1:09 AM Thursday2 - May 2024
ಬ್ರೇಕಿಂಗ್ ನ್ಯೂಸ್
ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ

ಇತ್ತೀಚಿನ ಸುದ್ದಿ

ಆಗಸ್ಟ್‌ 12ರಂದು ಮಂಗಳೂರು ಪುರಭವನದಲ್ಲಿ ಭ್ರಾಮರೀ ಯಕ್ಷವೈಭವ: ಕೃಷ್ಣ ಗಾಣಿಗರಿಗೆ ಯಕ್ಷಮಣಿ ಪ್ರಶಸ್ತಿ

08/08/2023, 12:04

ಮಂಗಳೂರು(reporterkarnataka.com) :ಭ್ರಾಮರೀ ಯಕ್ಷಮಿತ್ರರು ಮಂಗಳೂರು ಟ್ರಸ್ಟ್ ಆಶ್ರಯದಲ್ಲಿ ಆಗಸ್ಟ್ 12 ಶನಿವಾರದಂದು ಸಂಜೆ 7 ರಿಂದ ಮರುದಿನ ಮುಂಜಾನೆಯವರೆಗೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಆರನೇ ವರ್ಷದ ಭ್ರಾಮರೀ ಯಕ್ಷವೈಭವ – 2023 ಜರಗಲಿದೆ.
ಸಂಜೆ 7 ರಿಂದ ಸಭಾ ಕಾರ್ಯಕ್ರಮ ಜರಗಲಿದ್ದು .ಹಿರಿಯ ಯಕ್ಷಗಾನ ವಿದ್ವಾಂಸ,ವಿಮರ್ಶಕ ಡಾ| ಎಂ ಪ್ರಭಾಕರ ಜೋಷಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ತುಳು ಸಂಘ ಬರೋಡಾದ ಅಧ್ಯಕ್ಷ ಶಶಿಧರ್ ಶೆಟ್ಟಿ, ಮೇಯರ್ ಜಯಾನಂದ ಅಂಚನ್, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್‌ನ ನಿರ್ದೇಶಕ ಟಿ.ಜಿ.ರಾಜಾರಾಮ್ ಭಟ್,ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್, ಉದ್ಯಮಿ ಚಂದ್ರಶೇಖರ ಮಾಡ ಕುದ್ರಾಡಿಗುತ್ತು ಭಾಗವಹಿಸಲಿದ್ದಾರೆ.
ಹಿರಿಯ ಯಕ್ಷಗಾನ ಕಲಾವಿದ ಕೋಡಿ ಕೃಷ್ಣ( ಕುಷ್ಟ)ಗಾಣಿಗ ಅವರಿಗೆ ಭ್ರಾಮರೀ ಯಕ್ಷಮಣಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಭ್ರಾಮರೀ ಯಕ್ಷಸೇವಾಪುರಸ್ಕಾರವನ್ನು ಶ್ರೀ ವಾಗೀಶ್ವರೀ ಯಕ್ಷಗಾನ ಕಲಾವರ್ಧಕ ಸಂಘ ಮಂಗಳೂರು ಹಾಗೂ ಕಟೀಲು ಮೇಳದ ನೇಪಥ್ಯ ಕಲಾವಿದ ವಿಠಲ ಶೆಟ್ಟಿ ಅವರಿಗೆ ನೀಡಿ ಗೌರವಿಸಲಾಗುವುದು. ರಾತ್ರಿ 9 ರಿಂದ ಚೆಂಡೆ ಜುಗಲ್‌ಬಂದಿ, ನಾಡಿನ ಹೆಸರಾಂತ ಕಲಾವಿದರ ಕೂಡುವಿಕೆಯಲ್ಲಿ ಶರಣ ಸೇವಾರತ್ನ,ರಾಣಿ ಶಶಿಪ್ರಭೆ,ಶ್ರೀ ದೇವಿ ಕೌಶಿಕೆ ಎಂಬ ಯಕ್ಷಗಾನ ಜರಗಲಿದ್ದು.ಈ ಎಲ್ಲಾ ಕಾರ್ಯಕ್ರಮಕ್ಕೆ ಉಚಿತ ಪ್ರವೇಶ ಇರುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು