3:29 PM Saturday18 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಹಾಡುಗಳು ಮಧುರ ಲಯ ಸಾಹಿತ್ಯ ಸಂಯೋಜನೆ: ವಿದ್ವಾನ್ ಯಶವಂತ ಎಂ.ಜಿ.

05/09/2023, 14:55

ಉಡುಪಿ(reporterkarnataka.com): ಹಾಡುಗಳು ಮಧುರ, ಲಯ, ಸಾಹಿತ್ಯ, ಜೊತೆಗೆ ಸಂಗೀತ ವಾದ್ಯಗಳನ್ನು ಹೊಂದಿರುವ ಸಂಗೀತ ಸಂಯೋಜನೆಯಾಗಿದೆ. ಅಬಾಲವೃದ್ದರಾಗಿ ಸಂಗೀತವನ್ನು ಕೇಳುತ್ತಾರೆ ಎಂದು ಶಿಕ್ಷಕ  ವಿದ್ವಾನ್ ಯಶವಂತ ಹೇಳಿದರು.
ಅವರು ಭಾನುವಾರ  ಮಣಿಪಾಲದ ಪರ್ಣಕುಟೀರ ಸಭಾಂಗಣದಲ್ಲಿ ನಡೆದ ಸ್ವರಾಮೃತ ತಂಡದ ಲೋಗೋ ಬಿಡುಗಡೆ ಗೊಳಿಸಿ ಮಾತನಾಡಿದರು.
ಹಾಡುಗಳನ್ನು ಸಂಗೀತ ಕೃತಿಗಳೆಂದು ಪರಿಗಣಿಸಲಾಗುತ್ತದೆ . ಸ್ಫೂರ್ತಿ, ಸಂವೇದನೆ ಮೂಲಕ ಮನಸ್ಸಿಗೆ ಅಪ್ತವಾಗುತ್ತವೆ ಎಂದರು.
ಕೆಎಂಸಿ ಅಸ್ಪತ್ರೆಯ  ಇಲೆಕ್ಟ್ರಿಕಲ್ ಇಂಜಿನಿಯರ್  ರವೀಂದ್ರ ಮಾತನಾಡಿ, ಸಾಹಿತ್ಯಕ್ಕೆ ರಾಗವನ್ನು ಕೊಟ್ಟು ಹಾಡುಗಳನ್ನು ಹಾಡುತ್ತಾ ಮನಸ್ಸನ್ನು  ಮುದಗೊಳಿಸಲು ಸಾಧ್ಯ ಎಂದರು.
ಗಾಯಕಿ ರಶ್ಮಿಅರ್. ಪ್ರಭು  ಮಾತನಾಡಿ, ಸ್ವರಕ್ಕೆ ಅಮೃತವನ್ನು ನೀಡುವ ಸ್ವರಾಮೃತ ಪರಿಕಲ್ಪನೆ ಅದ್ಭುತವಾಗಿದೆ. ಹಾಡುಗಾರರಿಗೆ ಈ ತಂಡ ಆಶ್ರಯ ನೀಡಲಿದೆ ಎಂದರು
ಖ್ಯಾತ ಗಾಯಕಿ ವೈಷ್ಣವಿ ರವೀಂದ್ರ ಮಾತನಾಡಿ, ಹಾಡುಗಾರಿಕೆ ಕೇವಲ ಮನರಂಜನೆ ಯಾಗಿಸದೆ ,ಸ್ಪರ್ಧಾತ್ಮಕವಾಗಿ ತೊಡಗಿಸಿಕೊಳ್ಳಲು ಸಹಕಾರಿಯಾಗಿದೆ ಎಂದರು.
ಉದ್ಯಮಿ ರಾಧಾಕೃಷ್ಣ ಮಣಿಪಾಲ್ ಮಾತನಾಡಿದರು.
ಶಾಶ್ವತ್ ತೆಳ್ಳಾರು, ಡಾ.ಗುರುಪ್ರಸಾದ್  ಶುಭ ಹಾರೈಸಿದರು.

ಸಭೆಯಲ್ಲಿ ಪತ್ರಕರ್ತ ಹರಿಪ್ರಸಾದ್ ನಂದಳಿಕೆ, ರಾಂ ಅಜೆಕಾರು , ಚಿತ್ತಾರ ಸೇವಾ ರೂವಾರಿ ಸುಜಿತ್ ನಂದಳಿಕೆ,  ಮಲಬಾರ್ ಗೋಲ್ಡ್ ಮಾರ್ಕೆಟಿಂಗ್ ವ್ಯವಸ್ಥಾಪಕ ರಾಘವೇಂದ್ರ ನಾಯಕ್, ಲೇಖಕಿ ಸುಮ ಕಿರಣ್ , ಲೆಕ್ಕ ಪರಿಶೋಧಕ ಸುರೇಶ್, ಗೀತಾಂಜಲಿ , ಖ್ಯಾತ ಛಾಯಾಗ್ರಾಹಕ ಶರತ್ ಕಾನಂಗಿ, ಡಾ. ಸ್ನೇಹ ಗುರುಪ್ರಸಾದ್, ಉದ್ಯಮಿ ಗಳಾದ ಹರೀಶ್ ಶೆಟ್ಟಿ, ಶಶಿಕಾಂತ್ ಪ್ರಭು ,ಜಯಾನಂದ ಕುಲಾಲ್ ,ಪ್ರಸಾದ್‌ಅಚಾರ್ಯ, ರೂಪೇಶ್ , ಸುಭಾಸ್
ಕಿರಣ್   ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು