10:31 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಮತ್ತೆ ಮತ್ತೆ ಓದಿದಷ್ಟು ಹೊಸ ಜಗತ್ತನ್ನು ಪರಿಚಯಿಸುವ ತೇಜಸ್ವಿ ಕೃತಿಗಳು: ತೇಜಸ್ವಿ ಸಾಹಿತ್ಯ ಸಂಭ್ರಮ ಕಾರ್ಯಕ್ರಮದಲ್ಲಿ ಡಾ.ಸಬಿತಾ ಬನ್ನಾಡಿ

09/09/2023, 16:40

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸಾಮಾನ್ಯರ ಬದುಕಿನ ವಿವರಗಳು ದಟ್ಟೈಸಿರುವ ಪೂರ್ಣಚಂದ್ರ ತೇಜಸ್ವಿ ಅವರ ಕೃತಿಗಳನ್ನು ಮತ್ತೆ ಮತ್ತೆ ಓದಿದಷ್ಟು ಹೊಸ ಹೊಸ ಜಗತ್ತು ತೆರೆದುಕೊಳ್ಳುವುದು ಎಂದು ಕನ್ನಡ ಪ್ರಾಧ್ಯಾಪಕರಾದ ಡಾ.ಸಬಿತಾ ಬನ್ನಾಡಿ ಹೇಳಿದರು.


ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ 85ನೇ ಜನ್ಮದಿನದ ಅಂಗವಾಗಿ ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ವತಿಯಿಂದ ಕೊಟ್ಟಿಗೆಹಾರದಲ್ಲಿ ನಡೆದ ತೇಜಸ್ವಿ ಸಾಹಿತ್ಯ ಸಂಭ್ರಮ ಕಾರ್ಯಕ್ರಮದಲ್ಲಿ ತೇಜಸ್ವಿ ಅವರು ತೋರಿದ ಲೋಕದೃಷ್ಟಿ ವಿಷಯದ ಬಗ್ಗೆ ಉಪನ್ಯಾಸ ನೀಡಿ ಮಾತನಾಡಿದರು.
ನಾಡಿನ ಪಾಠ ಕಾಡಿನಲ್ಲಿದೆ ಎನ್ನುವಂತೆ ಪ್ರಾಣಿ ಪಕ್ಷಿ ಸಸ್ಯಗಳು ತೋರುವ ಹೊಂದಾಣಿಕೆಯನ್ನು ಮನುಷ್ಯನ್ನೂ ಕೂಡ ತೋರಬಹುದಾಗಿದೆ ಎಂಬುದನ್ನು ತೇಜಸ್ವಿ ಅವರು ತಮ್ಮ ಕೃತಿಗಳಲ್ಲಿ ವಿವರಿಸಿದ್ದಾರೆ. ತೇಜಸ್ವಿ ಅವರ ಕೃತಿಗಳನ್ನು ಯುವ ಪೀಳಗೆ ಓದಬೇಕು. ತೇಜಸ್ವಿ ಅವರ ಕೃತಿಗಳು ಹೊಸ ಜಗತ್ತನ್ನು ತೆರೆದಿಡುತ್ತವೆ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಸಿ ರಮೇಶ್ ಮಾತನಾಡಿ, ತೇಜಸ್ವಿ ಪ್ರತಿಷ್ಠಾನದಿಂದ ನೂತನವಾಗಿ ತೇಜಸ್ವಿ ಓದಿನ ಮನೆ ನಿರ್ಮಾಣವಾಗಿದೆ. ಪ್ರಕೃತಿಯ ನಡುವೆ ತೇಜಸ್ವಿ ಅವರ ಕೃತಿಗಳನ್ನು ಓದಲು ಪೂರಕವಾದ ವಾತಾವರಣ ಇಲ್ಲಿದೆ. ಪ್ರತಿಷ್ಠಾನದಿಂದ ಚಾರಣ, ವಿಚಾರ ಮಂಥನ, ಚಿತ್ರಕಲಾ, ಪೋಟೋಗ್ರಫಿ ಶಿಬಿರ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬರಲಾಗುತ್ತಿದೆ ಎಂದು ಅವರು ನುಡಿದರು.
ತೇಜಸ್ವಿ ಒಡನಾಡಿಗಳು ಹಾಗೂ ಪುಸ್ತಕ ಪ್ರಕಾಶನದ ಮುಖ್ಯಸ್ಥರಾದ ರಾಘವೇಂದ್ರ ಮಾತನಾಡಿ, ತೇಜಸ್ವಿ ಅವರು ಪರಿಸರದ ನಡುವೆ ಬದುಕಿ ತಮ್ಮ ಅನುಭವಗಳನ್ನು ಕೃತಿಗಳಲ್ಲಿ ದಾಖಲಿಸಿದ್ದಾರೆ. ಚಂದ್ರಯಾನ, ಜೀವ ವಿಕಾಸ, ಪರಿಸರ ಮುಂತಾದ ಕ್ಷೇತ್ರಗಳ ಬಗ್ಗೆ ಬೆರಗು ಮೂಡಿಸುವ ವಿವರಗಳು ತೇಜಸ್ವಿ ಅವರ ಕೃತಿಗಳಲ್ಲಿವೆ ಎಂದು ಅವರು ಹೇಳಿದರು.
ಕೊಟ್ಟಿಗೆಹಾರ ಪ್ರೌಢಶಾಲೆಯ ವಿದ್ಯಾರ್ಥಿಗಳು ತೇಜಸ್ವಿ ಅವರ ಸಾಲುಗಳ ಭಿತ್ತಿಚಿತ್ರವನ್ನು ಪ್ರದರ್ಶಿಸಿದರು. ವಿದ್ಯಾರ್ಥಿ ದರ್ಶನ್ ತೇಜಸ್ವಿ ಅವರಂತೆ ವೇಷ ಧರಿಸಿದ್ದು ಎಲ್ಲರ ಗಮನ ಸೆಳೆಯಿತು. ಕಲಾವಿದ ಹರ್ಷ ಕಾವಾ ಅವರ ನಿರ್ಮಿಸಿದ ಮಾಯಾಲೋಕ ಪ್ರತಿಕೃತಿಗಳು ತೇಜಸ್ವಿ ಅವರ ಪಾತ್ರಗಳ ಲೋಕವನ್ನು ತೆರೆದಿಟ್ಟವು. ನೂತನವಾಗಿ ನಿರ್ಮಾಣವಾದ ತೇಜಸ್ವಿ ಓದಿನ ಗಾಜಿನ ಮನೆಯನ್ನು ಗಣ್ಯರು ವೀಕ್ಷಿಸಿದರು.
ಈ ಸಂದರ್ಭದಲ್ಲಿ ತರುವೆ ಗ್ರಾ.ಪಂ ಅಧ್ಯಕ್ಷ ಸತೀಶ್ ಬಿ.ಎಂ, ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ನಿರ್ವಾಹಕ ನಂದೀಶ್ ಬಂಕೇನಹಳ್ಳಿ, ತಾಂತ್ರಿಕ ಸಹಾಯಕರಾದ ಪ್ರಜ್ವಲ್, ಸಿಬ್ಬಂದಿ ಸತೀಶ್ ತರುವೆ, ಸಂಗೀತಾ, ಪ್ರಾಧ್ಯಾಪಕರಾದ ದೀಪಾರಾಣಿ ಬಿ.ಎಸ್, ಡಾ. ನಾಗರಾಜ್ ಎಂ.ಎಸ್, ರವಿಕುಮಾರ್, ಸುಶ್ಮಿತಾ, ಸತೀಶ್, ಕಿರಣ್, ಲೇಖಕ ಕಾರ್ತಿಕ್ ಬೆಳಗೋಡು, ಕಸಾಪ ತಾಲ್ಲೂಕು ಅಧ್ಯಕ್ಷ ಶಾಂತಕುಮಾರ್, ಹೋಬಳಿ ಅಧ್ಯಕ್ಷ ತರುವೆ ಆದರ್ಶ್, ಕಲಾವಿದ ಹರ್ಷ ಕಾವಾ, ಮಂಜುನಾಥ್, ಜಾನುವಾರು ಅಧಿಕಾರಿ ಡಾ.ನವೀನ್ ಕುಮಾರ್, ಗ್ರಾಮಸ್ಥರಾದ ನರೇಂದ್ರ ತರುವೆ, ಸಂಜಯಗೌಡ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು