7:23 AM Friday3 - May 2024
ಬ್ರೇಕಿಂಗ್ ನ್ಯೂಸ್
ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ಇತ್ತೀಚಿನ ಸುದ್ದಿ

ಬೆಂಗಳೂರು: ಶ್ರೀನಿವಾಸ ಪ್ರಭುಗೆ ಸೃಷ್ಟಿ ಯಕ್ಷ ಏಕಲವ್ಯ ಪ್ರಶಸ್ತಿ ಪ್ರದಾನ

15/08/2023, 21:49

ಬೆಂಗಳೂರು(reporterlarnataka.com): ಯಕ್ಷಗಾನದಿಂದ ಕನ್ನಡ ಭಾಷೆಯು ಇನ್ನಷ್ಟು ಜೀವಂತವಾಗಿರುತ್ತದೆ, ದೈಹಿಕ ಮಾನಸಿಕ ಸ್ವಾಸ್ಥ್ಯ ಕಾಪಾಡುವುದರಲ್ಲಿ ಯಕ್ಷಗಾನ ಅತ್ಯಂತ ಪ್ರಯೋಜನಕಾರಿ ಎಂದು ಎಂದು ಶಾಸಕ ರವಿ ಸುಬ್ರಹ್ಮಣ್ಯ ಹೇಳಿದರು.
ಚೆನ್ನಮ್ಮನಕೆರೆ ಅಚ್ಚುಕಟ್ಟು ಬಳಿಯ ಪರಂಪರಾ ಸಭಾಂಗಣದಲ್ಲಿ ಭಾನುವಾರ ಸೃಷ್ಟಿ ಕಲಾ ವಿದ್ಯಾಲಯದ 23ನೇ ಸೃಷ್ಟಿ ಸಂಭ್ರಮ ಅಂಗವಾಗಿ ಪ್ರಸಿದ್ಧ ಚೆಂಡೆವಾದಕ ಶ್ರೀನಿವಾಸ ಪ್ರಭು( ಗುಂಡ) ಅವರಿಗೆ ಸೃಷ್ಟಿ ಯಕ್ಷ ಏಕಲವ್ಯ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.
ಸೃಷ್ಟಿ ಕಲಾವಿದ್ಯಾಲಯವು ನಿರಂತರ ಯಕ್ಷಗಾನ ತರಬೇತಿ, ಕಲಾಸೇವೆ ಮೂಲಕ ಬಸವನ ಗುಡಿ ಕ್ಷೇತ್ರದ ಗೌರವವನ್ನು ಹೆಚ್ಚಿಸಿದೆ ಎಂದರು.
ಪ್ರಶಸ್ತಿ ಸ್ವೀಕರಿಸಿದ ಶ್ರೀನಿವಾಸ ಪ್ರಭು, ಸೃಷ್ಟಿಯ ಈ ಪ್ರಶಸ್ತಿ ನನ್ನ ಕಲಾ ಬದುಕಿನಲ್ಲಿ ಅತ್ಯಂತ ಮಹತ್ವದ್ದು ಹಾಗೂ ಮರೆಯಲಾರದ್ದು ಎಂದರು.


ಸೃಷ್ಟಿ ಅಧ್ಯಕ್ಷ ಛಾಯಾಪತಿ ಕಂಚಿಬೈಲ್, ಗೌರವಾಧ್ಯಕ್ಷ ಶ್ರೀಕಾಂತ್ ಎಂ.ಜಿ., ಕಲಾವಿದರುಗಳಾದ ಸುಬ್ರಾಯ ಹೆಬ್ಬಾರ್, ಅಕ್ಷಯ ಆಚಾರ್ಯ ನಿತ್ಯಾನಂದ ನಾಯಕ್ , ಅರ್ಜುನ್ ಕೊರ್ಡೇಲ್, ಭರತ್ ರಾಜ್ ಪರ್ಕಳ ಇದ್ದರು.
ಈ ಸಂದರ್ಭ ಸುಬ್ರಾಯ ಹೆಬ್ಬಾರ್‌ ಮತ್ತು ಭರತ್‌ ರಾಜ್‌ ಪರ್ಕಳ ನಿರ್ದೇಶನದಲ್ಲಿ, ನಿತ್ಯಾನಂದ ನಾಯಕ್‌ ಪರಿಕಲ್ಪನೆಯಲ್ಲಿ ಸೃಷ್ಟಿ ಕಲಾ ವಿದ್ಯಾಲಯ ವಿದ್ಯಾರ್ಥಿಗಳಿಂದ ಕುಮಾರ ವಿಜಯ ಯಕ್ಷಗಾನ ಪ್ರದರ್ಶನ ಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು