4:24 PM Thursday2 - May 2024
ಬ್ರೇಕಿಂಗ್ ನ್ಯೂಸ್
ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ…

ಇತ್ತೀಚಿನ ಸುದ್ದಿ

ಮಂಗಳೂರು: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ 20ರಂದು ಪಾದಯಾತ್ರೆ,‌ ಬೃಹತ್ ಪ್ರತಿಭಟನೆ

18/08/2023, 23:17

ಮಂಗಳೂರು(reporterkarnataka.com): ಧರ್ಮಸ್ಥಳದ ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ, ಸೌಜನ್ಯ ಕುಟುಂಬಕ್ಕೆ ನ್ಯಾಯ ಒದಗಿಸಲು ಒತ್ತಾಯಿಸಿ ಸೌಜನ್ಯ ಹೋರಾಟ ಸಮಿತಿಯ ನೇತೃತ್ವದಲ್ಲಿ
ಇದೇ 20 ರಂದು ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಸೌಜನ್ಯ ಹೋರಾಟ ಸಮಿತಿ ಸಂಚಾಲಕಿ ಪ್ರಸನ್ನ ರವಿ ಹೇಳಿದರು.
ಅವರು ಶುಕ್ರವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಧ್ಯಾಹ್ನ 3.30ಕ್ಕೆ ನಗರದ ಕದ್ರಿ ಮಂಜುನಾಥ ದೇವಸ್ಥಾನದಿಂದ ಕದ್ರಿ ಬಯಲು ರಂಗ ಮಂದಿರದವರಿಗೆ ಪಾದಯಾತ್ರೆ ನಡೆಯಲಿದೆ. ಸಂಜೆ 4 ಗಂಟೆಗೆ ಕದ್ರಿ ಮೈದಾನದಲ್ಲಿ ಪ್ರತಿಭಟನಾ ಸಭೆ ನಡೆಯಲಿದೆ. ಸೌಜನ್ಯ ಕುಟುಂಬದ ಪರವಾಗಿ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ, ಸೌಜನ್ಯ ಅವರ ತಾಯಿ ಕುಸುಮಾವತಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಸೌಜನ್ಯಳ ಕೊಲೆ ನಡೆದು 11 ವರ್ಷಗಳು ಆಗಿವೆ. ಆದರೆ ಇದರ ಹಿಂದಿರುವ ನೈಜ ಆರೋಪಿಗಳನ್ನು ಪತ್ತೆ ಹಚ್ಚಲು ನಮ್ಮ ಕಾನೂನು ವ್ಯವಸ್ಥೆಗೆ ಸಾಧ್ಯವಾಗಿಲ್ಲ. ಸಂತೋಷ್ ರಾವ್ ಆರೋಪಿಯಲ್ಲ ಎಂದು ನ್ಯಾಯಾಲಯ ಹೇಳಿರುವುದರಿಂದ ನೈಜ ಅಪರಾಗಳಿಗೆ ಶಿಕ್ಷೆ ಸಿಗಬೇಕು. ಸೌಜನ್ಯ ಅವರ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಲು ಮಂಗಳೂರಿನ ಜನತೆ ಕೈಜೋಡಿಸಬೇಕು. ಪ್ರತಿಭಟನೆಯಲ್ಲಿ ಸ್ವಯಂಪ್ರೇರಿತರಾಗಿ ಭಾಗವಹಿಸಬೇಕು ಎಂದು ಮನವಿ ಮಾಡಿದರು. ಹೋರಾಟ ಸಮಿತಿ ಸದಸ್ಯರಾದ ವಿಖ್ಯಾತ್ ಉಳ್ಳಾಲ್, ಶಶಿಕಲಾ ಶೆಟ್ಟಿ, ಸಾಜನ್ ಶೆಟ್ಟಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು