8:36 PM Saturday18 - May 2024
ಬ್ರೇಕಿಂಗ್ ನ್ಯೂಸ್
ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ…

ಇತ್ತೀಚಿನ ಸುದ್ದಿ

ಕಲ್ಲಡ್ಕದಲ್ಲಿ ಸಂಭ್ರಮದ 91ನೇ ವರ್ಷದ ಮೊಸರು ಕುಡಿಕೆ ಉತ್ಸವ: ಮನಸೆಳೆದ ಶ್ರೀಕೃಷ್ಣ ಕುಚೇಲ ನೃತ್ಯರೂಪಕ

07/09/2023, 23:18

ಬಂಟ್ವಾಳ(reporterkarnataka.com): ಕಲ್ಲಡ್ಕದ ಶ್ರೀ ರಾಮ ಮಂದಿರದ 91ನೇ ವರ್ಷದ ಮೊಸರು ಕುಡಿಕೆ ಉತ್ಸವ ವಿಜೃಂಭಣೆಯಿಂದ ಜರಗಿತು.
ಕಲ್ಲಡ್ಕ ಮಂದಿರದಿಂದ ಹೊರಟು ಪ್ರಮುಖ ರಸ್ತೆಯಲ್ಲಿ ಹಲವು ಟ್ಯಾಬ್ಲೋ ಸಹಿತ ಶ್ರೀಕೃಷ್ಣನ ಶೋಭಾಯಾತ್ರೆ ಸಹಸ್ರಾರು ಭಕ್ತರ ಪಾಲ್ಗೊಳ್ಳುವಿಕೆಯಿಂದ ಸಂಪನ್ನಗೊಂಡಿತು.
ಶ್ರೀ ರಾಮ ವಿದ್ಯಾಕೇಂದ್ರದ ಮಕ್ಕಳು ಕೃಷ್ಣ ಯಶೋದೆಯರ ವೇಷದಲ್ಲಿ ಪಾಲ್ಗೊಂಡು ಕೃಷ್ಣಲೋಕ ಸೃಷ್ಟಿ ಸಿದರು.
ನೇತಾಜಿ ಯುವಕ ಮಂಡಲ‌ ಕಲ್ಲಡ್ಕದ ಚಕ್ರವರ್ತಿ ಶಿವಾಜಿ,ಶ್ರೀಕೃಷ್ಣ ಕುಚೇಲ ನೃತ್ಯ ರೂಪಕ ಹಾಗೂ ಶಿಲ್ಪಗೊಂಬೆ ಬಳಗದ ನವಿಲು ನೃತ್ಯ ವಿಶೇಷ ಜನಮೆಚ್ಚುಗೆ ಪಡೆಯಿತು.
ಓಂ ಶಕ್ತಿ ಬಳಗದ ಗಜಾಸುರ ವಧೆ,ಕುದ್ರೆಬೆಟ್ಟು ಮಣಿಕಂಠ ಯುವಶಕ್ತಿಯ ಅರುಣಾಸುರ ವಧೆ,ರಾಯಪ್ಪಕೋಡಿ ತ್ರಿಶೂಲ್ ಫ್ರೆಂಡ್ಸ್ ನ ವೃತ್ತಾಸುರ ವಧೆ, ಕಟ್ಟೆಮಾರು ಮಂತ್ರದೇವತಾ ಕ್ಷೇತ್ರದ ಬಂಡಾಸುರ ವಧೆ,ವಿಶ್ವ ಹಿಂದು ಪರಿಷತ್ ಭಜರಂಗ ದಳದ ಚೆಂಡೆವಾದನ, ನಾಸಿಕ್ ಬ್ಯಾಂಡ್ ಮೊದಲಾದ ಹಲವು ಸ್ತಬ್ದಚಿತ್ರಗಳು‌ಆಕರ್ಷಣೆ ನೀಡಿದವು.

    ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಶ್ರೀ ರಾಮ ವಿದ್ಯಾ ಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ ಮೊದಲಾದ ಪ್ರಮುಖರಿದ್ದರು .
    ಶ್ರೀ ರಾಮಾಂಜನೇಯ ಸೇವಾಟ್ರಸ್ಟ್ ಅಧ್ಯಕ್ಷ ಡಾ.ಪ್ರಭಾಕರ ಭಟ್ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ನೆರವೇರಿತು.
    ಮಂಗಳೂರು ವಿಭಾಗ ಸಹ ಕಾರ್ಯವಾಹ ಸುಭಾಶ್ಚಂದ್ರ ಕಳಂಜ ಮೊಸರು ಕುಡಿಕೆ ಮಹತ್ವ ತಿಳಿಸಿದರು.
    ಪ್ರಧಾನ ಕಾರ್ಯದರ್ಶಿ ನಾಗೇಶ ಕಲ್ಲಡ್ಕ, ಶ್ರೀ ರಾಮ ಮಂದಿರ‌ ಆಡಳಿತ ಸಮಿತಿ‌ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್, ಕಾರ್ಯದರ್ಶಿ ಕ.ಕೃಷ್ಣ ಪ್ಪ,ಶ್ರೀರಾಮ ಸೇವಾ ಸಮಿತಿಯ ಪುಷ್ಪರಾಜ ಶೆಟ್ಟಿ ಗಾರ್, ಕಾರ್ಯದರ್ಶಿ ಸುಜಿತ್ ಕೊಟ್ಟಾರಿ , ಶ್ರೀರಾಮ ಭಜನಾ ಮಂಡಳಿ ಅಧ್ಯಕ್ಷ ಹರೀಶ್, ಕಾರ್ಯದರ್ಶಿ ಉತ್ತಮ ಪಳನೀರು ಮೊದಲಾದವರು ನೇತೃತ್ವ ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು