4:17 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಶಿವಮೊಗ್ಗ ಜಿಲ್ಲೆಯಾದ್ಯಂತ 241 ರೌಡಿಗಳ ಮನೆಗೆ ಪೊಲೀಸ್ ದಾಳಿ: ಏಕಕಾಲದಲ್ಲಿ ಭಾರಿ ಕಾರ್ಯಾಚರಣೆ

11/09/2023, 16:07

ಶಿವಮೊಗ್ಗ(reporterkarnataka.com):ಶಿವಮೊಗ್ಗ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ವಿವಿಧ ಪೊಲೀಸ್ ತಂಡಗಳು 241 ರೌಡಿಗಳ ಮನೆಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಸೋಮವಾರ ಬೆಳಗಿನ ಜಾವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ಮಿಥುನ್ ಕುಮಾರ್ ಜಿ.ಕೆ. ನೇತೃತ್ವದಲ್ಲಿ ಶಿವಮೊಗ್ಗ ಎ ಉಪ ವಿಭಾಗದ ಡಿವೈಎಸ್ಪಿ ಬಾಲರಾಜ್, ಶಿವಮೊಗ್ಗ ಬಿ ಉಪ ವಿಭಾಗದಲ್ಲಿ ಡಿವೈಎಸ್ಪಿ ಸುರೇಶ್ ಎಂ, ಭದ್ರಾವತಿ ಉಪ ವಿಭಾಗದಲ್ಲಿ ಪೊಲೀಸ್ ಉಪಾಧೀಕ್ಷ ನಾಗರಾಜ್, ಸಾಗರ ಉಪ ವಿಭಾಗದ ಪೊಲೀಸ್ ಉಪಾಧೀಕ್ಷ ಗೋಪಾಲಕೃಷ್ಣ ತಿಮ್ಮಣ್ಣ ನಾಯ್ಕ್, , ಶಿಕಾರಿಪುರ ಉಪ ವಿಭಾಗದ ಡಿವೈಎಸ್ಪಿ ಶಿವಾನಂದ್ ಮದರಖಂಡಿ, ಮತ್ತು ತೀರ್ಥಹಳ್ಳಿ ಉಪ ವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ, ಹಾಗೂ ಆಯಾ ಪೊಲೀಸ್ ಠಾಣೆಗಳ ಪೊಲೀಸ್ ನಿರೀಕ್ಷಕರು, ಪೊಲೀಸ್ ಉಪ ನಿರೀಕ್ಷಕರು ಹಾಗೂ ಸಿಬ್ಬಂಧಿಗಳನ್ನೊಳಗೊಂಡ ಪ್ರತ್ಯೇಕ ತಂಡಗಳು ಜಿಲ್ಲೆಯಾದ್ಯಂತ ಏಕಕಾಲದಲ್ಲಿ ದಾಳಿ ನಡೆಸಿವೆ. ಶಿವಮೊಗ್ಗ ಎ ಉಪ ವಿಭಾಗದಲ್ಲಿ 39, ಶಿವಮೊಗ್ಗ ಬಿ ಉಪ ವಿಭಾಗದಲ್ಲಿ 38, ಭದ್ರಾವತಿ ಉಪ ವಿಭಾಗದಲ್ಲಿ 72, ಸಾಗರ ಉಪ ವಿಭಾಗದಲ್ಲಿ 21, ಶಿಕಾರಿಪುರ ಉಪ ವಿಭಾಗದಲ್ಲಿ 27, ತೀರ್ಥಹಳ್ಳಿ ಉಪ ವಿವಭಾಗದಲ್ಲಿ 44 ಸೇರಿ ಜಿಲ್ಲೆಯಾದ್ಯಂತ ಒಟ್ಟು 241 ರೌಡಿಗಳ ಮನೆಗಳನ್ನು ತಪಾಸಣೆ ನಡೆಸಿ ರೌಡಿಗಳ ಹಾಜರಾತಿ, ಹಾಲಿ ಮಾಡುತ್ತಿರುವ ಕೆಲಸ, ಮನೆಯಲ್ಲಿ ಮಾದಕ ವಸ್ತು ಹಾಗೂ ಮಾರಕಾಸ್ತ್ರಗಳನ್ನು ಇಟ್ಟುಕೊಂಡಿರುವ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.
ಮುಂಬರುವ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಸಂದರ್ಭದಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಮತ್ತು ಕೋಮು ಸೌಹಾರ್ದತೆಗೆ ದಕ್ಕೆತರುವಂತಹ / ಶಾಂತಿಗೆ ಭಂಗವನ್ನುಂಟು ಮಾಡುವಂತಹ ಕೃತ್ಯಗಳಲ್ಲಿ ಭಾಗಿಯಾಗದಂತೆ ಸೂಕ್ತ ಎಚ್ಚರಿಕೆ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು