12:57 AM Friday3 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ಮುದ್ರಾಂಕ ಶುಲ್ಕ ಏರಿಕೆಯಿಂದ ಬಡ, ಮಧ್ಯಮ ವರ್ಗದವರಿಗೆ ಹೊರೆ: ಶಾಸಕ ವೇದವ್ಯಾಸ ಕಾಮತ್

30/08/2023, 22:24

ಮಂಗಳೂರು(reporterkarnataka.com): ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಒಂದಲ್ಲ ಒಂದು ರೀತಿಯಲ್ಲಿ ಜನಸಾಮಾನ್ಯರಿಗೆ ಆರ್ಥಿಕ ಬರೆ ಹಾಕುತ್ತಿದ್ದು, ಇದೀಗ ಮುದ್ರಾಂಕ ಶುಲ್ಕವನ್ನು ಏರಿಸಲು ನಿರ್ಧರಿಸುವ ಮೂಲಕ ಬಡ ಹಾಗೂ ಮಧ್ಯಮ ವರ್ಗದ ಜನರ ಬದುಕಿಗೆ ಬರೆ ಹಾಕಲು ಹೊರಟಿದೆ ಎಂದು ಶಾಸಕ ಡಿ.ವೇದವ್ಯಾಸ್ ಕಾಮತ್ ಹೇಳಿದ್ದಾರೆ.
ನಿವೇಶನ, ಕಟ್ಟಡ, ಭೂಮಿ ಸೇರಿ ಸ್ಥಿರಾಸ್ತಿಯ ಮಾರ್ಗಸೂಚಿ ದರವನ್ನು ಮುಂದಿನ ಅಕ್ಟೋಬರ್ 1 ರಿಂದ ಹೆಚ್ಚಿಸಲು ಕಂದಾಯ ಇಲಾಖೆ ನಿರ್ಧರಿಸಿದೆ. ಕನಿಷ್ಠ ಶೇ.20ರಿಂದ ಶೇ.30ರ ವರೆಗೆ ದರ ಪರಿಷ್ಕರಣೆ ಆಗುವ ಬಗ್ಗೆ ಚರ್ಚೆ ನಡೆದಿದೆ. ಇಷ್ಟೊಂದು ದೊಡ್ಡ ಮಟ್ಟಿನ ದರ ಪರಿಷ್ಕರಣೆ ರಾಜ್ಯದ ಜನರನ್ನು ಮತ್ತಷ್ಟು ಆರ್ಥಿಕ ಸಂಕಷ್ಟಕ್ಕೆ ತಳ್ಳಲಿದೆ. ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಕಸರತ್ತು ನಡೆಸುತ್ತಿರುವ ಸರಕಾರ ಜನರಿಗೆ ಪರೋಕ್ಷವಾಗಿ ಆರ್ಥಿಕ ಹೊರೆ ಹೊರಿಸುತ್ತಿರುವುದು ಖಂಡನೀಯ ಎಂದು ಅವರು ತಿಳಿಸಿದ್ದಾರೆ.
ಬಡ ಹಾಗೂ ಮಧ್ಯಮ ವರ್ಗದ ಜನರು ಸಾಮಾನ್ಯವಾಗಿ ಸಾಲ ಸೋಲ ಮಾಡಿ ಆಸ್ತಿ, ನಿವೇಶ ಅಥವಾ ಮನೆ ಖರೀದಿಸುತ್ತಾರೆ. ಆದರೆ ಅಂತಹಾ ಕುಟುಂಬದವರಿಗೆ ಮುಂದೆ ಮುದ್ರಾಂಕ ಶುಲ್ಕ ಏರಿಕೆಯಿಂದ ತೀವ್ರ ಸಮಸ್ಯೆ ಆಗಲಿದೆ. ಬಹುತೇಕರಿಗೆ ಆಸ್ತಿ ಖರೀದಿ ಕೈಗೆಟಕದಂತೆ ಆಗಲಿದೆ. ಆದ್ದರಿಂದ ದರ ಪರಿಷ್ಕರಣೆಯನ್ನು ಕೈ ಬಿಟ್ಟು ಜನಸಾಮಾನ್ಯರ ಒಳಿತಿನ ಬಗ್ಗೆ ಚಿಂತಿಸಿ ಮುಂದುವರಿಯಬೇಕು ಎಂದು ಶಾಸಕ ಕಾಮತ್ ಸಲಹೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು