11:51 AM Thursday2 - May 2024
ಬ್ರೇಕಿಂಗ್ ನ್ಯೂಸ್
ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ…

ಇತ್ತೀಚಿನ ಸುದ್ದಿ

ಉರ್ವಾಸ್ಟೋರ್ ಮೈದಾನ ಬಳಿ ಮಟ್ಕಾ ದಂಧೆ: ಇಬ್ಬರ ಬಂಧನ; 4.24 ಲಕ್ಷ ರೂ. ನಗದು, ಸೊತ್ತು ವಶ

19/08/2023, 17:32

ಮಂಗಳೂರು(reporterkarnataka.com): ನಗರದ ಉರ್ವಾ ಸ್ಟೋರ್ ಮೈದಾನ ಬದಿಯಲ್ಲಿರುವ ಕಾಪೋರೇಶನ್ ಕಟ್ಟಡದ ದಿನಸಿ ಅಂಗಡಿಯ ಮುಂಭಾಗ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಚೀಟಿ ದಂಧೆ ನಡೆಸುತ್ತಿದ್ದ ಇಬ್ಬರು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಚಿಲಿಂಬಿಯ ಗೋಕುಲದಾಸ್ ಶೆಣೈ(55) ಹಾಗೂ ಕೋಡಿಕಲ್ ನ ದೀಪಕ್ ಶೆಟ್ಟಿ ಎಂದು ಗುರುತಿಸಲಾಗಿದೆ. ಆರೋಪಿಗಳ ವಶದಲ್ಲಿದ್ದ ಮಟ್ಕಾ ಚೀಟಿ ಗೆ ಸಂಬಂಧಿಸಿದ 424490 ರೂ.ನಗದು, ಮೊಬೈಲ್‌ ಹಾಗೂ ಮಟ್ಕಾ ಬರೆದಿದ್ದ ಚೀಟಿಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
ಉರ್ವಾ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಲಾಗಿದೆ. ಪೊಲೀಸ್ ಆಯುಕ್ತರಾದ ಕುಲದೀಪ್ ಜೈನ್‌ ಅವರ ಆದೇಶದಂತೆ ಮಂಗಳೂರು ಕೇಂದ್ರ ಉಪವಿಭಾಗದ ಎಸಿಪಿ ಯವರ ನೇತೃತ್ವದಲ್ಲಿ ಉರ್ವಾ ಪೊಲೀಸ್ ಠಾಣಾ ಪಿಐ ಭಾರತಿ ಅವರ ತಂಡ ಹರೀಶ್ ಹೆಚ್.ಎ., ಸಫೀನಾ, ವೆಂಕಟೇಶ್, ರಾಮಚಂದ್ರ, ಸುನೀತ, ಭರಣಿ ದೀಕ್ಷಿತ್ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು