ಇದರ ರೋಟರಿ ಜಿಲ್ಲೆ 3181 ರ ಪ್ರಥಮ ರಾಯಭಾರಿಯಾಗಿ ರೊಟೇರಿಯನ್ ಡಾ. ರಾಜೇಶ್ ಬೆಜ್ಜಂಗಳ ಅವರು ಮೂರು ವರ್ಷಗಳ ಅವಧಿಗೆ ನೇಮಕಗೊಂಡಿದ್ದಾರೆ.
ಅಂತಾರಾಷ್ಟ್ರೀಯ ರೋಟರಿಯು WASH ಚಟುವಟಿಕೆಗಳನ್ನು ಏಷ್ಯಾ ,ಯುರೋಪ್, ಅಮೇರಿಕಾ ಮತ್ತು ಆಫ್ರೀಕನ್ ವಿಭಾಗ ಮಾಡಲಾಗಿದ್ದು 83ನೇ ರಾಯಭಾರಿಯಾಗಿ ರಾಜೇಶ್ ಬೆಜ್ಜಂಗಳ ನೇಮಕಗೊಂಡಿದ್ದಾರೆ. ರೋಟರಿ ಭಾರತದಲ್ಲಿ 16 ಮಂದಿ ಇದ್ದು ಕರ್ನಾಟಕದಲ್ಲಿ ಇವರು ಎರಡನೇ ರಾಯಭಾರಿಯಾಗಿರುತ್ರಾರೆ. ರೋಟರಿ ಜಿಲ್ಲೆ 3181ರ ಎಲ್ಲ ಕ್ಲಬ್ ಗಳಲ್ಲಿ ನಡೆಯುವ ನೀರು ಮತ್ತು ನೈರ್ಮಲ್ಯಕ್ಕೆ ಸಂಬಂಧಿಸಿದ ಚಟುವಟಿಕೆ ಗಳಿಗೆ ಮಾರ್ಗದರ್ಶನ ಮತ್ತು ದಾಖಲೀಕರಣವು ರಾಯಭಾರಿಗಳ ಜವಾಬ್ದಾರಿಯಾಗಿರುತ್ತದೆ.
ಈ ವಲಯದ ಸೇವಾ ಅನುಭವ ಮತ್ತು ರೋಟರಿಯ 185 online course ಗಳು ಸೇರಿದಂತೆ ವಿಶ್ವಬ್ಯಾಂಕ್, ವಿಶ್ವ ಸಂಸ್ಥೆ ಮತ್ತು ಸ್ವಚ್ಛ ಭಾರತ ಮಿಷನ್ ಗಳ 200 online course ಗಳು ಈ ಸ್ಥಾನ ಪಡೆಯಲು ಸಹಕರಿಸಿತು.
ಪ್ರಸ್ತುತ ಅವರು ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ನ ಅಧ್ಯಕ್ಷರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು