ಇತ್ತೀಚಿನ ಸುದ್ದಿ
ಗುಪ್ತಚರ ಇಲಾಖೆ ಸಿಬ್ಬಂದಿ ಹೃದಯಾಘಾತಕ್ಕೆ ಬಲಿ: ಕರ್ತವ್ಯದಲ್ಲಿದ್ದಾಗಲೇ ಕಾಣಿಸಿಕೊಂಡ ಎದೆನೋವು
16/09/2023, 21:14

ಮಂಗಳೂರು(reporterkarnataka.com): ಕರ್ತವ್ಯದಲ್ಲಿದ್ದ ಗುಪ್ತಚರ ಇಲಾಖಾ ಸಿಬ್ಬಂದಿ ಹೃದಯಾಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ಉರ್ವ ಗುಪ್ತಚರ ಇಲಾಖಾ ಕಚೇರಿಯಲ್ಲಿ ಶನಿವಾರ ನಡೆದಿದೆ.
ನಗರದ ಉರ್ವ ಮಾರಿಗುಡಿ ನಿವಾಸಿಯಾದ ರಾಜೇಶ್ ಬಿ.ಯು. (53) ಅವರಿಗೆ ಶನಿವಾರ ಮಧ್ಯಾಹ್ನ ವೇಳೆ ಗುಪ್ತಚರ ಇಲಾಖಾ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಂದರ್ಭ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ರೆಸ್ಟ್ ರೂಮಿಗೆ ತೆರಳಿ ವಿಶ್ರಾಮ ಪಡೆಯುತ್ತಿದ್ದಂತೆ ಅವರು ಕುಸಿದು ಬಿದ್ದಿದ್ದಾರೆ. ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅವರು ಕೊನೆಯುಸಿರೆಳೆದರು.
ರಾಜೇಶ್ ಅವರು 1993ನೇ ಬ್ಯಾಚ್ ಗೆ ಸೇರಿದವರು. ನಿವೃತ್ತಿಗೆ ಇನ್ನೂ 7 ವರ್ಷಗಳ ಕಾಲ ಇತ್ತು.
ಅವರು ಸುರತ್ಕಲ್ ಹಾಗೂ ಪಣಂಬೂರು ಪೊಲೀಸ್ ಠಾಣೆಯಲ್ಲೂ ಕರ್ತವ್ಯ ನಿರ್ವಹಿಸಿದ್ದರು.